ಕನ್ನಡಪ್ರಭ ವಾರ್ತೆ ಗುಡಿಬಂಡೆ
ಗ್ರಾಮದಲ್ಲಿ ನೀರಿಗಾಗಿ ಪರಿತಪಿಸುವಂತಾಗಿದೆ. ಜನ ಜಾನುವಾರುಗಳು ನೀರಿಲ್ಲದೇ ಪರದಾಡುವಂತಾಗಿದೆ. ಈ ಕುರಿತು ನಾವು ಅನೇಕ ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮೌಖಿಕವಾಗಿ ದೂರು ನೀಡಿದ್ದೇವೆ. ನಮ್ಮ ಸಮಸ್ಯೆಯನ್ನು ಆಲಿಸಲು ಯಾವುದೇ ಅಧಿಕಾರಿ ಗ್ರಾಮಕ್ಕೆ ಬರಲಿಲ್ಲ ಎಂದರು.
ನೀರಿಗಾಗಿ ಪಟ್ಟಣಕ್ಕೆ ಬರಬೇಕುಗ್ರಾಮದಲ್ಲಿನ ಖಾಸಗಿ ಬೋರ್ ವೆಲ್ ಅಥವಾ ಬಾವಿಗಳ ಬಳಿ ನೀರು ತರೋಣ ಎಂದರೇ ಅಲ್ಲಿಯೂ ನೀರಿಲ್ಲ. ಕುಡಿಯಲು ನೀರು ತರಲು ವಾಹನಗಳಲ್ಲಿ ಗುಡಿಬಂಡೆ ಪಟ್ಟಣಕ್ಕೆ ಬರಬೇಕಾದ ಸ್ಥಿತಿ ಉಂಟಾಗಿದೆ. ಆದರೆ ವಾಹನಗಳಿರುವವರು ನೀರು ತಂದುಕೊಳ್ಳುತ್ತಾರೆ. ಯಾವುದೇ ವಾಹನ ಇಲ್ಲದಂತಹವರು ಏನು ಮಾಡಬೇಕು. ಆದ್ದರಿಂದ ಕೂಡಲೇ ನಮ್ಮ ಸಮಸ್ಯೆ ಬಗೆಹರಿಸಬೇಕೆಂದು ಗ್ರಾ.ಪಂ. ಕಚೇರಿ ಮುಂಭಾಗ ಬೀಗ ಜಡಿದು ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ಗ್ರಾಮಸ್ಥರು ಆಕ್ರೋಷ ಹೊರಹಾಕಿದರು.
ಸಮಸ್ಯೆ ಪರಿಹರಿಸುವ ಭರವಸೆ
ಬಳಿಕ ಸ್ಥಳಕ್ಕೆ ಆಗಮಿಸಿದ ಪಿಡಿಒ ನರಸಿಂಹಮೂರ್ತಿ ಗ್ರಾಮಸ್ಥರ ಸಮಸ್ಯೆಯನ್ನು ಆಲಿಸಿದರು. ಈ ವೇಳೆ ಪಿಡಿಒ ಹಾಗೂ ಗ್ರಾಮಸ್ಥರ ನಡುವೆ ವಾಗ್ದಾಳಿ ಸಹ ನಡೆಯಿತು. ಮುಂದಿನ 24 ಗಂಟೆಯೊಳಗೆ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ ಬಳಿಕ ಗ್ರಾಮಸ್ಥರು ತಾತ್ಕಲಿಕವಾಗಿ ಪ್ರತಿಭಟನೆಯನ್ನು ಹಿಂಪಡೆದುಕೊಂಡರು.