ಸಮಾಧಾನ ಮಹೋತ್ಸವ ವಿರುದ್ಧ ಹಿಂಜಾವೇ ಪ್ರತಿಭಟನೆ, ಬಂಧನ

KannadaprabhaNewsNetwork |  
Published : Mar 21, 2026, 02:15 AM IST
20ಜಾಗರಣಾ | Kannada Prabha

ಸಾರಾಂಶ

ಫೆಲೋಶಿಪ್ ಆಫ್ ಉಡುಪಿ ಚರ್ಚಸ್ ವತಿಯಿಂದ ನಗರದ ಮಿಷನ್ ಕಾಂಪೌಂಡಿನಲ್ಲಿ ಶುಕ್ರವಾರ ಆರಂಭವಾದ ತಮಿಳ‍ುನಾಡಿನ ಮೋಹನ್ ಸಿ.ಲಾಝರಸ್ ಅವರ 3 ದಿನಗಳ ಪ್ರವಚನದ ಸಮಾಧಾನ ಮಹೋತ್ಸವದ ವಿರುದ್ಧ ಹಿಂದೂ ಜಾಗರಣಾ ವೇದಿಕೆಯು ಇಲ್ಲಿನ ಗೋವಿಂದದಾಸ ಕಲ್ಯಾಣ ಮಂಟಪದ ಬಳಿ ಪ್ರತಿಭಟನೆ ನಡೆಸಿತು.

ಉಡುಪಿ: ಫೆಲೋಶಿಪ್ ಆಫ್ ಉಡುಪಿ ಚರ್ಚಸ್ ವತಿಯಿಂದ ನಗರದ ಮಿಷನ್ ಕಾಂಪೌಂಡಿನಲ್ಲಿ ಶುಕ್ರವಾರ ಆರಂಭವಾದ ತಮಿಳ‍ುನಾಡಿನ ಮೋಹನ್ ಸಿ.ಲಾಝರಸ್ ಅವರ 3 ದಿನಗಳ ಪ್ರವಚನದ ಸಮಾಧಾನ ಮಹೋತ್ಸವದ ವಿರುದ್ಧ ಹಿಂದೂ ಜಾಗರಣಾ ವೇದಿಕೆಯು ಇಲ್ಲಿನ ಗೋವಿಂದದಾಸ ಕಲ್ಯಾಣ ಮಂಟಪದ ಬಳಿ ಪ್ರತಿಭಟನೆ ನಡೆಸಿತು.

ತಮಿನಳುನಾಡಿನ ಮೋಹನ್‌ ಲಾಝರತ್ ಮೇಲೆ ಈಗಾಗಲೇ ತಮಿಳುನಾಡಿನಲ್ಲಿ ಹಿಂದೂಗಳ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡಿದ ಬಗ್ಗೆ ಅನೇಕ ಪ್ರಕರಣಗಳು ದಾಖಲಾಗಿವೆ. ಆತನ ಕಾರ್ಯಕ್ರಮಗಳ ಹಿಂದೆ ಮತಾಂತರದ ಉದ್ದೇಶವಿದೆ. ಆದ್ದರಿಂದ ಈ ಕಾರ್ಯಕ್ರಮವನ್ನು ಉಡುಪಿಯಲ್ಲಿ ನಡೆಸಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ನಂತರ ಲಾಝರತ್ ವಿರುದ್ಧ, ಆತನ ಕಾರ್ಯಕ್ರಮಕ್ಕೆ ಅವಕಾಶ ನೀಡಿದ ಜಿಲ್ಲಾಡಳಿತ ಮತ್ತು ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗುತ್ತಾ, ಸಮಾಧಾನ ಮಹೋತ್ಸವ ನಡೆಯುವ ಮಿಶನ್ ಕಂಪೌಂಡ್ ಕಡೆಗೆ ಮೆರವಣಿಗೆ ನಡೆಸಿದರು. ಈ ಸಂದರ್ಭದಲ್ಲಿ ಅವರನ್ನು ತಡೆದ ಪೊಲೀಸರು ಬಂಧಿಸಿ, ಮಣಿಪಾಲ ಠಾಣೆಗೆ ಕರೆದೊಯ್ದು ಪ್ರಕರಣ ದಾಖಲಿಸಿ ಬಿಡುಗಡೆ ಮಾಡಿದರು.

ಪ್ರತಿಭಟನೆಯಲ್ಲಿ ಹಿಂದೂ ಜಾಗರಣಾ ವೇದಿಕೆಯ ದಕ್ಷಿಣ ಪ್ರಾಂತ ಪ್ರಮುಖ್ ಶ್ರೀಕಾಂತ ಶೆಟ್ಟಿ, ವಿವಿಧ ಹಿಂದೂ ಸಂಘಟನೆಗಳ ಪ್ರಮುಖರಾದ ಜಿಲ್ಲಾ ಸಂಯೋಜಕ ರಾಜೇಶ್ ಉಚ್ಚಿಲ, ಜಿಲ್ಲಾ ಪ್ರಮುಖರಾದ ರತ್ನಾಕರ ಅಮೀನ್, ಗುರುಪ್ರಸಾದ್ ನಾರಾವಿ, ಮೋಹನ್ ಭಟ್, ತಾರಾ ಸತೀಶ್, ತಾರಾ ಆಚಾರ್ಯ ಮುಂತಾದವರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೈಸಿಯಾ ಘೋಷಣೆ ಕ್ರೈಸ್ತ ಬಂಧುಗಳಿಗೆ ವಿಶ್ವಾಸದ ಅಡಿಪಾಯ: ಬಿಷಪ್ ಜೆರಾಲ್ಡ್ ಲೋಬೊ
ಶರಣರ ತತ್ವಗಳು ಬದುಕಿಗೆ ಪ್ರೇರಣೆ: ಡಾ. ಸವಿತಾ ಸಿದ್ದನೂರ