ಕನ್ನಡಪ್ರಭ ವಾರ್ತೆ ಮದ್ದೂರು
ಸಮನ್ವಯ ಸಮಿತಿಯ ಅಂದಾನಿ ಸೋಮನಹಳ್ಳಿ ನೇತೃತ್ವದಲ್ಲಿ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿದ ಕಾರ್ಯಕರ್ತರು ಕಚೇರಿ ಎದುರು ಧರಣಿ ನಡೆಸಿದರು. ಮೀಸಲಾತಿ ವಿರೋಧಿ ಎಂದು ಧಿಕ್ಕಾರ ಕೂಗಿ ಮನುವಾದಿ ಜಿ.ಟಿ.ದೇವೇಗೌಡರನ್ನು ವಿಧಾನಸಭಾಧ್ಯಕ್ಷರು ಶಾಸಕ ಸ್ಥಾನದಿಂದ ವಜಾ ಮಾಡಬೇಕು ಎಂದು ಒತ್ತಾಯಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ದಲಿತ ಪರ ಕಾಳಜಿಯಿಂದ ಸಹಕಾರಿ ಕ್ಷೇತ್ರಗಳಲ್ಲಿ ಪರಿಶಿಷ್ಟರಿಗೆ ನಾಮಿನಿಯಲ್ಲಿ ಮೀಸಲಾತಿ ವಿಧೇಯಕ ಮಂಡನೆ ಮಾಡಿ ಸಹಕಾರಿ ಕ್ಷೇತ್ರಗಳಲ್ಲಿ ಪರಿಶಿಷ್ಟರಿಗೆ ಮೀಸಲಾತಿ ನಿಗದಿ ಮಾಡಿರುವುದು ಸ್ವಾಗತಾರ್ಹ ಕ್ರಮವಾಗಿದೆ ಎಂದರು.ಆದರೆ, ಶಾಸಕ ಜಿ.ಟಿ. ದೇವೇಗೌಡ ಶಾಸನ ಸಭೆಯಲ್ಲಿ ಸಹಕಾರಿ ಕ್ಷೇತ್ರದಲ್ಲಿ ನಾಮಿಯಲ್ಲಿ ಮೀಸಲಾತಿ ನೀಡಿದರೆ ಸಹಕಾರಿ ಸಂಸ್ಥೆಗಳನ್ನು ಮುಚ್ಚ ಬೇಕಾಗುತ್ತದೆ ಎಂದು ಮೀಸಲಾತಿ ವಿಧೇಯಕಕ್ಕೆ ವಿರೋಧ ವ್ಯಕ್ತಪಡಿಸಿರುವುದನ್ನು ಖಂಡಿಸಿದರು.
ಆರೋಗ್ಯ ತಪಾಸಣಾ ಶಿಬಿರಕ್ಕೆ ರಾಜಶೇಖರ್ ಚಾಲನೆ
ತಾಲೂಕಿನ ಹೆಬ್ಬಕವಾಡಿ ಗ್ರಾಮದಲ್ಲಿ ನಡೆದ ಆರೋಗ್ಯ ತಪಾಸಣಾ ಶಿಬಿರವನ್ನು ರೋಟರಿ ಅಧ್ಯಕ್ಷ ಸಿರಿಭೈರವ ರಾಜಶೇಖರ್ ಉದ್ಘಾಟಿಸಿದರು.
ಪ್ಲಾಸ್ಟಿಕ್ ಮುಕ್ತ ಮಂಡ್ಯ ಮಾಡುವ ನಿಟ್ಟಿನಲ್ಲಿ ಹಲವು ಯೋಜನೆ ರೂಪಿಸಿದೆ. ಪ್ರತಿಯೊಬ್ಬರೂ ಆರೋಗ್ಯ ಕಾಪಾಡಿಕೊಳ್ಳುವ ಜೊತೆಗೆ ಪ್ಲಾಸ್ಟಿಕ್ ಮುಕ್ತ ಮಾಡುವ ನಮ್ಮ ಯೋಜನೆಗೆ ಸಹಕಾರ ನೀಡುವಂತೆ ಮನವಿ ಮಾಡಿದರು.
ರೋಟರಿ ಸಂಸ್ಥೆ ಕಾರ್ಯದರ್ಶಿ ಲಕ್ಷ್ಮಿನಾರಾಯಣ್, ಜೋನ್ ಕಾರ್ಯದರ್ಶಿ ಬರ್ನಾಡಪ್ಪ, ಸಮುದಾಯ ಸೇವೆ ಜಿಲ್ಲಾ ಪ್ರತಿನಿಧಿ ಪ್ರಶಾಂತ್ ಸಿ., ಸದಸ್ಯ ರವಿ, ಇನ್ನರ್ವ್ಹೀಲ್ ಅಧ್ಯಕ್ಷ ಸುನಿತಾ, ಕಾರ್ಯದರ್ಶಿ ಅನುಅರುಣ್, ಪುಷ್ಪಲತಾ, ಗ್ರಾಪಂ ಪಿಡಿಒ ಕೃಷ್ಣೇಗೌಡ, ಅಧ್ಯಕ್ಷ ಮಹೇಶ್, ಉಪಾಧ್ಯಕ್ಷೆ ಸಾಕಮ್ಮ, ಸದಸ್ಯರಾದ ಜಗದೀಶ್, ಕೆಂಪಮ್ಮ, ಕೀರ್ತಿಕುಮಾರಿ ಡೇರಿ ಅಧ್ಯಕ್ಷ ನಾಗರಾಜು ಇದ್ದರು.