ಕಾರ್ಮಿಕರ ಮುಷ್ಕರ: ಎಐಸಿಸಿಟಿಯು ಪ್ರತಿಭಟನೆ

KannadaprabhaNewsNetwork |  
Published : Feb 13, 2026, 02:45 AM IST
ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಅಖಿಲ ಭಾರತ ಮುಷ್ಕರದ ಅಂಗವಾಗಿ ಎ.ಐ.ಸಿ.ಸಿ.ಟಿ.ಯು ನಿಂದ ಪ್ರತಿಭಟನೆ. | Kannada Prabha

ಸಾರಾಂಶ

ಬಂಟ್ವಾಳ: ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ಕರೆ ನೀಡಿದ ಅಖಿಲ ಭಾರತ ಮುಷ್ಕರದ ಅಂಗವಾಗಿ ಗುರುವಾರ ಎಐಸಿಸಿಟಿಯು ವತಿಯಿಂದ ಬಿ.ಸಿ.ರೋಡ್ ನಲ್ಲಿ ಪ್ರತಿಭಟನೆ ನಡೆಯಿತು.

ಬಂಟ್ವಾಳ: ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ಕರೆ ನೀಡಿದ ಅಖಿಲ ಭಾರತ ಮುಷ್ಕರದ ಅಂಗವಾಗಿ ಗುರುವಾರ ಎಐಸಿಸಿಟಿಯು ವತಿಯಿಂದ ಬಿ.ಸಿ.ರೋಡ್ ನಲ್ಲಿ ಪ್ರತಿಭಟನೆ ನಡೆಯಿತು.

ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರು ಮತ್ತು ನೂರಾರು ಕಾರ್ಮಿಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಎಐಸಿಸಿಟಿಯು ಜಿಲ್ಲಾ ಅಧ್ಯಕ್ಷ ರಾಮಣ್ಣ ವಿಟ್ಲ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಾರ್ಮಿಕ ಕಾಯ್ದೆಗಳ ತಿದ್ದುಪಡಿಗಳು ಕಾರ್ಮಿಕರ ಹಕ್ಕುಗಳಿಗೆ ಹಾನಿಕಾರಕವಾಗಿದ್ದು, ಕೆಲಸದ ಭದ್ರತೆ, ಕನಿಷ್ಠ ವೇತನ ಹಾಗೂ ಸಾಮಾಜಿಕ ಭದ್ರತೆಯನ್ನು ದುರ್ಬಲಗೊಳಿಸುತ್ತವೆ. ಈ ತಿದ್ದುಪಡಿಗಳನ್ನು ತಕ್ಷಣ ಹಿಂಪಡೆಯಬೇಕೆಂದು ಆಗ್ರಹಿಸಿದರು.

ಎಐಸಿಸಿಟಿಯು ಜಿಲ್ಲಾ ಕಾರ್‍ಯದರ್ಶಿ ಮೋಹನ್ ಕೆ.ಇ. ಮಾತನಾಡಿ, ಕಾರ್ಮಿಕ ಸಂಹಿತೆಗಳು ಕಾರ್ಮಿಕರ ಪಾಲಿಗೆ ಮರಣ ಶಾಸನವಾಗಿದೆ ಎಂದು ಆರೋಪಿಸಿದರು. ಕಾರ್ಮಿಕ ಮುಖಂಡರಾದ ಅನ್ಸಾರ್ ಬಜಾಲ್, ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಕಾರ್‍ಯದರ್ಶಿ ಶಾಹುಲ್ ಹಮೀದ್ ಮಾತನಾಡಿದರು.

ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿದರು.

ಅಕ್ಷರ ದಾಸೋಹ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾದ ಜಯಶ್ರೀ ಆರ್.ಕೆ., ಕಾರ್ಮಿಕ ಮುಖಂಡರಾದ ಸಂಜೀವ ಬೆಳ್ತಂಗಡಿ, ಪ್ರಗತಿಪರ ಮಹಿಳಾ ಸಂಘಟನೆ ಅಧ್ಯಕ್ಷರಾದ ಸುಧಾ ರಾವ್, ಕಾರ್‍ಯದರ್ಶಿ ಕುಸುಮ, ಎಐಕೆಎಂ ಅಧ್ಯಕ್ಷರಾದ ಮಹಾವೀರ್ ಜೈನ್, ಕಾರ್‍ಯದರ್ಶಿ ಅಚ್ಯುತ ಕಟ್ಟೆ, ಐಪಿಸಿಎಲ್ ಮಾರ್ಟಿನ್ ಅನಿಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ವಚ್ಛ ಕೊಡಗು ನಿರ್ಮಾಣ ಎಲ್ಲರ ಜವ್ಬಬ್ದಾರಿ: ಡಾ. ಮಂತರ್‌ ಗೌಡ
ವಿರಾಜಪೇಟೆ ಸಂತ ಅನ್ನಮ್ಮ ಚರ್ಚ್ ವಾರ್ಷಿಕ ಮಹೋತ್ಸವ