ಕನ್ನಡಪ್ರಭ ವಾರ್ತೆ ಬೀದರ್
ನಗರದ ಡಾ. ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನೆ ಮಾಡುವ ಮೂಲಕ ಜಿಲ್ಲಾಧಿಕಾರಿಗಳ ಮುಖಾಂತರ ರಾಷ್ಟ್ರಪತಿಗಳಿಗೆ ಬರೆದ ಮನವಿ ಸಲ್ಲಿಸಲಾಯಿತು.
ಈ ಕುರಿತು ರಾಷ್ಟ್ರಪತಿಗಳಿಗೆ ಬರೆದ ಮನವಿಯಲ್ಲಿ ಮೂಡಾ ವಿಚಾರದಲ್ಲಿ ಮುಖ್ಯಮಂತ್ರಿಗಳ ಪಾತ್ರವೇನು ಇರುವುದಿಲ್ಲ ಮತ್ತು ಕರ್ನಾಟಕದ 6.82 ಕೋಟಿ ಕನ್ನಡಿಗರು ಆಯ್ಕೆ ಮಾಡಿರುವಂಥ ಸರ್ಕಾರದ ಮುಖ್ಯಮಂತ್ರಿ ವಿರುದ್ಧ ತರಾತುರಿಯಲ್ಲಿ ಯಾವುದೋ ಖಾಸಗಿ ದೂರಿನನ್ವಯ 24 ಗಂಟೆಗಳ ಒಳಗಾಗಿ ಶೋಕಾಸ್ ನೋಟಿಸ್ ನೀಡಿ, ಎಲ್ಲಾ ಕಾನೂನು ಹಾಗೂ ರಾಜಭವನದ ಘನತೆಗೆ ದಕ್ಕೆಯನ್ನುಂಟು ಮಾಡಿದ್ದಾರೆ ಎಂದು ಆರೋಪಿಸಿದರು.ಮುಡಾ ಪ್ರಕರಣದ ಮುಂಚೆಯೂ ಪ್ರಾಸಿಕ್ಯೂಶನ್ ಅನುಮತಿಗಾಗಿ ಸುಮಾರು ವರ್ಷಗಳಿಂದ ಬಾಕಿಯಿರುವ ದೂರುಗಳನ್ನು ಪರಿಗಣಿಸದೆ, ಕೇವಲ ಖಾಸಗಿ ದೂರಿನ ಮೇಲೆ 24 ಗಂಟೆಯ ಒಳಗೆ ಶೋಕಾಸ್ ನೋಟಿಸ್ ನೀಡಿರುವುದು ಯಾತಕ್ಕೆ ಎಂದು ಪ್ರಶ್ನಿಸಿ ದೂರುದಾರರ ಮೇಲೆ ಸರ್ವೋಚ್ಛ ನ್ಯಾಯಾಲಯವು 25 ಲಕ್ಷ ರು. ದಂಡ ಹಾಕಿರುತ್ತದೆ. ಟಿ.ಜೆ ಅಬ್ರಹಾಂ ಮೇಲೆ ಈಗಾಗಲೇ ಬ್ಲಾಕ್ ಮೇಲ್ ಮಾಡಿರುವ ಪ್ರಕರಣ ಸಹ ಇರುತ್ತವೆ. ಇಂಥ ಖಾಸಗಿ ವ್ಯಕ್ತಿಯ ದೂರಿನ ಮೇಲೆ ಆತುರದ ಕ್ರಮ ತೆಗೆದುಕೊಂಡಿರುವ ರಾಜ್ಯಪಾಲರು ಏಕಪಕ್ಷೀಯ ಹಾಗೂ ದ್ವೇಷದ ರಾಜಕಾರಣ ಎನ್ನುವಂತಿದೆ. ಈ ಕ್ರಮದಿಂದ ಕರ್ನಾಟಕದ 6.82 ಕೋಟಿ ಜನರಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.