ಕನ್ನಡಪ್ರಭ ವಾರ್ತೆ ಬೆಳಗಾವಿ
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಮುಸ್ಲಿಂ ಮತಗಳ ಓಲೈಕೆಗಾಗಿ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸಲು ಮುಂದಾಗಿದೆ. ಕಾನೂನು ಬಾಹಿರ ಮತ್ತು ಸಮಾಜ ಘಾತುಕ ಶಕ್ತಿಗಳ ಸದೆಬಡೆದು ಉತ್ತಮ ಕಾನೂನು ಸುವ್ಯವಸ್ಥೆ ಸಮಾಜದಲ್ಲಿ ಸ್ಥಾಪಿಸಬೇಕಾಗಿರುವುದು ಸರ್ಕಾರದ ಕರ್ತವ್ಯ. ಆದರೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅತ್ಯಂತ ಬೇಜವಾಬ್ದಾರಿ ಮತ್ತು ಅಸಂವಿಧಾನಿಕ ನಡೆಯಲ್ಲಿ ನಿರತವಾಗಿದೆ ಎಂದು ಹರಿಹಾಯ್ದರು.
ರೋಹನ ಜವಳಿ ಮಾತನಾಡಿ, ದೇಶ ಸಮಾಜ ರಕ್ಷಿಸಲು ಇರುವ ಪೊಲೀಸರ, ಸೇನೆ ಮೇಲೆಯೆ ದಾಳಿ ಮಾಡುತ್ತಾ ಹೋದರೆ ಸಮಾಜದಲ್ಲಿ ಶಾಂತಿ ನೆಲೆಸಲು ಹೇಗೆ ಸಾಧ್ಯ ? ಎಂದು ಪ್ರಶ್ನಿಸಿದ ಅವರು, ಹಿಂದೂ ಸಮಾಜ ಇದನ್ನು ಖಂಡಿಸುತ್ತದೆ ಎಂದು ಹೇಳಿದರು. ಸತೀಶ ಬಾಚೀಕರ ಮಾತನಾಡಿ, ಮಹಿಳಾ ಸಂಘ, ಯುವಕ ಸಂಘ, ಗಣೇಶೋತ್ಸವ ಮಂಡಳ ಶಾರದೋತ್ಸವ ಮಂಡಳ ಎಲ್ಲರೂ ಎಚ್ಚರ ವಹಿಸುವ ಅವಶ್ಯಕತೆ ಇದೆ. ಹಿಂದೂ ಹಬ್ಬಗಳಿಗೆ ನೂರೆಂಟು ಷರತ್ತು ವಿಧಿಸುವ ಕಾಂಗ್ರೆಸ್ ಸರ್ಕಾರ ಪೊಲೀಸರ ಮೇಲೆ ಹಲ್ಲೆ ಮಾಡುವ ಜಿಹಾದಿಗಳನ್ನು ಮಟ್ಟಹಾಕುವ ಬದಲು ರಕ್ಷಣೆ ಮಾಡಲು ಮೊಕದ್ದಮೆ ಹಿಂತೆಗೆದುಕೊಳ್ಳುವ ದುಷ್ಟ ನಿರ್ಧಾರ ಖಂಡಿಸುತ್ತೇವೆ ಎಂದು ಹೇಳಿದರು.ಅಗ್ರಾನಿ ದಮ್ಮಣಿಗಿ ಮಾತನಾಡಿ, ಈ ರೀತಿ ತುಷ್ಟೀಕರಣ ನೀತಿ, ವಕ್ಫ್ ಮಂಡಳಿಯಿಂದ ರೈತರ ಜಮೀನನ್ನು ತಮ್ಮದು ಎಂದು ನೋಟಿಸ್ ಕಳಿಸುವ ನೀಚ ಕೃತ್ಯ ಖಂಡಿಸಿ ರೈತರೊಂದಿಗೆ ಎಲ್ಲ ಸಮಾಜದವರು ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.