ಜನೌಷಧಿ ಕೇಂದ್ರ ತೆರವು ಆದೇಶ ಖಂಡಿಸಿ ಪ್ರತಿಭಟನೆ

KannadaprabhaNewsNetwork |  
Published : May 31, 2025, 01:36 AM ISTUpdated : May 31, 2025, 01:37 AM IST
ಫೋಟೊಪೈಲ್-೩೦ಎಸ್ಡಿಪಿ೫- ಸಿದ್ದಾಪುರದಲ್ಲಿ ಬಿಜೆಪಿ ಮಂಡಲದ ವತಿಯಿಂದ ಸರ್ಕಾರಿ ಆಸ್ಪತ್ರೆಯೆದುರು ಮೌನ ಪ್ರತಿಭಟನೆ ನಡೆಸಲಾಯಿತು. | Kannada Prabha

ಸಾರಾಂಶ

ಧಾನ ಮಂತ್ರಿ ನರೇಂದ್ರ ಮೋದಿಜಿ ಕೇಂದ್ರ ಸರ್ಕಾರ ಸಾರ್ವಜನಿಕರಿಗೆ ಅತಿ ಕಡಿಮೆ ದರದಲ್ಲಿ ಔಷಧಗಳು ಸಿಗಬೇಕು

ಸಿದ್ದಾಪುರ: ರಾಜ್ಯ ಸರ್ಕಾರ ಭಾರತೀಯ ಜನೌಷಧಿ ಕೇಂದ್ರವನ್ನು ಸರ್ಕಾರಿ ಆಸ್ಪತ್ರೆಗಳಿಂದ ತೆರವುಗೊಳಿಸುವ ಆದೇಶ ನೀಡಿದ ಹಿನ್ನೆಲೆಯಲ್ಲಿ ತಾಲೂಕು ಬಿಜೆಪಿ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಎದುರು ಮೌನ ಪ್ರತಿಭಟನೆ ಹಮ್ಮಿಕೊಂಡಿತ್ತು.ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ಜಿ.ನಾಯ್ಕ ಹಣಜೀಬೈಲ್ ಮಾತನಾಡಿ, ಇಂದು ನಾವು ಬಿಜೆಪಿ ಪದಾಧಿಕಾರಿಗಳ ಹಾಗೂ ಪ್ರಮುಖರು ಸೇರಿ ತಾಲೂಕು ಆಸ್ಪತ್ರೆ ಹತ್ತಿರ ಮೌನ ಪ್ರತಿಭಟನೆ ಮಾಡುತ್ತಿದ್ದೇವೆ. ಈ ವಿಚಾರವನ್ನು ಗಮನಕ್ಕೆ ತರದೇ ಇದ್ದಲ್ಲಿ ಇವರು ಯಾವ ಕಾರಣಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದಾರೆ ಎನ್ನುವುದು ಸಾರ್ವಜನಿಕರಿಗೆ ಗೊತ್ತಾಗದೇ ಇರಬಹುದು ಎಂಬ ಕಾರಣಕ್ಕಾಗಿ ೩-೪ ಜನ ಈ ವಿಷಯದ ಕುರಿತು ಮಾತನಾಡುತ್ತಿದ್ದೇವೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ ಕೇಂದ್ರ ಸರ್ಕಾರ ಸಾರ್ವಜನಿಕರಿಗೆ ಅತಿ ಕಡಿಮೆ ದರದಲ್ಲಿ ಔಷಧಗಳು ಸಿಗಬೇಕು ಎನ್ನುವ ಉದ್ದೇಶವನ್ನು ಇಟ್ಟುಕೊಂಡು ಭಾರತೀಯ ಜನೌಷಧಿ ಕೇಂದ್ರಗಳನ್ನು ಸ್ಥಾಪನೆ ಮಾಡಿದೆ. ಕೇಂದ್ರ ಸರ್ಕಾರ ನೇರವಾಗಿ ಮಾಡಲು ಬರುವುದಿಲ್ಲ. ರಾಜ್ಯದ ಯಾವುದೇ ಯೋಜನೆಗಳು ಜಾರಿ ಮಾಡಬೇಕಾದರೂ ರಾಜ್ಯ ಸರ್ಕಾರದ ಸಹಕಾರದೊಂದಿಗೆ ಮಾಡಬೇಕಾಗುತ್ತದೆ. ರಾಜ್ಯ ಸರ್ಕಾರ ಬೇರೆ ವಿಚಾರವನ್ನು ಹಾಕಿ ಈ ಜನ ಔಷಧಿ ಕೇಂದ್ರಗಳನ್ನು ಮುಚ್ಚಲು ಮುಂದಾಗಿದೆ. ಇದನ್ನು ಬಿಜೆಪಿ ವಿರೋಧಿಸುತ್ತದೆ. ರಾಜಕೀಯವನ್ನು ನಾವು ಚುನಾವಣೆಯಲ್ಲಿ ಮಾಡಬಹುದೇ ವಿನಃ ಜನಸಾಮಾನ್ಯರಿಗೆ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ತಲುಪುವಂತಹ ಔಷಧೀಯ ವಿಚಾರದಲ್ಲಿ ಮಾಡುವುದು ಖಂಡನೀಯ ಎಂದರು.

ಬಿಜೆಪಿ ರಾಜ್ಯ ಶಿಕ್ಷಣ ಪ್ರಕೋಷ್ಠದ ಪ್ರಮುಖ ರವಿ ಹೆಗಡೆ ಹೂವಿನ ಮನೆ ಮಾತನಾಡಿ, ಕಾಂಗ್ರೆಸ್ ನೇತೃದ ಕರ್ನಾಟಕ ರಾಜ್ಯ ಸರ್ಕಾರ ಯಾವುದೇ ನಿಖರವಾದ ಕಾರಣಗಳಿಲ್ಲದೇ ಕೇವಲ ಒಳ ಒಪ್ಪಂದದ ಹುನ್ನಾರದಿಂದ ಭಾರತೀಯ ಜನೌಷಧಿ ಕೇಂದ್ರ ಮುಚ್ಚುವ ತೀರ್ಮಾನ ತೆಗೆದುಕೊಂಡಿದೆ ಅಂತಲೇ ಹೇಳಬೇಕು. ತೆಗೆದುಕೊಂಡಿರುವ ಈ ನಿರ್ಣಯ ಖಂಡನೀಯ ಮತ್ತು ಇದು ಜನಪರವಾಗಿಲ್ಲ ಎಂಬುದು ಮೇಲ್ನೋಟಕ್ಕೆ ತೋರಿಸುತ್ತದೆ. ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರಾಗಿ ಮತ್ತೊಮ್ಮೆ ಆಗ್ರಪಡಿಸುತ್ತೇವೆ. ತಮ್ಮ ನಿರ್ಣಯವನ್ನು ವಾಪಸ್ ತೆಗೆದುಕೊಳ್ಳಿ. ಬಡ ರೋಗಿಗಳ ಪರವಾಗಿ ನಿಲ್ಲುವಂತಹ ನಿಶ್ಚಿತವಾಗಿ ಮಾಡಿ ಎನ್ನುವ ಆಗ್ರಹವನ್ನು ಈ ಪ್ರತಿಭಟನೆಯ ಮೂಲಕ ಮಾಡುತ್ತಿದ್ದೇವೆ ಎಂದರು.

ಬಿಜೆಪಿ ಸಿದ್ದಾಪುರ ತಾಲೂಕು ಘಟಕದ ಅಧ್ಯಕ್ಷ ತಿಮ್ಮಪ್ಪ ಮಡಿವಾಳ ಮಾತನಾಡಿ, ಈ ಆದೇಶವನ್ನು ಕೂಡಲೇ ಹಿಂಪಡೆಯಬೇಕು. ಸರ್ಕಾರಿ ಆಸ್ಪತ್ರೆಯ ಒಳಗಡೆ ಜನೌಷಧಿ ಕೇಂದ್ರಕ್ಕೆ ಅವಕಾಶ ಮಾಡಿಕೊಡದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಹೋರಾಟವನ್ನು ಮಾಡುತ್ತೇವೆ ಎಂದು ಮಾಧ್ಯಮದ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ಕೊಡುತ್ತಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ಗುರುರಾಜ ಶಾನಭಾಗ, ಎಸ್.ಕೆ. ಮೇಸ್ತ, ಸುರೇಶ ನಾಯ್ಕ ಬಾಲಿಕೊಪ್ಪ, ನಂದನ ಬರ‍್ಕರ, ವಿಜಯೇಂದ್ರ ಗೌಡರ್, ರವಿಕುಮಾರ ನಾಯ್ಕ, ತೋಟಪ್ಪ ನಾಯ್ಕ,ಮಂಜುನಾಥ ಭಟ್ಟ, ವಿನಾಯಕ ಹೆಗಡೆ ಮುಂತಾದವರಿದ್ದರು.

ಸಿದ್ದಾಪುರದಲ್ಲಿ ಬಿಜೆಪಿ ಮಂಡಲದಿಂದ ಸರ್ಕಾರಿ ಆಸ್ಪತ್ರೆಯೆದುರು ಮೌನ ಪ್ರತಿಭಟನೆ ನಡೆಸಲಾಯಿತು.

PREV

Recommended Stories

ವಿಶ್ವಾದ್ಯಂತ ಒಂದೇ ದಿನ ಕಾಂತಾರ ಚಾಪ್ಟರ್ 1 ಬಿಡುಗಡೆ
ಈರುಳ್ಳಿ, ಹೂ, ಪಚ್ಚ ಬಾಳೆ ಬೆಲೆ ಧರೆಗೆ!