16 ರಂದು ಹೇಮಾವತಿ ಕೆನಾಲ್ ಕಾಮಗಾರಿ ವಿರೋಧಿಸಿ ಪ್ರತಿಭಟನೆ

KannadaprabhaNewsNetwork |  
Published : May 14, 2024, 01:07 AM IST
ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ಪ್ರತಿಭಟನೆ | Kannada Prabha

ಸಾರಾಂಶ

ನಮ್ಮ ಜಿಲ್ಲೆಯ ಹೇಮಾವತಿ ನೀರನ್ನು ಮಾಗಡಿಗೆ ತೆಗೆದುಕೊಂಡು ಹೋಗಲು ಆರಂಭಿಸಿರುವ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಯೋಜನೆಯನ್ನು ವಿರೋಧಿಸಿ ಮೇ. 16ರಂದು ಗುಬ್ಬಿ ತಾಲೂಕಿನ ಡಿ. ರಾಂಪುರದ ಬಳಿ ಹೋರಾಟ ಸಮಿತಿಯಿಂದ ಪ್ರತಿಭಟನೆ ಹಮ್ಮಿಕೊಂಡಿದ್ದು, ಜಿಲ್ಲೆ, ತಾಲೂಕಿನ ರೈತರು, ಮಹಿಳೆಯರು, ಮುಖಂಡರು, ಭಾಗವಹಿಸಬೇಕೆಂದು ಜೆಡಿಎಸ್ ಮುಖಂಡ ಕೆ.ಟಿ. ಶಾಂತಕುಮಾರ್ ಮನವಿ ಮಾಡಿದ್ದಾರೆ.

ಕನ್ನಡಪ್ರಭ ವಾರ್ತೆ ತಿಪಟೂರು

ನಮ್ಮ ಜಿಲ್ಲೆಯ ಹೇಮಾವತಿ ನೀರನ್ನು ಮಾಗಡಿಗೆ ತೆಗೆದುಕೊಂಡು ಹೋಗಲು ಆರಂಭಿಸಿರುವ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಯೋಜನೆಯನ್ನು ವಿರೋಧಿಸಿ ಮೇ. 16ರಂದು ಗುಬ್ಬಿ ತಾಲೂಕಿನ ಡಿ. ರಾಂಪುರದ ಬಳಿ ಹೋರಾಟ ಸಮಿತಿಯಿಂದ ಪ್ರತಿಭಟನೆ ಹಮ್ಮಿಕೊಂಡಿದ್ದು, ಜಿಲ್ಲೆ, ತಾಲೂಕಿನ ರೈತರು, ಮಹಿಳೆಯರು, ಮುಖಂಡರು, ಭಾಗವಹಿಸಬೇಕೆಂದು ಜೆಡಿಎಸ್ ಮುಖಂಡ ಕೆ.ಟಿ. ಶಾಂತಕುಮಾರ್ ಮನವಿ ಮಾಡಿದ್ದಾರೆ.ಹೇಮಾವತಿ ಗೋರೂರು ಜಲಾಶಯದಿಂದ 24.5 ಟಿಎಂಸಿ ನೀರು ಹಂಚಿಕೆಯಾಗಿದ್ದು, ಆದರೆ ಈ ನೀರನ್ನು ಪ್ರತಿ ವರ್ಷವೂ ಗೊರೂರು ಜಲಾಶಯದಿಂದ ಪೂರ್ಣ ಪ್ರಮಾಣದಲ್ಲಿ ಹರಿಸದೆ ಜಿಲ್ಲೆಯ ರೈತರು, ಜನ, ಜಾನುವಾರು ಮತ್ತು ಪ್ರಾಣಿ ಪಕ್ಷಿಗಳ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ನಮ್ಮ ಪಾಲಿನ ನೀರನ್ನು ನಮಗೆ ಕೊಡದೆ ಸರ್ಕಾರ ಹಾಗೂ ಸಂಬಂದಪಟ್ಟ ಉಸ್ತುವಾರಿ ಸಚಿವರು ಸಭೆ ನಡೆಸಿ, ನಿಯಮ ಬಾಹಿರವಾಗಿ ಪೈಪ್‌ಲೈನ್ ಮೂಲಕ ಮಾಗಡಿಗೆ ನೀರು ತೆಗೆದುಕೊಂಡು ಹೋಗುವ ನೀರ್ಣಯ ಮಾಡಿದ್ದಾರೆ. ಈ ಕಾಮಗಾರಿಗೆ ಈಗಾಗಲೇ ರೈತರು, ವಿವಿಧ ಸಂಘ ಸಂಸ್ಥೆಗಳ ಮುಖಂಡರು, ರಾಜಕೀಯ ಪಕ್ಷಗಳು, ಮಠಾಧೀಶರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!