ಅಕ್ರಮ ಮಣ್ಣು ಮಾರಾಟದ ವಿರುದ್ಧ ಪ್ರತಿಭಟನೆ

KannadaprabhaNewsNetwork |  
Published : May 04, 2025, 01:35 AM IST
3ಕೆಪಿಎಲ್29 ಕೆರೆಯ ಮಣ್ಣು ಸಂರಕ್ಷಣೆ ಮಾಡುವಂತೆ ಆಗ್ರಹಿಸಿ ಕುಣಿಕೇರಿ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿರುವುದು. | Kannada Prabha

ಸಾರಾಂಶ

ಕುಣಿಕೇರಿ ದೊಡ್ಡ ಕೆರೆ ಹಾಗೂ ಚಿಕ್ಕ ಕೆರೆಯ ಹೂಳು ಮಣ್ಣು ತುಂಬಾ ಫಲವತ್ತತೆ ಇದ್ದು, ರೈತರ ಹೊಲಕ್ಕೆ ಅನುಕೂಲಕರ ಇರುತ್ತದೆ.

ಕೊಪ್ಪಳ: ಕುಣಿಕೇರಿ ಗ್ರಾಮದ ಕೆರೆಯ ಮಣ್ಣನ್ನು ಅಕ್ರಮವಾಗಿ ಮಾರಾಟ ಮಾಡುವುದಕ್ಕೆ ಅವಕಾಶ ನೀಡಿರುವ ಅಧಿಕಾರಿಗಳ ವಿರುದ್ಧ ಕ್ರಮವಾಗಬೇಕು ಮತ್ತು ಮಣ್ಣು ಮಾರಾಟಕ್ಕೆ ನೀಡಿರುವ ಅನುಮತಿ ರದ್ಧು ಮಾಡುವಂತೆ ಆಗ್ರಹಿಸಿ ಕೆರೆಯ ದಡದಲ್ಲಿಯೇ ಕುಣಿಕೇರಿ ಗ್ರಾಮ ನಾಗರಿಕ ವೇದಿಕೆ ಹಾಗೂ ಕರ್ನಾಟಕ ರೈತ ಸಂಘ ಸೇರಿದಂತೆ ಗ್ರಾಮಸ್ಥರು ಶನಿವಾರ ಪ್ರತಿಭಟನೆ ನಡೆಸಿದರು.

ತಾಲೂಕಿನ ಕುಣಿಕೇರಿ ಗ್ರಾಪಂ ವ್ಯಾಪ್ತಿಗೆ ಒಳಪಡುವ ದೊಡ್ಡ ಕೆರೆ ಹಾಗೂ ಸಣ್ಣ ಕೆರೆಯ ಹೂಳು (ಮಣ್ಣು) ಅಕ್ರಮ ಮಾರಾಟ ಮಾಡಲಾಗುತ್ತದೆ. ಇದಕ್ಕೆ ಗ್ರಾಪಂ ಅಧಿಕಾರಿಗಳು ಸಾಥ್ ನೀಡುತ್ತಿದ್ದಾರೆ. ಮಣ್ಣು ತೆಗೆಯುವುದಕ್ಕೆ ಅನುಮತಿ ನೀಡಲಾಗಿದೆ. ಇದರಿಂದಲೇ ಅವ್ಯಾಹತವಾಗಿ ಮಣ್ಣು ತೆಗೆದುಕೊಂಡು ಹೋಗಲಾಗುತ್ತದೆ. ಇದನ್ನು ಕೂಡಲೇ ತಡೆಯುವಂತೆ ಆಗ್ರಹಿಸಿದ್ದಾರೆ.

ಕುಣಿಕೇರಿ ದೊಡ್ಡ ಕೆರೆ ಹಾಗೂ ಚಿಕ್ಕ ಕೆರೆಯ ಹೂಳು ಮಣ್ಣು ತುಂಬಾ ಫಲವತ್ತತೆ ಇದ್ದು, ರೈತರ ಹೊಲಕ್ಕೆ ಅನುಕೂಲಕರ ಇರುತ್ತದೆ. ಇದನ್ನು ರೈತರಿಗೆ ನೀಡದೆ ಅಕ್ರಮವಾಗಿರುವ ಇಟ್ಟಿಗೆ ಬಟ್ಟಿ ದಂಧೆ ಮಾಡುವವರಿಗೆ ನೀಡಲಾಗುತ್ತದೆ. ಆದ ಕಾರಣ ಯಾವುದೇ ಅಕ್ರಮ ಚಟುವಟಿಕೆಗೆ ಫಲವತ್ತತೆಯ ಮಣ್ಣನ್ನು ತೆಗೆದುಕೊಳ್ಳಲು ಅನುಮತಿ ನೀಡಬಾರದೆಂದು ಆಗ್ರಹಿಸಲಾಯಿತು.

ಧರಣಿ ಸತ್ಯಾಗ್ರಹದಲ್ಲಿ ಪ್ರಗತಿಪರ ಹೋರಾಟಗಾರ ಅಲ್ಲಮಪ್ರಭು ಬೆಟ್ಟದೂರು, ಡಿ.ಎಚ್. ಪೂಜಾರ್, ಕೆ.ಬಿ. ಗೋನಾಳ, ಗಾಳೆಪ್ಪ ಮುಂಗೋಲಿ, ಬಸವರಾಜ ನರೆಗಲ್, ಮುದುಕಪ್ಪ ಹೊಸಮನಿ ಸೇರಿದಂತೆ ಗ್ರಾಮದ ಹಿರಿಯರು, ಯುವಕರು, ಮಹಿಳೆಯರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''
ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ