ಸಂತೋಷ ಲಾಡ್‌ ಅವಹೇಳನ ಖಂಡಿಸಿ ವಿಜಯೇಂದ್ರ ವಿರುದ್ಧ ಪ್ರತಿಭಟನೆ

KannadaprabhaNewsNetwork |  
Published : Apr 25, 2024, 01:10 AM IST
ಪೊಟೋ ಪೈಲ್ ನೇಮ್ ೨೪ಎಸ್‌ಜಿವಿ೩ ಶಿಗ್ಗಾವಿ ಪಟ್ಟಣದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸಚಿವ ಸಂತೋಷÀ ಲಾಡ್ ಅವರ ವಿರೋಧ ಅವಹೇಳನ ಹೇಳಿಕೆ ನೀಡಿರುವದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು, ಸಚಿವ ಸಂತೋಷÀ ಲಾಡ್ ಶಿಗ್ಗಾವಿ-ಸವಣೂರ ತಾಲ್ಲೂಕಿನ ಅಭಿಮಾನಿಗಳ ಬಳಗದವತಿಯಿಂದ  ಪ್ರತಿಭಟನೆ ನಡೆಯಿತು. | Kannada Prabha

ಸಾರಾಂಶ

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸಚಿವ ಸಂತೋಷ ಲಾಡ್ ಕುರಿತು ಅವಹೇಳನ ಹೇಳಿಕೆ ನೀಡಿರುವುದನ್ನು ಖಂಡಿಸಿ ಶಿಗ್ಗಾಂವಿ ಪಟ್ಟಣದಲ್ಲಿ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಶಿಗ್ಗಾಂವಿ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸಚಿವ ಸಂತೋಷ ಲಾಡ್ ಕುರಿತು ಅವಹೇಳನ ಹೇಳಿಕೆ ನೀಡಿರುವುದನ್ನು ಖಂಡಿಸಿ ಶಿಗ್ಗಾಂವಿ ಪಟ್ಟಣದಲ್ಲಿ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಂತೋಷ ಲಾಡ್ ಶಿಗ್ಗಾಂವಿ-ಸವಣೂರು ತಾಲೂಕಿನ ಅಭಿಮಾನಿಗಳ ಬಳಗದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಅಜ್ಜಂಪೀರ್ ಖಾದ್ರಿ ಮಾತನಾಡಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸ್ಥಾನಕ್ಕೆ ತಕ್ಕಂತೆ ಮಾತನಾಡಬೇಕು. ಅವಹೇಳನಕಾರಿ ಹೇಳಿಕೆ ಅವರಿಗೆ ಶೋಭೆ ತರುವುದಿಲ್ಲ. ಕೆಳಮಟ್ಟದ ಮಾತುಗಳನ್ನು ಆಡಬಾರದು. ಅದು ಸರಿಯಾದ ವರ್ತನೆಯಲ್ಲ. ವಿಜಯೇಂದ್ರ ಜನತೆಯ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ರಾಜ್ಯ ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು ಅನುಭವಿ, ವಿದ್ಯಾವಂತರು, ರಾಜ್ಯದ ಜನತೆಗೆ ನೀಡಿದ ಸೇವೆ ಅಪಾರವಾಗಿದೆ. ಕೊರೋನಾ ಸಂದರ್ಭದಲ್ಲಿ ಬಡಕೂಲಿಕಾರರಿಗೆ ನೆರವಾಗಿದ್ದಾರೆ. ರೈತರಿಗೆ, ಕೃಷಿ ಕಾರ್ಮಿಕರಿಗೆ ನೆರವಾಗುವ ಮೂಲಕ ರೈತರ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಕಾರಣರಾಗಿದ್ದಾರೆ. ಅಂತಹ ವ್ಯಕ್ತಿಗೆ ಅವಹೇಳನಕಾರಿ ಮಾತಗಳನ್ನು ಹಿಂಪಡೆಯಬೇಕು. ರಾಜ್ಯದ ಜನತೆ ಕ್ಷಮೆ ಕೇಳಬೇಕು. ಬಿಜೆಪಿ ಅವರ ಹುದ್ದೆಯಿಂದ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್ ಮುಖಂಡರಾದ ಮುಸ್ತಾಕ ಮುಲ್ಲಾ, ಸಲಿಂ ಪಾರೂಖಿ, ಫಯಾಜ ಬೆಂಡಿಗೇರಿ, ಸುರೇಶ ಹರಿಜನ, ಆಂಜನೇಯ ಗುಡಗೇರಿ, ರುದ್ರೇಶ ಗುಡಗೇರಿ, ಶಂಭು ನೇರ್ತಿ, ಮಲ್ಲಿಕಾರ್ಜುನ ಇಳಗೇರಿ, ಅಶೋಕ ಮ್ಯಾಗೇರಿ, ಸಲಿಂ ಯಳವಟ್ಟಿ, ಇಬ್ರಾಹಿಂ ಮುಲ್ಲಾ, ರವಿ ಕೊಣಪ್ಪನವರ, ಮಾಂತೇಶ ಗುಡಮ್ಮನವರ, ಜಿಲಾನಿ ಮುಲ್ಲಾ , ಬೀರೇಶ ಜಟ್ಟೆಪ್ಪನವರ, ಎಂ. ಸುಬಾನಿ, ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೋಗಿಲು ನಿರಾಶ್ರಿತರಿಗೆ 5ರ ನಂತರ ವಸತಿ ಭಾಗ್ಯ
ಹೊಸ ವರ್ಷಕ್ಕೆ ಶೇ.40 ಮದ್ಯ ಮಾರಾಟ ಹೆಚ್ಚಳ!