ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಶಾಶ್ವತ ನೀರಾವರಿ ಸಮಿತಿಯು ಕಳೆದ ಶನಿವಾರ ಬಯಲು ಸೀಮೆಯ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಕೋಲಾರ ಮತ್ತು ಬೆಂಗಳೂರು ಗ್ರಾಮಾಂತರದ ಎಲ್ಲ ಶಾಸಕರನ್ನು ಪಕ್ಷಾತೀತವಾಗಿ ಆಹ್ವಾನಿಸಿದ್ದರೂ ಪಾಲ್ಗೊಳ್ಳಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಮೃದ್ಧಿ ಮಾತ್ರ ಹಾಜರ್ಸಮಿತಿ ಸಂಚಾಲಕ ಆಂಜನೇಯರೆಡ್ಡಿ ಮಾತನಾಡಿ, ಶಾಸಕ ಸಂಮೃದ್ಧಿ ಮಂಜುನಾಥ್ ರನ್ನು ಬಿಟ್ಟರೆ ಬೇರೆ ಯಾವ ಶಾಸಕರು ವಿಧಾನ ಸೌಧದಲ್ಲಿ ಧ್ವನಿ ಎತ್ತಲಿಲ್ಲಾ. ಬಯಲು ಸೀಮೆಯ ಜಿಲ್ಲೆಗಳಿಗೆ ಯಾವುದೇ ಪರ್ಯಾಯ ಯೋಜನೆಗಳ ಬಗ್ಗೆ ಚರ್ಚಿಸದೆ ಕೇವಲ ಬಾರದ ಎತ್ತಿನ ಹೊಳೆ ಯೋಜನೆಯ ಬಗ್ಗೆ ಮಾತನಾಡುತ್ತಾ ಕಾಲ ಕಳೆದರು ಎಂದು ಆರೋಪಿಸಿದರು.
ಒತ್ತಾಯಿಸದಿದ್ದರೆ ಹೋರಾಟ
ವಿಧಾನಸಭೆಯಲ್ಲಿ ಮೂರೂ ಜಿಲ್ಲೆಗಳ ಶಾಸಕರು ಶಾಶ್ವತ ನೀರಾವರಿ ಯೋಜನೆಗಳನ್ನು ರೂಪಿಸಲು ಒತ್ತಾಯಿಸಬೇಕು, ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡುವ ಎಚ್ಚರಿಕೆ ನೀಡಿದರು.ಪ್ರತಿಭಟನೆಯಲ್ಲಿ ಶಾಶ್ವತ ನೀರಾವರಿ ಹೋರಾಟ ಸಮಿತಿಯ ಉಷಾ ಆಂಜನೇಯ ರೆಡ್ಡಿ, ಲಕ್ಷ್ಮೀನಾರಾಯಣರೆಡ್ಡಿ, ಕರ್ನಾಟಕ ಜನಸೇನಾ ರೈತ ಸಂಘದ ಜಿಲ್ಲಾಧ್ಯಕ್ಷೆ ಸುಷ್ಮಾಶ್ರೀನಿವಾಸ್, ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಗೋವಿಂದರೆಡ್ಡಿ, ಭಕ್ತರಹಳ್ಳಿ ಪ್ರತೀಶ್, ರೈತ ಸಂಘದ ಜಿ.ಜಿ.ನಾರಾಯಣಸ್ವಾಮಿ, ಸಿಪಿಐ ಎಂ ನ ಲಕ್ಷ್ಮಯ್ಯ,ಕನ್ನಡ ಸೇನೆಯ ರವಿಕುಮಾರ್, ರಾಮೇಗೌಡ, ತಿಪ್ಪೇನಹಳ್ಳಿನಾರಾಯಣಸ್ವಾಮಿ ಇದ್ದರು.