ಕನ್ನಡಪ್ರಭ ವಾರ್ತೆ ಕೋಲಾರ
ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಯ ಪದಾಧಿಕಾರಿಗಳು, ಇ.ಎಸ್.ಐ ವ್ಯಾಪ್ತಿಯ ಮಿತಿಯನ್ನು ₹೨೧,೦೦೦ ದಿಂದ ₹೪೨,೦೦೦ಕ್ಕೆ ಹೆಚ್ಚಿಸಬೇಕು ಮತ್ತು ಹೆಚ್ಚು ಇ.ಪಿ.ಎಫ್ ವಂತಿಗೆ ಮಿತಿಯನ್ನು ₹೧೫,೦೦೦ ದಿಂದ ₹೩೦,೦೦೦ಕ್ಕೆ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.
ಗ್ರಾಚ್ಯುಟಿ ಮಿತಿಯನ್ನು ₹೭,೦೦,೦೦೦ ದಿಂದ ₹೧೮,೦೦,೦೦೦ಕ್ಕೆ ಹೆಚ್ಚಿಸಬೇಕು, ಉಪಧನದ ಮಿತಿಯನ್ನು ೧೫ ದಿನದಿಂದ ಒಂದು ತಿಂಗಳಿಗೆ ಹೆಚ್ಚಿಸಬೇಕು ಮತ್ತು ಅದರ ಮಿತಿಯನ್ನು ₹೨೦ ಲಕ್ಷದಿಂದ ₹೪೦ ಲಕ್ಷಕ್ಕೆ ಹೆಚ್ಚಿಸಬೇಕು, ಇ.ಪಿ.ಎಫ್. ಹೆಚ್ಚುವರಿ ಪಿಂಚಣಿಯನ್ನು ಎಲ್ಲಾ ವಿಭಾಗದ ಕಾರ್ಮಿಕರಿಗೂ ಜಾರಿಗೊಳಿಸಬೇಕು. ಅಂಗನವಾಡಿ, ಆಶಾ ಮತ್ತು ಬಿಸಿಯೂಟದ ಕಾರ್ಮಿಕರ ಮಾಸಿಕ ಗೌರವಧನವನ್ನು ಹೆಚ್ಚಿಸಬೇಕು ಎಂದು ಆಗ್ರಹಿಸಿದರು.ಬ್ಯಾಂಕಿಂಗ್ ಉದ್ಯಮದಲ್ಲಿ ವಾರಕ್ಕೆ ಐದು ದಿನಗಳ ಕೆಲಸದ ಪದ್ಧತಿಯನ್ನು ಜಾರಿಗೊಳಿಸಬೇಕು, ಅಂಗನವಾಡಿ, ಆಶಾ ಮತ್ತು ಬಿಸಿಯೂಟದ ಕಾರ್ಮಿಕರನ್ನು ಕಾಯಂ ಗೊಳಿಸಬೇಕು, ರಾಜ್ಯದ ಆರೋಗ್ಯ ಇಲಾಖೆಯ ಒಳ ಮತ್ತು ಹೊರ ಗುತ್ತಿಗೆ ನೌಕರರಿಗೆ ಅವರ ಹುದ್ದೆಗಳ ಮಂಜೂರಾತಿ ಪಡೆದು ಅವರ ಸೇವೆಯ ಆಧಾರದ ಮೇಲೆ ಆ ನೌಕರರನ್ನು ಕಾಯಂ ಮಾಡಬೇಕು, ಸರ್ಕಾರದ ಎಲ್ಲಾ ಇಲಾಖೆಯಲ್ಲಿರುವ ಒಳಗುತ್ತಿಗೆ ಮತ್ತು ಹೊರಗುತ್ತಿಗೆ ಕಾರ್ಮಿಕ ಪದ್ಧತಿಯನ್ನು ಕೈಬಿಡಬೇಕು, ಕಟ್ಟಡ ಕಾರ್ಮಿಕ ಮಂಡಳಿಯಲ್ಲಿನ ಭ್ರಷ್ಟಾಚಾರವನ್ನು ನಿಲ್ಲಿಸಿ ಅದರ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದರು.
ಕಾರ್ಮಿಕರ ಸಮಸ್ಯೆಗಳ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಹಲವಾರು ಬಾರಿ ಮನವಿ ನೀಡಿ, ಪ್ರತಿಭಟನೆಯನ್ನು ಕಾರ್ಮಿಕ ಸಂಘಗಳು ಮಾಡಿ ಮನವಿ ನೀಡಿದರೂ ಅಸಮರ್ಪಕ ಹಾಗೂ ತಾತ್ಸರದ ಉತ್ತರ ನೀಡಿ ಕಾರ್ಮಿಕರ ವಿರೋಧಿ ನಿಲುವು ತೆಗೆದುಕೊಂಡಿರುತ್ತೀರಿ ಎಂದು ಖಂಡಿಸಿದರು.
ಪ್ರತಿಭಟನೆಯಲ್ಲಿ ಸಂಘಟನೆಯ ರಾಜ್ಯ ಕಾರ್ಯದರ್ಶಿ ಇಂದ್ರೇಶ್, ದಕ್ಷಿಣ ಪ್ರಾಂತ್ಯ ತಂಗರಾಜ್, ಕೋಲಾರ ತಾಲೂಕು ಅಧ್ಯಕ್ಷ ಶಿವಕುಮಾರ್, ಕಾರ್ಯದರ್ಶಿ ನಾಗಭೂಷಣ್, ಶ್ರೀನಿವಾಸಪುರ ತಾಲೂಕು ಅಧ್ಯಕ್ಷ ವಿ.ಶಂಕರರೆಡ್ಡಿ, ಕೋಲಾರ ಜಿಲ್ಲಾ ಉಪಾಧ್ಯಕ್ಷ ಕಿಲಾರಿಪೇಟೆ ಮುನಿವೆಂಕಟಯಾದವ್ ಇದ್ದರು.