ನರೇಗಾದಲ್ಲಿ ಕೆಲಸ ಮಾಡಿದ ಕೂಲಿಕಾರರಿಗೆ ಕಡಿಮೆ ಕೂಲಿ ಖಂಡಿಸಿ ಪ್ರತಿಭಟನೆ

KannadaprabhaNewsNetwork |  
Published : Nov 26, 2024, 12:45 AM IST
25ಕೆಎಂಎನ್ ಡಿ13 | Kannada Prabha

ಸಾರಾಂಶ

ಜನಸಾಮಾನ್ಯರ ಬಡತನ ನಿವಾರಣೆಗಾಗಿ ಜಾರಿಗೆ ಬಂದ ಉದ್ಯೋಗ ಖಾತರಿ ಯೋಜನೆಯನ್ನು ಅಧಿಕಾರಿಗಳು ಉಳ್ಳವರು ಮತ್ತು ಶ್ರೀಮಂತರ ಸ್ವತ್ತಾಗಿ ಪರಿವರ್ತನೆ ಮಾಡುತ್ತಾ ಬಂದಿದ್ದಾರೆ. ಉದ್ಯೋಗ ಖಾತರಿ ಯೋಜನೆಯಲ್ಲಿ ಗುತ್ತಿಗೆದಾರರಿಗೆ ಹೆಚ್ಚು ಅವಕಾಶ ನೀಡಿ ಸ್ಥಳೀಯ ಕೂಲಿಕಾರರನ್ನು ಕಡೆಗಣಿಸಲಾಗುತ್ತಿದೆ. ಕೆಲಸ ಮಾಡಿದ ಕೂಲಿಕಾರರಿಗೆ ಕಡಿಮೆ ಕೂಲಿ ನೀಡಲಾಗಿದೆ.

ಕನ್ನಡಪ್ರಭ ವಾರ್ತೆ ಹಲಗೂರು

ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಲ್ಲಿ ಕೆಲಸ ಮಾಡಿದ ಕೂಲಿಕಾರರಿಗೆ ಕಡಿಮೆ ಕೂಲಿ ಪಾವತಿ ಮಾಡಲಾಗಿದೆ ಎಂದು ಆರೋಪಿಸಿ ಹುಸ್ಕೂರು ಗ್ರಾಮ ಪಂಚಾಯ್ತಿ ಕಚೇರಿ ಎದುರು ಸೋಮವಾರ ಕೂಲಿಕಾರರು ಪ್ರತಿಭಟನೆ ನಡೆಸಿದರು.

ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯ ಅಧ್ಯಕ್ಷ ಎಂ.ಪುಟ್ಟಮಾದು ಮಾತನಾಡಿ, ಜನಸಾಮಾನ್ಯರ ಬಡತನ ನಿವಾರಣೆಗಾಗಿ ಜಾರಿಗೆ ಬಂದ ಉದ್ಯೋಗ ಖಾತರಿ ಯೋಜನೆಯನ್ನು ಅಧಿಕಾರಿಗಳು ಉಳ್ಳವರು ಮತ್ತು ಶ್ರೀಮಂತರ ಸ್ವತ್ತಾಗಿ ಪರಿವರ್ತನೆ ಮಾಡುತ್ತಾ ಬಂದಿದ್ದಾರೆ ಎಂದು ಅವರು, ಉದ್ಯೋಗ ಖಾತರಿ ಯೋಜನೆಯಲ್ಲಿ ಗುತ್ತಿಗೆದಾರರಿಗೆ ಹೆಚ್ಚು ಅವಕಾಶ ನೀಡಿ ಸ್ಥಳೀಯ ಕೂಲಿಕಾರರನ್ನು ಕಡೆಗಣಿಸಲಾಗುತ್ತಿದೆ. ಕೆಲಸ ಮಾಡಿದ ಕೂಲಿಕಾರರಿಗೆ ಕಡಿಮೆ ಕೂಲಿ ನೀಡಲಾಗಿದೆ ಎಂದು ದೂರಿದರು.ಕೃಷಿ ಕೂಲಿಕಾರರ ಸಂಘದ ತಾಲೂಕು ಅಧ್ಯಕ್ಷ ಬಿ.ಎಂ.ಶಿವಮಲ್ಲಯ್ಯ ಮಾತನಾಡಿ, ಗ್ರಾಪಂ ಪಿಡಿಒ ಮತ್ತು ಸಿಬ್ಬಂದಿ ಜೊತೆಗೂಡಿ ಉದ್ಯೋಗ ಖಾತರಿ ಯೋಜನೆಯಲ್ಲಿ ಕೆಲಸ ಮಾಡಿದ ಕೂಲಿಕಾರರಿಗೆ ಕಡಿಮೆ ಕೂಲಿ ಪಾವತಿಸಿ ಬಡ ಕೂಲಿಕಾರರಿಗೆ ವಂಚಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಧಿಕಾರಿಗಳು ಇಲ್ಲಸಲ್ಲದ ಸಬೂಬು ಹೇಳಿ ಕೆಲಸ ಮಾಡಿದ ಕೂಲಿಕಾರರಿಗೆ ದಿನಕ್ಕೆ 150 ರು. ಕೂಲಿ ಹಣ ಪಾವತಿಸಿರುವುದು ಖಂಡನೀಯ. ಕೂಡಲೇ ಎಲ್ಲಾ ಕೂಲಿಕಾರರಿಗೂ ದಿನಕ್ಕೆ 349 ರು. ಕೂಲಿ ಪಾವತಿಸಬೇಕೆಂದು ಆಗ್ರಹಿಸಿದರು.

ತಾಲೂಕು ಕಾರ್ಯದರ್ಶಿ ಸರೋಜಮ್ಮ ಮಾತನಾಡಿ, ಉದ್ಯೋಗ ಖಾತರಿ ಕಾಯ್ದೆಯಡಿ ಪ್ರತಿ ಕುಟುಂಬಕ್ಕೆ ನೂರು ದಿನಗಳ ಕೆಲಸ ನೀಡಬೇಕೆಂದು ನಿಯಮ ಇದ್ದರೂ ಹುಸ್ಕೂರು ಗ್ರಾಪಂನಲ್ಲಿ ನಿಯಮಾವಳಿಗಳನ್ನು ಗಾಳಿಗೆ ತೂರಿ, ಕೆಲಸ ನೀಡದೇ ವಂಚನೆ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಹಲವು ವರ್ಷಗಳಿಂದ ಕೂಲಿಕಾರರಿಗೆ ಸ್ಪಂದಿಸದೇ ಗುತ್ತಿಗೆದಾರರ ಪರವಾಗಿ ಕೆಲಸ ಮಾಡುತ್ತಿರುವ ಪಿಡಿಒ ರವಿಕುಮಾರ್ ಮತ್ತು ನರೇಗಾ ಎಂಜಿನಿಯರ್ ನಿತಿನ್ ಅವರನ್ನು ಕೂಡಲೇ ಬೇರೆ ಕಡೆಗೆ ವರ್ಗಾಯಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕೃಷಿ ಕೂಲಿಕಾರರ ಸಂಘದ ಹುಸ್ಕೂರು ವಲಯ ಸಮಿತಿ ಅಧ್ಯಕ್ಷ ಮಹದೇವು, ಕೂಲಿಕಾರರ ಸಂಘದ ಮುಖಂಡರಾದ ಶುಭವತಿ, ಮಣಿಯಮ್ಮ, ಸಾಹುಕಯ್ಯ, ಯಾಲಕ್ಕಯ್ಯ ಸೇರಿದಂತೆ ಹಲವರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ