ಎಸ್.ಸಿ., ಎಸ್.ಟಿ. ಅನುದಾನ ಬಳಸಿದ ಸರ್ಕಾರದ ಕ್ರಮ ಖಂಡಿಸಿ ಪ್ರತಿಭಟನೆ

KannadaprabhaNewsNetwork |  
Published : Mar 07, 2025, 12:47 AM IST
6 ರೋಣ 3. ಎಸ್.ಸಿ, ಎಸ್.ಟಿ ಕಲ್ಯಾಣಕ್ಕಾಗಿ ಕಾಯ್ದಿರಿಸದಿ ಅನುದಾನವನ್ನು ಪಂಚ ಗ್ಯಾರಂಟಿ ಯೋಜನೆಗಳಿಗೆ ಬಳಸಿದ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ರೋಣ ಬಿಜೆಪಿ  ಎಸ್. ಸಿ ಮೋರ್ಚಾ ವತಿಯಿಂದ ತಹಶಿಲ್ದಾರ  ಕಛೇರಿ ಎದುರು ಪ್ರತಿಭಟನೆ ಜರುಗಿತು. | Kannada Prabha

ಸಾರಾಂಶ

ಎಸ್.ಸಿ .ಎಸ್ ಟಿ. ಜನರ ಕಲ್ಯಾಣಕ್ಕಾಗಿ ಕಾಯ್ದಿರಿಸಿದ ಅನುದಾನವನ್ನು ಗ್ಯಾರಂಟಿ ಯೋಜನೆಗೆ ಬಳಸಿದ ರಾಜ್ಯ ಸರ್ಕಾರ ನಡೆ ಖಂಡಿಸಿ ಗುರುವಾರ ರೋಣದಲ್ಲಿ ಬಿಜೆಪಿ ಎಸ್.ಸಿ. ಮೋರ್ಚಾ ನೇತೃತ್ವದಲ್ಲಿ ತಹಸೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ಜರುಗಿತು. ಬಳಿಕ ತಹಸೀಲ್ದಾರ್‌ ಕಚೇರಿಗೆ ತೆರಳಿ ತಹಸೀಲ್ದಾರ್‌ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ರೋಣ: ಎಸ್.ಸಿ .ಎಸ್ ಟಿ. ಜನರ ಕಲ್ಯಾಣಕ್ಕಾಗಿ ಕಾಯ್ದಿರಿಸಿದ ಅನುದಾನವನ್ನು ಗ್ಯಾರಂಟಿ ಯೋಜನೆಗೆ ಬಳಸಿದ ರಾಜ್ಯ ಸರ್ಕಾರ ನಡೆ ಖಂಡಿಸಿ ಗುರುವಾರ ರೋಣದಲ್ಲಿ ಬಿಜೆಪಿ ಎಸ್.ಸಿ. ಮೋರ್ಚಾ ನೇತೃತ್ವದಲ್ಲಿ ತಹಸೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ಜರುಗಿತು. ಬಳಿಕ ತಹಸೀಲ್ದಾರ್‌ ಕಚೇರಿಗೆ ತೆರಳಿ ತಹಸೀಲ್ದಾರ್‌ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಎಸ್.ಸಿ., ಎಸ್.ಟಿ. ವರ್ಗಗಳ ಅಭಿವೃದ್ಧಿಗಾಗಿ ಇರಿಸಿದ ಇ.ಎಸ್.ಪಿ ಹಾಗೂ ಟಿ.ಎಸ್.ಪಿ. ಅನುದಾನವನ್ನು ಅನುದಾನವನ್ನು ಉದ್ದೇಶಿತ ಯೋಜನೆಗಳಿಗೆ ಬಳಸದೆ, ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗೆ ಬಳಸಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನರಿಗೆ ಅನ್ಯಾಯ ಎಸಗುತ್ತಿದೆ ಎಂದು ಆರೋಪಿಸಿ ಪ್ರತಿಭಟಿಸಿದರು.

ಉಪ ತಹಸೀಲ್ದಾರ್‌ ಜೆ.ಟಿ.ಕೊಪ್ಪದ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಬಿಜೆಪಿ ಹಿರಿಯ ಮುಖಂಡ ಅಶೋಕ ನವಲಗುಂದ, ಶಿವಾನಂದ ಜಿದ್ದಿಬಾಗಿಲ, ಡಿ. ಜಿ. ಕಟ್ಟಿಮನಿ, ಶಿವಕುಮಾರ ಜಾಧವ, ಮಂಜು ಬುರಡಿ, ಮುತ್ತಪ್ಪ ಜೋಗನ್ನವರ, ನಿಂಗಪ್ಪ ಮಾದರ, ಮೈಲಾರಪ್ಪ ಮಾದರ, ಮುತ್ತಪ್ಪ ಪೂಜಾರ, ಮಜೂರಪ್ಪ ಮಾದರ, ಚಂದ್ರು ಹಂಚಿನಾಳ, ಪ್ರಕಾಶ ಜಿಗಳೂರು, ಪ್ರಕಾಶ ಕುರಹಟ್ಟಿ, ರವಿ ಮಾದರ, ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮಲ್ಲು ಮಾದರ, ರೋಣ ಮಂಡಲ ಬಿಜೆಪಿ ಎಸ್. ಸಿ. ಮೋರ್ಚಾ ಅಧ್ಯಕ್ಷ ಭೀಮಪ್ಪ ಮಾದರ, ಪ್ರಧಾನ ಕಾರ್ಯದರ್ಶಿ ಮಂಜು ಛಲವಾದಿ, ಚಂದ್ರು ಲಮಾಣಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌