ಶಿಗ್ಗಾಂವಿ: ಬೆಳಗಾವಿ ನಗರದಲ್ಲಿ ಪಂಚಮಸಾಲಿ ಸಮಾಜದ ಮೀಸಲಾತಿ ಚಳವಳಿಗಾರರ ಮೇಲೆ ಸರ್ಕಾರ ಪೊಲೀಸರಿಂದ ಲಾಠಿ ಚಾರ್ಜ್ ಮಾಡಿರುವುದನ್ನು ಖಂಡಿಸಿ ಶುಕ್ರವಾರ ಪಟ್ಟಣದ ವೀರರಾಣಿ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಪಂಚಮಸಾಲಿ ಸಮಾಜದ ತಾಲೂಕು ಅದ್ಯಕ್ಷ ಶಿವಾನಂದ ಬಾಗೂರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪಂಚಮಸಾಲಿ ಸಮಾಜದ ಮುಖಂಡರು ಸೇರಿದಂತೆ ಹಲವಾರು ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಪುರಸಭಾ ಅಧ್ಯಕ್ಷ ಸಿದ್ದಾರ್ಥಗೌಡ ಪಾಟೀಲ, ಜಿಪಂ ಮಾಜಿ ಸದಸ್ಯ ಸಿ.ಎಸ್. ಪಾಟೀಲ ವಿಶ್ವನಾಥ ದೇವರಮನಿ, ಸುನೀಲ ಪಾಟೀಲ, ವಿಜುಗೌಡ ಪಾಟೀಲ, ವೀರಭದ್ರಪ್ಪ ಮೇಳಿ, ಸಣ್ಮುಖ ಉಳ್ಳಾಗಡ್ಡಿ, ಶಿವಯೋಗಿ ನವಲಗುಂದ, ಶೇಖರ ಬಳ್ಳಾರಿ, ಧರ್ಮರಾಜ ಕೋಳಿವಾಡ, ನಿಂಬನಗೌಡ ಮೇಳ್ಳಾಗಟ್ಟಿ, ಎಸ್.ವಿ. ಹುಲಸೋಗ್ಗಿ, ಶಿದ್ದನಗೌಡ ಪಾಟೀಲ, ಅಣ್ಣಪ್ಪ ನವಲಗುಂದ, ಪ್ರಶಾಂತ ಬಡ್ಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.