ತುಟ್ಟಿ ಭತ್ಯೆ ನೀತಿ ಪರಿಷ್ಕರಣೆ: ಕೇಂದ್ರ ಸಚಿವೆ ನಿರ್ಮಲಾ ವಿರುದ್ಧ ಕಪ್ಪುಪಟ್ಟಿ ಧರಿಸಿ ಹೋರಾಟ

KannadaprabhaNewsNetwork |  
Published : Mar 26, 2026, 01:30 AM IST
ತುಟ್ಟಿ ಭತ್ಯ ನಿಲ್ಲಿಸುವುದನ್ನು ಖಂಡಿಸಿ ಜಿಲ್ಲಾ ನಿವೃತ್ತ ಸರ್ಕಾರಿ ನೌಕರರ ಮೌನ ಪ್ರತಿಭಟನೆ | Kannada Prabha

ಸಾರಾಂಶ

ಕೇಂದ್ರ ಸರ್ಕಾರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಿವೃತ್ತ ನೌಕರರಿಗೆ ಹಾಗೂ ಕುಟುಂಬ ಪಿಂಚಣಿದಾರರಿಗೆ ಸಂಬಂಧಪಟ್ಟಂತೆ, ಮುಂದಿನ ದಿನಗಳಲ್ಲಿ ನಿವೃತ್ತಿ ವೇತನ ಮತ್ತು ಕುಟುಂಬ ಪಿಂಚಣಿಯನ್ನು ಪರಿಷ್ಕರಣೆ ಮಾಡಲು ಹಾಗೂ ವಾರ್ಷಿಕವಾಗಿ ನೀಡುತ್ತಿದ್ದ ತುಟ್ಟಿ ಭತ್ಯೆಯನ್ನು ನೀಡಲು ಸಾಧ್ಯವಾಗುವುದಿಲ್ಲ ಎಂದು ನೀಡಿರುವ ಹೇಳಿಕೆಯನ್ನು ಖಂಡಿಸಿ ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಪದಾಧಿಕಾರಿಗಳು, ಸದಸ್ಯರು ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಿದರು.

- ಕುಟುಂಬ ಪಿಂಚಣಿ ನೀತಿ ಸಹ ಪರಿಷ್ಕರಿಸುವುದಾಗಿ ಕೇಂದ್ರ ವಿತ್ತ ಸಚಿವೆ ಹೇಳಿಕೆ

- ಖಂಡಿಸಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯಿಂದ ಪ್ರತಿಭಟನೆಕನ್ನಡಪ್ರಭ ವಾರ್ತೆ ಚಾಮರಾಜನಗರ ಕೇಂದ್ರ ಸರ್ಕಾರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಿವೃತ್ತ ನೌಕರರಿಗೆ ಹಾಗೂ ಕುಟುಂಬ ಪಿಂಚಣಿದಾರರಿಗೆ ಸಂಬಂಧಪಟ್ಟಂತೆ, ಮುಂದಿನ ದಿನಗಳಲ್ಲಿ ನಿವೃತ್ತಿ ವೇತನ ಮತ್ತು ಕುಟುಂಬ ಪಿಂಚಣಿಯನ್ನು ಪರಿಷ್ಕರಣೆ ಮಾಡಲು ಹಾಗೂ ವಾರ್ಷಿಕವಾಗಿ ನೀಡುತ್ತಿದ್ದ ತುಟ್ಟಿ ಭತ್ಯೆಯನ್ನು ನೀಡಲು ಸಾಧ್ಯವಾಗುವುದಿಲ್ಲ ಎಂದು ನೀಡಿರುವ ಹೇಳಿಕೆಯನ್ನು ಖಂಡಿಸಿ ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಪದಾಧಿಕಾರಿಗಳು, ಸದಸ್ಯರು ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಿದರು.ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಸಮಾವೇಶಗೊಂಡ ಪ್ರತಿಭಟನಾನಿರತರು ತೋಳಿಗೆ ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಜವರೇಗೌಡ ಅವರ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಎನ್. ನಾಗೇಶ್ ಮಾತನಾಡಿ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ನೀಡಿರುವ ಹೇಳಿಕೆ ಖಂಡಿಸಿ ನಮ್ಮ ಸಂಘದ ಪದಾಧಿಕಾರಿಗಳು, ಸದಸ್ಯರು ಕಪ್ಪುಪಟ್ಟಿ ಧರಿಸಿ ಸಂಕೇತಿಕವಾಗಿ ಪ್ರತಿಭಟನೆ ನಡೆಸಿ, ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಸಲ್ಲಿಸಲಾಗುತ್ತದೆ ಎಂದರು.ಕೇಂದ್ರ ಸರ್ಕಾರ ನಿವೃತ್ತ ನೌಕರಿಗೆ ಜನವರಿ, ಜುಲೈ ತಿಂಗಳಲ್ಲಿ 6 ತಿಂಗಳಿಗೊಮ್ಮೆ ವರ್ಷಕ್ಕೆ ೨ ಬಾರಿ ತುಟ್ಟಿಭತ್ಯೆ ನೀಡುತ್ತಿದ್ದು ಈಗ ಕೊಡಲು ಸಾಧ್ಯವಾಗುತ್ತಿಲ್ಲ ಎಂದು ಸಚಿವರು ಹೇಳಿರುವುದು ಸರಿಯಲ್ಲ ನಿವೃತ್ತ ನೌಕರರ ಇಳಿ ವಯಸ್ಸಿನಲ್ಲಿ ತುಟ್ಟಿ ಭತ್ಯೆಗಳ ಅವಶ್ಯಕತೆ ಇರುತ್ತದೆ. ಹಾಗಾಗಿ ಕೇಂದ್ರ ಸರ್ಕಾರ ಯಾವುದೇ ಕಾರಣಕ್ಕೂ ತುಟ್ಟಿಭತ್ಯೆ ನಿಲ್ಲಿಸದೇ ಮುಂದುವರಿಸಿ, ನಿವೃತ್ತ ನೌಕರರ ಹಿತ ಕಾಯಬೇಕು ಎಂದು ಒತ್ತಾಯಿಸಿದರು.ಪ್ರತಿಭಟನೆಯಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಹೊನ್ನೂರಯ್ಯ, ಎಲ್. ದೇವಣ್ಣ, ಕಾರ್ಯದರ್ಶಿ ರಾಜು, ಜಂಟಿ ಕಾರ್ಯದರ್ಶಿ ಜಿ. ರಾಘವೇಂದ್ರ, ಸಂಘಟನಾ ಕಾರ್ಯದರ್ಶಿ ಎ.ಸಿದ್ದಯ್ಯ, ಲೆಕ್ಕ ಪರಿಶೋಧಕ ಬಿ. ರಾಮು, ನಿರ್ದೇಶಕರರಾದ ಎಚ್.ಬಿ. ಕೃಷ್ಣ ನಾಯಕ, ಶ್ರೀಕಂಠಸ್ವಾಮಿ, ರಾಜ್ ಗೋಪಾಲ್, ಎಂ.ಬಿ. ಕೃಷ್ಣ ಮೂರ್ತಿ, ಕೆ.ಸಿ. ಮರಿಸ್ವಾಮಿ, ಕೆ. ಸೋಮಣ್ಣ, ಎನ್. ಸುಬ್ರಹ್ಮಣ್ಯ, ನಟರಾಜು, ಎ.ಸುಂದರ್‌, ಎ.ಪಿ. ಚಂದ್ರಶೇಖರ್‌, ಎ.ಎನ್. ಪದ್ಮಾಕ್ಷಿ, ಭಾಗ್ಯಲಕ್ಷ್ಮೀ, ಟಿ.ಬಸವರಾಜು, ರಾಘವೇಂದ್ರ, ಶಿವಣ್ಣ, ಸಿ.ಎನ್. ಕೃಷ್ಣಮೂರ್ತಿ, ಅರ್‌.ಎನ್. ಸುಂದರ್‌, ಶ್ರೀನಿವಾಸ, ಎಸ್.ಐ ಸಿದ್ದರಾಜು, ಪಿ.ಪುಟ್ಟಸ್ವಾಮಿ ಇತರರು ಭಾಗವಹಿಸಿದ್ದರು.---೨೫ಸಿಎಚ್‌ಎನ್೨

ತುಟ್ಟಿ ಭತ್ಯೆ ವಿಚಾರ ಕೇಂದ್ರ ಸಚಿವರ ಹೇಳಿಕೆ ಖಂಡಿಸಿ ಪ್ರತಿಭಟನೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುದ್ದೆ ಭರ್ತಿಗೆ ಒತ್ತಾಯಿಸಿ ಮಾದಿಗ ಸಮಾಜದಿಂದ ಅಪರ ಡಿಸಿಗೆ ಮನವಿ
ಎಐ ಸೃಷ್ಟಿಸಿದ ಫೋಟೋ ನೋಡಿ ಜನರು ಕಂಗಾಲು; ಅರಣ್ಯ ಇಲಾಖೆ ಹೈರಾಣು..!