ಜನೌಷಧಿ ಕೇಂದ್ರಗಳ ರದ್ಧತಿ ವಿರುದ್ಧ ಪ್ರತಿಭಟನೆ

KannadaprabhaNewsNetwork |  
Published : May 31, 2025, 12:30 AM IST
ಪೋಟೊ30ಕೆಎಸಟಿ3: ಕುಷ್ಟಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಎದುರು ಬಿಜೆಪಿ ಮಂಡಲದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. | Kannada Prabha

ಸಾರಾಂಶ

ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳನ್ನು ಮುಚ್ಚಲು ರಾಜ್ಯ ಸರ್ಕಾರ ಆದೇಶ ನೀಡಿರುವುದು ಖಂಡನೀಯ

ಕುಷ್ಟಗಿ: ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡದಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಖಂಡಿಸಿ ಪಟ್ಟಣದಲ್ಲಿ ಬಿಜೆಪಿ ಮಂಡಲದಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ತಾಲೂಕಾಧ್ಯಕ್ಷ ಮಹಾಂತೇಶ ಬಾದಾಮಿ ನೇತೃತ್ವದಲ್ಲಿ ಪಟ್ಟಣದ ಸರ್ಕಾರಿ ಆಸ್ಪತ್ರೆ ಎದುರು ಬಿಜೆಪಿಯ ಕಾರ್ಯಕರ್ತರು ಕೈಗೆ ಕಪ್ಪು ಪಟ್ಟಿ ಧರಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗುವ ಮೂಲಕ ಪ್ರತಿಭಟನೆಗೆ ಮುಂದಾದರು.

ಬಿಜೆಪಿ ತಾಲೂಕಾದ್ಯಕ್ಷ ಮಹಾಂತೇಶ ಬಾದಾಮಿ ಮಾತನಾಡಿ, ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳನ್ನು ಮುಚ್ಚಲು ರಾಜ್ಯ ಸರ್ಕಾರ ಆದೇಶ ನೀಡಿರುವುದು ಖಂಡನೀಯ ಎಂದರು.

ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳ ಮೂಲಕ ಅತೀ ಕಡಿಮೆ ದರದಲ್ಲಿ ಔಷಧಿ ಕೊಳ್ಳುತ್ತಿದ್ದ ಲಕ್ಷಾಂತರ ಬಡ ಹಾಗೂ ಮಧ್ಯಮ ವರ್ಗದ ಜನತೆಗೆ ಭಾರಿ ನಷ್ಟವುಂಟಾಗಲಿದೆ. ಖಾಸಗಿ ಔಷಧಿ ಕೇಂದ್ರಗಳಲ್ಲಿ ಸಾವಿರಾರು ಖರ್ಚು ಮಾಡುವ ಮೂಲಕ ಔಷಧ ಖರೀದಿ ಮಾಡಬೇಕಾಗಿ ಬರುತ್ತದೆ. ಇದರಿಂದ ತೊಂದರೆಯಾಗುತ್ತಿದ್ದು ಈ ನಿರ್ಧಾರವನ್ನು ಸರ್ಕಾರ ವಾಪಸ್‌ ಪಡೆಯಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಉಮೇಶ ಯಾಧವ ಮಾತನಾಡಿ, ರಾಜ್ಯ ಸರ್ಕಾರ ಬಡವರಿಗೆ ಅನುಕೂಲವಾಗುವ ಜನೌಷಧಿ ಕೇಂದ್ರದಲ್ಲಿಯೂ ರಾಜಕಾರಣ ಮಾಡುತ್ತಿದ್ದು ಸರಿಯಲ್ಲ ಪಿಎಂ ಜನೌಷಧಿ ಕೇಂದ್ರಗಳನ್ನು ಮುಚ್ಚುವ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ರದ್ದುಗೊಳಿಸಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ಲಾಡಸಾಬ್‌ ಕೊಳ್ಳಿ, ಸುಪ್ರೀತ, ಸುಕುಮುನಿ ಕೊರಡಕೇರಿ, ವಿಜಯ ದೇಸಾಯಿ, ಕುಬೇರ ಬನ್ನಿಗೋಳ, ದ್ಯಾಮಣ್ಣ ಸೇರಿದಂತೆ ಮುಂತಾದವರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಕ್ಕಳಿಗೆ ಶಾಲೆಯಲ್ಲೆ ಸಾಹಿತ್ಯ, ಸಂಸ್ಕೃತಿ ಪರಿಚಯಿಸಿ
ಭತ್ತ ಸಸಿ ನಾಟಿಗೆ ಕಾಲುವೆಗಳಿಗೆ ಭದ್ರಾ ನೀರು ಹರಿಸಿ: ಬಿಜೆಪಿ ರೈತ ಮೋರ್ಚಾ