- ಸ್ಲಂ ಜನಾಂದೋಲನ ಕರ್ನಾಟಕ ರಾಜ್ಯಾಧ್ಯಕ್ಷ ಆನಂದಪ್ಪ ನೇತೃತ್ವದಲ್ಲಿ ಮನವಿ - - -
ಕೇಂದ್ರದ ಸರ್ಕಾರದ ಬೆಲೆ ಏರಿಕೆ, ಜನವಿರೋಧಿ ನೀತಿ ಖಂಡಿಸಿ ಸ್ಲಂ ಜನಾಂದೋಲನ ಕರ್ನಾಟಕ ರಾಜ್ಯ ಮತ್ತು ಜಿಲ್ಲಾ ಘಟಕದಿಂದ ನಗರದಲ್ಲಿ ಪ್ರತಿಭಟಿಸಲಾಯಿತು.
ನಗರದ ಜಿಲ್ಲಾಡಳಿತ ಭವನ ಎದುರು ಸಂಘಟನೆ ನೇತೃತ್ವದಲ್ಲಿ ಪ್ರತಿಭಟಿಸಿದ ಪದಾಧಿಕಾರಿಗಳು, ಸ್ಲಂ ನಿವಾಸಿಗಳು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ ಮುಖಾಂತರ ಪ್ರಧಾನಿಗೆ ಮನವಿ ಅರ್ಪಿಸಲಾಯಿತು.ಸಂಘಟನೆ ರಾಜ್ಯಾಧ್ಯಕ್ಷ ಎಲ್.ಆನಂದಪ್ಪ ಮಾತನಾಡಿ, ಕೇಂದ್ರ ಸರ್ಕಾರವು ಅಡುಗೆ ಅನಿಲ ದರ ₹50, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ₹2 ಹೆಚ್ಚಿಸಿದ್ದು ಖಂಡನೀಯ. ಉದ್ಯೋಗ ಸೃಷ್ಟಿಸುವುದಾಗಿ ಎರಡು ಅವಧಿಗೆ ಅಧಿಕಾರಕ್ಕೆ ಬಂದ ಕೇಂದ್ರ ಸರ್ಕಾರವು ಇರುವ ಉದ್ಯೋಗವನ್ನೇ ಕಡಿತಗೊಳಿಸಿ, ನಿರುದ್ಯೋಗ ಸೃಷ್ಟಿಸುತ್ತಿದೆ ಎಂದು ಆರೋಪಿಸಿದರು.
ಸಂಘಟನೆ ಮುಖಂಡರಾದ ರೇಣುಕಾ ಯಲ್ಲಮ್ಮ, ಜಿ.ಎಚ್. ಮಂಜುಳಾ, ಶಬ್ಬೀರ್ ಸಾಬ್, ಜಮ್ಷಿದಾ ಬಾನು, ಗೀತಮ್ಮ, ಬೀಬಿಜಾನ್, ರೇಷ್ಮಾ, ರಾಜೇಶ್ವರಿ ಇತರರು ಇದ್ದರು.
ದಾವಣಗೆರೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ಸ್ಲಂ ಜನಾಂದೋಲನ ಕರ್ನಾಟಕದಿಂದ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಯಿತು.