ಮಾದನಬಾವಿ ಗೋಶಾಲೆಯ ಯಡವಟ್ಟು ಖಂಡಿಸಿ ಪ್ರತಿಭಟನೆ

KannadaprabhaNewsNetwork |  
Published : Jun 01, 2025, 03:24 AM IST
31ಡಿಡಬ್ಲೂಡಿ9ಮಾದನಬಾವಿಯಲ್ಲಿನ ಸರ್ಕಾರಿ ಗೋ ಶಾಲೆಯ ದಯನೀಯ ಸ್ಥಿತಿ ಖಂಡಿಸಿ ವಿಶ್ವ ಹಿಂದು ಪರಿಷತ್ ಹಾಗೂ ಬಜರಂಗ ದಳ ಕಾರ್ಯಕರ್ತರು ನಗರದ ಪಶು ಸಂಗೋಪನೆ ಇಲಾಖೆ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಅನಾರೋಗ್ಯದಿಂದ ಮೃತಪಟ್ಟ ಗೋವುಗಳ ಅಂತ್ಯಕ್ರಿಯೆ ಮಾಡದೆ 4 ಮತ್ತು 5 ದಿನಗಳ ಕಾಲ ಅದೇ ಜಾಗದಲ್ಲಿ ಬಿಡುತ್ತಾರೆ.

ಧಾರವಾಡ: ತಾಲೂಕಿನ ಮಾದನಬಾವಿಯಲ್ಲಿನ ಸರ್ಕಾರಿ ಗೋ ಶಾಲೆಯ ದಯನೀಯ ಸ್ಥಿತಿ ಖಂಡಿಸಿ ವಿಶ್ವ ಹಿಂದು ಪರಿಷತ್ ಹಾಗೂ ಬಜರಂಗ ದಳ ಕಾರ್ಯಕರ್ತರು ನಗರದ ಪಶು ಸಂಗೋಪನೆ ಇಲಾಖೆ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು.

ಸಂಘಟನೆಯ ಕಾರ್ಯಕರ್ತರು ತಮ್ಮ ಪ್ರಾಣ ಪಣಕ್ಕಿಟ್ಟು ಅಕ್ರಮ ಗೋ ಸಾಗಣೆ ತಡೆದು ಗೋವುಗಳನ್ನು ಗೋ ಶಾಲೆಗೆ ಕಳುಹಿಸುತ್ತಾರೆ. ಆದರೆ ಗೋ ಶಾಲೆಯಲ್ಲೇ ಅವುಗಳು ನರಳಿ ನರಳಿ ಸಾಯುವಂತಹ ಸ್ಥಿತಿ ಉದ್ಭವಿಸಿದೆ. ಈ ವಿಷಯವಾಗಿ ಹಲವಾರು ಬಾರಿ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿಪತ್ರ ಸಲ್ಲಿಸಿದರೂ ಸೂಕ್ತ ಸ್ಪಂದನೆ ಸಿಕ್ಕಿಲ್ಲ ಎಂದು ದೂರಿದರು.

ಗೋ ಶಾಲೆಯಲ್ಲಿ ಗೋವುಗಳಿಗೆ ನಿಲ್ಲಲು ಶೆಡ್‌ನಲ್ಲಿ ಜಾಗದ ಕೊರತೆ ಇದೆ. ಶೆಡ್ ಬಹಳ ಎತ್ತರಕ್ಕೆ ನಿರ್ಮಿಸಿದ್ದರಿಂದ ಮಳೆ ನೀರು ಗೋವುಗಳಿಗೆ ತಾಕುವುದು, ಕುಡಿಯುವ ನೀರು, ಉತ್ತಮ ಮೇವಿನ ಕೊರತೆ ಕಾಡುತ್ತಿದೆ. ಆರೋಗ್ಯದ ನಿರ್ಲಕ್ಷ್ಯ ವಹಿಸುತ್ತಿರುವ ಅಧಿಕಾರಿಗಳಿಗೆ ಔಷಧಿಗಳ ಕೊರತೆ ಸಹ ಉಂಟಾಗಿದೆ. ಇವೆಲ್ಲವನ್ನೂ ಕೂಡಲೇ ಸರಿಪಡಿಸಬೇಕು ಎಂದು ಆಗ್ರಹಿಸಿದರು.

ಅನಾರೋಗ್ಯದಿಂದ ಮೃತಪಟ್ಟ ಗೋವುಗಳ ಅಂತ್ಯಕ್ರಿಯೆ ಮಾಡದೆ 4 ಮತ್ತು 5 ದಿನಗಳ ಕಾಲ ಅದೇ ಜಾಗದಲ್ಲಿ ಬಿಡುತ್ತಾರೆ. ಅಂತ್ಯಕ್ರಿಯೆಗೆ ತೋಡಿದ ಗುಂಡಿಯನ್ನು ಸರಿಯಾಗಿ ಮುಚ್ಚದ ಕಾರಣ ಗೋವುಗಳನ್ನು ನಾಯಿ, ಇತರ ಪ್ರಾಣಿಗಳು ತಿನ್ನುವಂತಾಗಿದೆ. ಸರ್ಕಾರಿ ಗೋ ಶಾಲೆಯಲ್ಲಿ ಇಷ್ಟೆಲ್ಲ ಅವಾಂತರಗಳಿದ್ದರೂ ಅಧಿಕಾರಿಗಳು ಸುಧಾರಣೆಗೆ ಮುಂದಾಗುತ್ತಿಲ್ಲ. ಕೂಡಲೇ ವ್ಯವಸ್ಥೆ ಸರಿಪಡಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ನಂತರ ಪಶು ಸಂಗೋಪನಾ ಅಧಿಕಾರಿಗಳ ಮೂಲಕ ಜಿಲ್ಲಾಧಿಕಾರಿ ಹಾಗೂ ಪಶು ಸಂಗೋಪನಾ ಇಲಾಖೆ ಮುಖ್ಯ ಕಾರ್ಯದರ್ಶಿಗೆ ಮನವಿ ರವಾನಿಸಿದರು.

ಬಜರಂಗದಳ ಸಂಚಾಲಕ ಶಿವಾನಂದ ಸತ್ತಿಗೇರಿ, ವಿಎಚ್‌ಪಿ ಕಾರ್ಯದಶಿರ್ ಅನುದೀಪ ಕುಲಕಣಿರ್, ಉಪಾಧ್ಯಕ್ಷ ಮಹೇಶ ಪಾಟೀಲ, ಡಾ.ಮಂಜುನಾಥ್, ಸಿದ್ದು ಹಿರೇಮಠ, ಸುರೇಶ ಭಜಂತ್ರಿ, ಸೋಮಶೇಖರ ಚನ್ನಶೆಟ್ಟಿ, ಬಜರಂಗ ದಳ ಹಾಗೂ ವಿಶ್ವ ಹಿಂದು ಪರಿಷದ್ ಕಾರ್ಯಕರ್ತರು, ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪುನೀತರಾಜಕುಮಾರ ಪುತ್ಥಳಿ ಅನಾವರಣ
ಬೆಂಗಳೂರು ನಗರದಲ್ಲಿ ಮತ್ತೊಂದು ಮೇಲ್ಸೇತುವೆ ನಿರ್ಮಾಣ