ಪಾದಯಾತ್ರೆ ಬ್ಯಾನರ್ ತೆರವು ಖಂಡಿಸಿ ಪ್ರತಿಭಟನೆ

KannadaprabhaNewsNetwork |  
Published : Sep 10, 2026, 01:45 AM IST
ಬಿಜೆಪಿಯ ಬಳ್ಳಾರಿ ಚಲೋ ಪಾದಯಾತ್ರೆಯ ಬ್ಯಾನರ್‌ಗಳು ಹಾಗೂ ಬಾವುಟಗಳನ್ನು ಪಾಲಿಕೆ ಸಿಬ್ಬಂದಿ ತೆರವುಗೊಳಿಸಿರುವುದನ್ನು ಖಂಡಿಸಿ ಮಾಜಿ ಶಾಸಕ ಜಿ.ಸೋಮಶೇಖರ ರೆಡ್ಡಿ ಅವರ ನೇತೃತ್ವದಲ್ಲಿ ಬಳ್ಳಾರಿ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ ಬಳಿ ಬುಧವಾರ ಪ್ರತಿಭಟನೆ ನಡೆಸಲಾಯಿತು.  | Kannada Prabha

ಸಾರಾಂಶ

ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣದ ಬ್ಯಾನರ್ ಕಟ್ಟುವ ವಿಚಾರದಲ್ಲಿ ಜ. 1 ರಂದು ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆಯಾಗಿತ್ತು

ಬಳ್ಳಾರಿ: ಬಿಜೆಪಿಯ ಬಳ್ಳಾರಿ ಚಲೋ ಪಾದಯಾತ್ರೆ ಹಿನ್ನೆಲೆ ನಗರ ಹೊರ ವಲಯದಲ್ಲಿ ಅಳವಡಿಸಲಾಗಿದ್ದ ಪಕ್ಷದ ಬ್ಯಾನರ್‌ಗಳು ಹಾಗೂ ಬಾವುಟಗಳನ್ನು ತೆರವುಗೊಳಿಸಿದ ಮಹಾನಗರ ಪಾಲಿಕೆಯ ಕ್ರಮ ಖಂಡಿಸಿ ಮಾಜಿ ಶಾಸಕ ಜಿ. ಸೋಮಶೇಖರ ರೆಡ್ಡಿ ನೇತೃತ್ವದಲ್ಲಿ ನಗರ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ ಬಳಿ ಬುಧವಾರ ಪ್ರತಿಭಟನೆ ನಡೆಸಲಾಯಿತು.

ಬಿಜೆಪಿ ಪಾದಯಾತ್ರೆಯ ಯಶಸ್ವಿಗೊಳ್ಳಬಾರದು ಎಂಬ ಕಾರಣಕ್ಕಾಗಿಯೇ ಬ್ಯಾನರ್ ಹಾಗೂ ಬಾವುಟ ತೆರವುಗೊಳಿಸಲಾಗುತ್ತಿದೆ. ಪಾಲಿಕೆ ಅಧಿಕಾರಿಗಳು ಕೂಡಲೇ ಬ್ಯಾನರ್ ಅಳವಡಿಕೆಗೆ ಅನುಮತಿ ನೀಡಬೇಕು ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳಕ್ಕೆ ಆಗಮಿಸಿದ ಎಸ್ಪಿ ಸುಮನ್ ಡಿ. ಪನ್ನೇಕರ್ ಹಾಗೂ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ ಬ್ಯಾನರ್ ಅಳವಡಿಕೆಗೆ ಬಳ್ಳಾರಿ ಜಿಲ್ಲೆಯಲ್ಲಿ ನಿಷೇಧಿಸಲಾಗಿದೆ. ಇಷ್ಟಾಗಿಯೂ ಬ್ಯಾನರ್ ಅಳವಡಿಕೆಗೆ ಮುಂದಾಗುವುದು ಸರಿಯಾದ ಕ್ರಮವಲ್ಲ ಎಂದು ಮನವೊಲಿಸಿದರು. ಇದಕ್ಕೆ ಒಪ್ಪದ ಪ್ರತಿಭಟನಾಕಾರರು ನಮಗೆ ಬ್ಯಾನರ್ ಅಳವಡಿಕೆಗೆ ಅವಕಾಶ ನೀಡಬೇಕು ಎಂದು ಪಟ್ಟು ಹಿಡಿದರು. ಕೊನೆಗೆ ಜಿಲ್ಲಾಧಿಕಾರಿಗಳ ಸೂಚನೆಯಂತೆ ಬಾವುಟ ಮಾತ್ರ ಕಟ್ಟಿಕೊಳ್ಳಲು ಅವಕಾಶ ಮಾಡಿಕೊಡಲಾಯಿತು. ಪಾಲಿಕೆ ಸದಸ್ಯ ಗೋವಿಂದರಾಜುಲು, ಶ್ರೀನಿವಾಸ ಮೋತ್ಕರ್, ಎಚ್‌.ಹನುಮಂತಪ್ಪ, ಕೆಎಸ್ ದಿವಾಕರ್, ಎಸ್‌.ಮಲ್ಲನಗೌಡ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಸುಮಾರು ಒಂದುವರೆ ತಾಸು ನಡೆದ ರಸ್ತೆ ತಡೆಯಿಂದ ವಾಹನ ಸಂಚಾರ ನಿಲುಗಡೆಯಾಗಿ ಸಾರ್ವಜನಿಕರು ಪರದಾಡಿದರು.

ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣದ ಬ್ಯಾನರ್ ಕಟ್ಟುವ ವಿಚಾರದಲ್ಲಿ ಜ. 1 ರಂದು ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆಯಾಗಿತ್ತು. ಗಲಾಟೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದ. ಘಟನೆ ಹಿನ್ನೆಲೆ ಜಿಲ್ಲೆಯಲ್ಲಿ ಬ್ಯಾನರ್ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುಮತಿ ಇಲ್ಲದೆ ನಡೆಸಿದ್ದ ಜಾನಪದ ವಿವಿ 8 ಪಿಜಿ ಕೋರ್ಸ್ ರದ್ದು!
ಕಬ್ಬಿಗೆ ಲಾಭದಾಯಕ ದರ ನಿಗದಿಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ: ರುದ್ರಪ್ಪ ಲಮಾಣಿ