ಹೊಸದುರ್ಗದಲ್ಲಿ ಬಿಸಿಯೂಟ ಕಾರ್ಯಕರ್ತರಿಂದ ಪ್ರತಿಭಟನೆ

KannadaprabhaNewsNetwork |  
Published : Sep 24, 2024, 01:47 AM IST
 ಹೊಸದುರ್ಗದಲ್ಲಿ ಬಿಸಿಯೂಟ ತಯಾರಕರಿಗೆ ವೇತನ ಹೆಚ್ಚಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ಮತ್ತು ಎಐಟಿಯುಸಿಯವರು ಮುಖ್ಯಮಂತ್ರಿಗಳಿಗೆ ತಹಶೀಲ್ದಾರ್ ತಿರುಪತಿಪಾಟೀಲ್ ಅವರ ಮೂಲಕ ಶನಿವಾರ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ಬಿಸಿಯೂಟ ತಯಾರಕರಿಗೆ ವೇತನ ಹೆಚ್ಚಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ಮತ್ತು ಎಐಟಿಯುಸಿ ವತಿಯಿಂದ ಪಟ್ಟಣದ ತಾಲೂಕು ಕಚೇರಿಯ ಮುಂದೆ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಗಳಿಗೆ ತಹಸೀಲ್ದಾರ್ ಮೂಲಕ ಶನಿವಾರ ಮನವಿ ಸಲ್ಲಿಸಿದರು.

ಹೊಸದುರ್ಗ: ಬಿಸಿಯೂಟ ತಯಾರಕರಿಗೆ ವೇತನ ಹೆಚ್ಚಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ಮತ್ತು ಎಐಟಿಯುಸಿ ವತಿಯಿಂದ ಪಟ್ಟಣದ ತಾಲೂಕು ಕಚೇರಿಯ ಮುಂದೆ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಗಳಿಗೆ ತಹಸೀಲ್ದಾರ್ ಮೂಲಕ ಶನಿವಾರ ಮನವಿ ಸಲ್ಲಿಸಿದರು.ಪ್ರತಿಭಟನೆಯ ನೇತೃತ್ವ ವಹಿಸಿದ್ದ ಎಐಟಿಯುಸಿ ಅಧ್ಯಕ್ಷ ಕುಮಾರಸ್ವಾಮಿ ಮಾತನಾಡಿ, ರಾಜ್ಯದ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಕಳೆದ 21 ವರ್ಷಗಳಿಂದಲೂ ಅಕ್ಷರ ದಾಸೋಹದಲ್ಲಿ ಅಪಾರ ಮಹಿಳೆಯರು ಕಾರ್ಯನಿರ್ವಹಿಸುತ್ತಿದ್ದಾರೆ. ಕನಿಷ್ಟ ವೇತನ ₹21 ಸಾವಿರ, ಕೆಲಸದ ಭದ್ರತೆ, ತಮಿಳುನಾಡು ಮಾದರಿಯಲ್ಲಿ ವಿವಿಧ ಸೌಲಭ್ಯಗಳು, ಮಾಸಿಕ ₹3000 ನಿವೃತ್ತಿ ವೇತನ ನೀಡಬೇಕು ಎಂದು ಆಗ್ರಹಿಸಿದರು.

ಪ್ರತಿ ವರ್ಷ ಒಂದು ಸಮವಸ್ತ್ರ ನೀಡಬೇಕು. ದಸರಾ ರಜೆ, ಬೇಸಿಗೆ ರಜೆ ಸಂಬಳ ನೀಡಬೇಕು. ಬಿಸಿಯೂಟ ತಯಾರಕರು ಮರಣ ಹೊಂದಿದ್ದಲ್ಲಿ ₹2 ಲಕ್ಷ ಪರಿಹಾರ, ಅಂತ್ಯಕ್ರಿಯೆಗೆ ₹20 ಸಾವಿರ ನೀಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಎನ್.ಸಿ ಶಿವಮ್ಮ, ಕಾರ್ಯದರ್ಶಿ ವಸಂತಬಾಯಿ ಸೇರಿದಂತೆ ಬಿಸಿಯೂಟ ಮುಖ್ಯ ಅಡುಗೆಯವರು ಮತ್ತು ಸಹಾಯಕಿಯರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ