ಕನ್ನಡಪ್ರಭ ವಾರ್ತೆ ರಾಯಚೂರು
ಸ್ಥಳೀಯ ಜಿಲ್ಲಾಧಿಕಾರಿ ಕಚೇರಿ ಮುಂದೆ ಹೋರಾಟ ನಡೆಸಿದ ಸಮಿತಿ ಪದಾಧಿಕಾರಿಗಳು, ಸದಸ್ಯರು, ವಿದ್ಯಾರ್ಥಿಗಳು ಬೇಡಿಕೆ ಈಡೇರಿಸಬೇಕು ಎಂದು ಜಿಲ್ಲಾಡಳಿತ ಮುಖಾಂತರ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ನಗರ ಸಂಘಟನಾ ಕಾರ್ಯದರ್ಶಿ ಪಾಂಡು ಮೊರೆ ಪ್ರತಿಭಟನೆ ಉದ್ದೇಶಿಸಿ ಮಾತಾನಾಡಿ, ರಾಜ್ಯ ಸರ್ಕಾರವು ಬಿಎಡ್ ಪ್ರಶಿಕ್ಷಣಾರ್ಥಿಗಳಿಗೆ ಇರುವಂತಹ ಸೌಕರ್ಯಗಳು ಬಂದ್ ಮಾಡಿರುವ ಕಾರಣ, ರಾಜ್ಯದ್ಯಾಂತ ಹಲವು ವಿದ್ಯಾರ್ಥಿಗಳಿಗೆ ಸಮಸ್ಯೆಯುಂಟಾಗಿದೆ. ಎಷ್ಟೋ ಜನ ವಿದ್ಯಾರ್ಥಿಗಳು ಬಿಎಡ್ ಪ್ರಥಮ ವರ್ಷದಲ್ಲಿ ಸರ್ಕಾರದ ಸೀಟು ಸಿಗದ ಕಾರಣ 1 ವರ್ಷ ವ್ಯರ್ಥ ಮಾಡಬಾರದೆಂದು ಸರ್ಕಾರ ನೀಡುತ್ತಿರುವ ಎಸ್ಎಸ್ಪಿ ವಿದ್ಯಾರ್ಥಿ ವೇತನವನ್ನು ನಂಬಿ ಬಿಎಡ್ ಮ್ಯಾನೇಜ್ಮೆಂಟ್ ಪ್ರವೇಶಾತಿ ಪಡೆದಿದ್ದು, ಆದರೆ ಸರ್ಕಾರವು ಮ್ಯಾನೇಜ್ಮೆಂಟ್ ಸೀಟ್ ವಿದ್ಯಾರ್ಥಿಗಳಿಗೆ ದಿಢೀರ್ನೆ ವಿದ್ಯಾರ್ಥಿ ವೇತನ ಮತ್ತು ಹಾಸ್ಟೆಲ್ನಲ್ಲಿ ವಸತಿ ಸೌಕರ್ಯ ಒದಗಿಸುತ್ತಿರುವುದನ್ನು ನಿರಾಕರಿಸುತ್ತಿದ್ದಾರೆ ಎಂದು ಆರೋಪಿಸಿದರು.ಈ ಕೂಡಲೇ ಸಮಸ್ಯೆ ಬಗೆಹರಿಸಲು ಸರ್ಕಾರ ಕ್ರಮ ವಹಿಸಬೇಕು. ಇಲ್ಲವಾದಲ್ಲಿ ಸಂಘಟನೆಯಿಂದ ರಾಜ್ಯದ್ಯಾದಂತ ಬೃಹತ್ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಎಚ್ಚರಿಸಿದರು.