ಕ್ರೀಡಾಂಗಣ ನೆಲ, ಮಹಡಿ ಹರಾಜು ಖಂಡಿಸಿ ಪ್ರತಿಭಟನೆ

KannadaprabhaNewsNetwork |  
Published : Feb 25, 2025, 12:45 AM IST
ಕ್ಯಾಪ್ಷನ24ಕೆಡಿವಿಜಿ34 ಹರಿಹರ ತಾ. ಕ್ರೀಡಾಂಗಣದ ನೆಲ, ಮಹಡಿ ಹರಾಜು ಪ್ರಕ್ರಿಯೆ ಖಂಡಿಸಿ ದಾವಣಗೆರೆಯ ಅಂಬೇಡ್ಕರ್ ವೃತ್ತದಲ್ಲಿ ಜಯಕರ್ನಾಟಕ ಸಂಘಟನೆಯಿಂದ ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಹರಿಹರ ತಾಲೂಕು ಕ್ರೀಡಾಂಗಣದ ನೆಲ ಮತ್ತು ಮಹಡಿಯ 5 ವಾಣಿಜ್ಯ ಮಳಿಗೆಗಳ ಕರಾರು ಅವಧಿ 2019ಕ್ಕೆ ಮುಗಿದಿದ್ದರೂ ಹರಾಜು ನಡೆಸಿದ್ದನ್ನು ಖಂಡಿಸಿ ಹರಿಹರ ತಾಲೂಕು ಜಯ ಕರ್ನಾಟಕ ಸಂಘಟನೆಯಿಂದ ಸೋಮವಾರ ದಾವಣಗೆರೆಯ ಡಾ.ಅಂಬೇಡ್ಕರ್ ವೃತ್ತದಲ್ಲಿ ಅರಬೆತ್ತಲೆ ಮತ್ತು ಕಣ್ಣಿಗೆ ಕಪ್ಪುಬಟ್ಟೆ ಧರಿಸಿ ಸಾಂಕೇತಿಕ ಪ್ರತಿಭಟನೆ ನಡೆಸಲಾಯಿತು.

ದಾವಣಗೆರೆ: ಹರಿಹರ ತಾಲೂಕು ಕ್ರೀಡಾಂಗಣದ ನೆಲ ಮತ್ತು ಮಹಡಿಯ 5 ವಾಣಿಜ್ಯ ಮಳಿಗೆಗಳ ಕರಾರು ಅವಧಿ 2019ಕ್ಕೆ ಮುಗಿದಿದ್ದರೂ ಹರಾಜು ನಡೆಸಿದ್ದನ್ನು ಖಂಡಿಸಿ ಹರಿಹರ ತಾಲೂಕು ಜಯ ಕರ್ನಾಟಕ ಸಂಘಟನೆಯಿಂದ ಸೋಮವಾರ ದಾವಣಗೆರೆಯ ಡಾ.ಅಂಬೇಡ್ಕರ್ ವೃತ್ತದಲ್ಲಿ ಅರಬೆತ್ತಲೆ ಮತ್ತು ಕಣ್ಣಿಗೆ ಕಪ್ಪುಬಟ್ಟೆ ಧರಿಸಿ ಸಾಂಕೇತಿಕ ಪ್ರತಿಭಟನೆ ನಡೆಸಲಾಯಿತು.

ಅಧ್ಯಕ್ಷ ಎಸ್.ಗೋವಿಂದ ಮಾತನಾಡಿ, ಹರಾಜು ಖಂಡಿಸಿ 141 ದಿನ ಧರಣಿ ನಡೆಸುತ್ತಿದ್ದರೂ ನ್ಯಾಯ ದೊರಕಿಲ್ಲ. ಆದ್ದರಿಂದ ದಾವಣಗೆರೆ ನಗರದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ವಾಣಿಜ್ಯ ಮಳಿಗೆಗಳನ್ನು ಮರುಹರಾಜು ನಡೆಸುವಲ್ಲಿ ಜಿಲ್ಲಾ ಆಡಳಿತ ಹಾಗೂ ಕ್ರೀಡಾ ಇಲಾಖೆ ಅಧಿಕಾರಿಗಳು ವಿಫಲರಾಗಿದ್ದಾರೆ. ಈ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಲು ಆಗ್ರಹಿಸಿದರು.

ಹರಿಹರ ನಗರಸಭೆ ವ್ಯಾಪ್ತಿಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದ ಒಟ್ಟು 50 ಮಳಿಗೆಗಳು ಇವೆ. ಮಳಿಗೆಗಳ ಬಾಡಿಗೆ ಕರಾರು ಅವಧಿ 2019ರಲ್ಲಿ ಪೂರ್ಣಗೊಂಡಿದೆ. ಆದಕಾರಣ ಕೆಲ ಮಳಿಗೆಗಳ ಬಾಡಿಗೆದಾರರು ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇನ್ನುಳಿದ ಮಳಿಗೆ ಬಾಡಿಗೆದಾರರು ಪರವಾನಿಗೆ ಪಡೆಯದೇ ಇರುವುದು ಕಾನೂನು ಬಾಹಿರ. ನಗರಸಭೆ ಪರವಾನಿಗೆ ನವೀಕರಿಸದೇ ಸರ್ಕಾರಿ ಬೊಕ್ಕಸಕ್ಕೆ ನಷ್ಟವಾಗಿದೆ. ಬಹುತೇಕರು ಒಳಬಾಡಿಗೆ ಕೊಟ್ಟು ಬೇರೆ ಮಳಿಗೆ ಬಾಡಿಗೆದಾರರು ಉದ್ದಿಮೆ ನಡೆಸುತ್ತಿದ್ದಾರೆ. ಕ್ರೀಡಾ ಇಲಾಖೆ ನಿರ್ಲಕ್ಷ ಹಾಗೂ ಜಿಲ್ಲಾಡಳಿತ ವಿಫಲತೆ ಖಂಡನೀಯ ಎಂದರು.

ಪ್ರತಿಭಟನೆಯಲ್ಲಿ ಸಂಘಟನೆಯ ಪದಾಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನಕಾಚಲಪತಿ ಜಾತ್ರೆ ಸಜ್ಜುಗೊಂಡ ಕನಕಗಿರಿ
ಕಾರ್ಖಾನೆ ಸಮಸ್ಯೆ ಪರಿಹಾರಕ್ಕೆ ಶೀಘ್ರ ಎಚ್‌ಡಿಕೆ ಭೇಟಿ