ಕನ್ನಡಪ್ರಭವಾರ್ತೆ ಶ್ರೀರಂಗಪಟ್ಟಣ
ಆಸ್ಪತ್ರೆ ಎದುರು ವಿವಿಧ ಸಂಘಟನೆಗಳ ಮುಖಂಡರು ಜಮಾವಣೆಗೊಂಡು ವೈದರು ಹಾಗೂ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕಳೆದ ಎರಡು ತಿಂಗಳ ಹಿಂದೆ ಇಲ್ಲಿನ ಮುಖ್ಯ ವೈದ್ಯಾಧಿಕಾರಿ ಅವರಿಗೆ ಮನವಿ ಮಾಡಿ, ಆಡಳಿತ ವ್ಯವಸ್ಥೆಯನ್ನು ಸರಿಪಡಿಸುವಂತೆ ಜೊತೆಗೆ ವೃದ್ಧರು, ಮಕ್ಕಳು, ಮಹಿಳಾ ರೋಗಿಗಳನ್ನು ನಿರ್ಲಕ್ಷಿಸುತ್ತಿರುವ ಕೆಲವು ವೈದ್ಯರು ಹಾಗೂ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಲಿಖಿತ ಮನವಿ ಮಾಡಲಾಗಿದೆ ಆದರೂ ಯಾವುದೇ ಪ್ರಯೋಜನವಾಗಿಲ್ಲ. ಎಂದಿನಂತೆ ರೋಗಿಗಳನ್ನು ನಿರ್ಲಕ್ಷಿಸುವ ಪ್ರೌವೃತ್ತಿ ನಡೆಯುತ್ತಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.ಈ ಕೂಡಲೇ ಸರ್ಕಾರ, ಸಂಬಂಧಪಟ್ಟ ಮೇಲಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಇತ್ತ ಗಮನ ಹರಿಸಿ, ಸಾರ್ವಜನಿಕರು ಸೇರಿದಂತೆ ರೋಗಿಗಳಿಗೆ ಸರಿಯಾದ ಚಿಕಿತ್ಸೆ ನೀಡಿದೆ ನಿರ್ಲಕ್ಷ್ಯ ವಹಿಸುತ್ತಿರುವ ವೈದ್ಯರ ವಿರುದ್ಧ ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಆಸ್ಪತ್ರೆಗೆ ಬೀಗ ಜಡಿದು ಉಗ್ರ ಪ್ರತಿಭಟನೆ ನಡೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದರು.
ಕನ್ನಡಪ್ರಭವಾರ್ತೆ ಶ್ರೀರಂಗಪಟ್ಟಣ
ನಂತರ ಹಿರಿಯ ನಿರ್ದೇಶಕ ಜೋಸೈಮನ್ ಮಾತನಾಡಿ, ಪ್ರಸ್ತುತ ಸಮಾಜದಲ್ಲಿ ಸೇವೆ ಅತ್ಯಗತ್ಯವಾಗಿದ್ದು, ದೇಶದಲ್ಲಿ ಬಹಳಷ್ಟು ಮಂದಿ ಅನ್ನ-ಆಹಾರಕ್ಕಾಗಿ ದಿನಗಟ್ಟಲೆ ದುಡಿದರೂ ಅವರ ಬಡತನ ನಿವಾರಣೆಯಾಗುವುದಿಲ್ಲ. ಅಂತಹ ಸಮಯದಲ್ಲಿ ಸಮಾಜಸೇವಕರ ಪಾತ್ರ ಪ್ರಾಮುಖ್ಯತೆ ವಹಿಸುತ್ತದೆ. ಸಂಘ-ಸಂಸ್ಥೆಯಿಂದ ಸಮಾಜ ಸೇವೆ ಮಾಡುವರನ್ನು ಗುರುತಿಸಿ ಪ್ರೋತ್ಸಾಹಿಸಿದರೆ ಇನ್ನಷ್ಟು ಉತ್ಸಾಹ ಅವರಿಗೆ ಬರುತ್ತದೆ ಎಂದರು.