ರಟ್ಟೀಹಳ್ಳಿ: ಅಮಾಯಕ ಬಾಂಗ್ಲಾದೇಶದ ಅಲ್ಪಸಂಖ್ಯಾತ ಹಿಂದೂಗಳ ಕಗ್ಗೋಲೆ ಹಾಗೂ ದಾಳಿಗಳನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಬಜರಂಗದಳದ ಕಾರ್ಯಕರ್ತರು ಮಹಾಲಕ್ಷ್ಮೀ ವೃತ್ತದಲ್ಲಿ ರಸ್ತೆ ತಡೆ ನಡೆಸಿ ವ್ಯಕ್ತ ಪಡಿಸಿದರು.
ಭಾರತ, ನೇಪಾಳ ಹಾಗೂ ಇನ್ನೂ ಅನೇಕ ದೇಶದ ಹಿಂದೂಗಳು ಘಟನೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದರೂ ಅಲ್ಲಿನ ಹಿಂದೂಗಳ ಮೇಲಾಗುತ್ತಿರುವು ಹಿಂಸಾಚಾರ ಮುಂದುವರಿಯುತ್ತಿದೆ. ಅಲ್ಲಿನ ಸರಕಾರದ ಕುಮ್ಮಕ್ಕಿನಿಂದಲೇ ಹತ್ಯೆಗಳು ನಡೆಯುತ್ತಿವೆ. ಬಾಂಗ್ಲಾ ಸರಕಾರ ಹಿಂದೂಗಳನ್ನು ಬೇಕಾಬಿಟ್ಟಿಯಾಗಿ ನಡೆಸಿಕೊಳ್ಳುತ್ತಿರುವುದು ಅತ್ಯಂತ ಖಂಡನೀಯ. ದೇಶಾದ್ಯಂತ ವಿಶ್ವ ಹಿಂದೂ ಪರಿಷತ್ ಬಜರಂಗದಳದ ಸಾವಿರಾರು ಕಾರ್ಯಕರ್ತರು ಹಾಗೂ ವಿವಿಧ ಹಿಂದೂ ಸಂಘಟನೆಗಳು ಪ್ರತಿಭಟಿಸುತ್ತಿವೆ. ಬುದ್ಧಿ ಜೀವಿಗಳು ಬಾಯಿ ಮುಚ್ಚಿಕೊಂಡಿರುವುದು ಅವರ ದೇಶಾಭಿಮಾನಕ್ಕೆ ಹಿಡಿದ ಕೈ ಗನ್ನಡಿಯಾಗಿದೆ ಎಂದು ಅಸಮಾಧಾನ ವ್ಯಕ್ತ ಪಡಿಸಿದರು.
ಬಿಜೆಪಿ ತಾಲೂಕಾಧ್ಯಕ್ಷ ದೇವರಾಜ ನಾಗಣ್ಣನವರ ಮಾತನಾಡಿ, ಬಾಂಗ್ಲಾ ದೇಶದಲ್ಲಿನ ಹಿಂದೂಗಳ ಅಮಾನುಷ ಹತ್ಯೆ ಹಾಗೂ ದೈರ್ಜನ್ಯ ಪ್ರಕರಣಗಳು ನಿಲ್ಲದಿರುವುದು ಅತ್ಯಂತ ಖಂಡನೀಯ. ಬಾಂಗ್ಲಾ ರಾಜಕಾರಣಿಗಳು ಭಾರತ ಹಾಗೂ ಹಿಂದೂಗಳ ಮೇಲೆ ನಿರಂತರ ಕತ್ತಿ ಮಸಿಯುತ್ತಿದ್ದಾರೆ. ಅಲ್ಲಿನ ರಾಜಕಾರಣಿಗಳ ಕುಮ್ಮಕ್ಕಿನಿಂದಲೇ ಹತ್ಯೆಗಳು ನಡೆಯುತ್ತಿವೆ. ಭಾರತ ಸರಕಾರ ಮಧ್ಯ ಪ್ರವೇಶಿಸಿ ಹಿಂಸಾಚಾರ ತಡೆಯಬೇಕು ಎಂದು ಆಗ್ರಹಿಸಿದರು.ಸರ್ವ ಜನಾಂಗದ ಶಾಂತಿ ತೋಟವಾಗಿರುವ ಭಾರತವನ್ನು ನಾಶ ಮಾಡಲು ಹೋರಾಟಿರುವ ಶತ್ರು ರಾಷ್ಟ್ರಗಳ ಕುತಂತ್ರ ಎಂದಿಗೂ ಫಲಿಸುವುದಿಲ್ಲ. ಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ದೇಶ ಬಲಿಷ್ಠವಾಗಿ 140 ಕೋಟಿ ಹಿಂದುಗಳು ಶಾಂತಿ ಸೌಹಾರ್ದದಿಂದ ಅತ್ಯಂತ ನೆಮ್ಮದಿ ಜೀವನ ನಡೆಸುತ್ತಿರುವುದು ನಮಗೆ ಹೆಮ್ಮೆ. ಪರ ದೇಶದಲ್ಲಿರುವ ಹಿಂದೂಗಳು ಶಾಂತಿ ನೆಮ್ಮದಿಯಿಂದ ಜೀವನ ನಡೆಸುವಂತ ದಿಟ್ಟ ಕ್ರಮಗಳನ್ನು ಅಲ್ಲಿನ ಸರಕಾರ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.