ಕನ್ನಡಪ್ರಭ ವಾರ್ತೆ ಮೈಸೂರು
ನಗರದ ಕಾಂಗ್ರೆಸ್ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿನ್ನೆ ದೆಹಲಿಯಲ್ಲಿ ಶಾಂತಿಯುತವಾಗಿ ಹೋರಾಟ ಮಾಡುತ್ತಿದ್ದ ವಿದ್ಯಾರ್ಥಿಗಳ ಮೇಲೆ ಅಮಾನವೀಯವಾಗಿ ಲಾಠಿ ಚಾರ್ಜ್ ನಡೆಸಲಾಗಿದೆ. ವಿದ್ಯಾರ್ಥಿಗಳ ಬೆಂಬಲಕ್ಕೆ ನಿಂತ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನು ಪೊಲೀಸರು ವಶಕ್ಕೆ ಪಡೆದು ಅಮಾನವೀಯವಾಗಿ ನಡೆಸಿಕೊಂಡಿದ್ದಾರೆ. ಈ ಘಟನೆಗೆ ಕೇವಲ ಶಿಕ್ಷಣ ಸಚಿವರು ಮಾತ್ರವಲ್ಲದೆ, ಗೃಹ ಸಚಿವ ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಆರ್ಎಸ್ಎಸ್ ಗೂಂಡಾಗಳು:ಪ್ರತಿಭಟನೆ ವೇಳೆ ಸಶಸ್ತ್ರ ಸಿಆರ್ಪಿಎಫ್, ಪೊಲೀಸರ ಹೊರತಾಗಿ, ಸಮವಸ್ತ್ರ ಧರಿಸದ ಹಲವು ವ್ಯಕ್ತಿಗಳು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಕಂಡುಬಂದಿದೆ. ಇವರು ಆರ್ಎಸ್ಎಸ್ ಬೆಂಬಲಿತ ಗೂಂಡಾಗಳೇ ಎಂಬ ಸಂಶಯವಿದ್ದು, ಗೃಹ ಸಚಿವಾಲಯ ತಕ್ಷಣವೇ ಇದರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಪರೀಕ್ಷಾ ಒತ್ತಡ ಮತ್ತು ಅಕ್ರಮಗಳಿಂದಾಗಿ ದೇಶಾದ್ಯಂತ ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ ನಡೆಯುತ್ತಿದೆ. ಕೇಂದ್ರ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ವಾರ್ಷಿಕ ಸುಮಾರು 1.36 ಲಕ್ಷ ಕೋಟಿ ರು. ಬಜೆಟ್ ಮೀಸಲಿಡುತ್ತದೆ. ಆದರೆ, ನೀಟ್ಹಾಗೂ ಖಾಸಗಿ ಕೋಚಿಂಗ್ ಸೆಂಟರ್ ಹೆಸರಿನಲ್ಲಿ ಪೋಷಕರು ಪಾವತಿಸುತ್ತಿರುವ ಕೋಟ್ಯಂತರ ರು. ಹಣ ಸರ್ಕಾರದ ಶಿಕ್ಷಣ ಬಜೆಟ್ ಗಿಂತಲೂ ಹೆಚ್ಚಿದೆ ಎಂದರು.
ಈ ವಿಷಯದಲ್ಲಿ ಕಾಂಗ್ರೆಸ್ ಅರಾಜಕತೆ ಸೃಷ್ಟಿಸುತ್ತಿಲ್ಲ. ಯಾವುದೇ ರಾಜಕೀಯ ಉದ್ದೇಶದಿಂದ ಮಾಡುತ್ತಿರುವ ಹೋರಾಟವಲ್ಲ. ಎನ್ಎಸ್ಯುಐ ಮತ್ತು ಯೂತ್ ಕಾಂಗ್ರೆಸ್ ಮೊದಲ ದಿನದಿಂದಲೂ ಸಂಕಷ್ಟದಲ್ಲಿವ ವಿದ್ಯಾರ್ಥಿ ಕುಟುಂಬಗಳ ಜೊತೆ ನಿಂತಿವೆ. ಈ ವ್ಯವಸ್ಥಿತ ಅಕ್ರಮವನ್ನು ಜನರೆದುರು ತೆರೆದಿಡುತ್ತಿದ್ದೇವೆ. ಕಾಲೇಜುಗಳಿಗೆ ತೆರಳಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಪರೀಕ್ಷೆಗಳ ಸೋಲಿಗೆ ಜೀವ ಕಳೆದುಕೊಳ್ಳಬೇಡಿ, ದೇಶಕ್ಕೆ ನಿಮ್ಮ ಅಗತ್ಯವಿದೆ ಎಂಬ ಕುರಿತು ಜಾಗೃತಿ ಮೂಡಿಸುವುದಾಗಿ ಹೇಳಿದರು.