ಲಕ್ಷ್ಮೇಶ್ವರ: ರಾಜ್ಯಾದ್ಯಂತ ಪೌರ ಕಾರ್ಮಿಕರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ದಿಷ್ಟಾವಧಿ ಮುಷ್ಕರ ಹಿನ್ನೆಲೆಯಲ್ಲಿ ಪಟ್ಟಣದ ಪೌರ ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆ ಬುಧವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಪೌರ ಕಾರ್ಮಿಕರ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ವಿವಿಧ ಸಂಘಟನೆಗಳು ಬೇಷರತ್ ಬೆಂಬಲ ನೀಡಿವೆ.
ಈ ವೇಳೆ ಪುರಸಭೆಯ ಮುಖ್ಯಾಧಿಕಾರಿ ಮಹೇಶ ಹಡಪದ ಮಾತನಾಡಿ, ಪೌರ ಕಾರ್ಮಿಕರು ಇಲ್ಲದೆ ಆಡಳಿತ ನಡೆಸುವುದು ಅಸಾಧ್ಯದ ಮಾತು. ಪೌರ ಕಾರ್ಮಿಕರು ಸ್ವಚ್ಛತೆಯ ಹರಿಕಾರರು. ಪೌರ ಕಾರ್ಮಿಕರ ಬೇಡಿಕೆಗಳು ನ್ಯಾಯಯುತವಾಗಿವೆ. ಆದ್ದರಿಂದ ಸರ್ಕಾರ ಶೀಘ್ರದಲ್ಲಿ ಈಡೇರಿಸಬೇಕು ಎಂದು ಅವರು ಹೇಳಿದರು.
ತಾಲೂಕು ಮುಖಂಡ ಬಸವಣ್ಣೆಪ್ಪ ನಂದೆಣ್ಣವರ, ದೇವೇಂದ್ರಪ್ಪ ನಂದೆಣ್ಣವರ, ಪುರಸಭೆ ವ್ಯವಸ್ಥಾಪಕಿ ಮಂಜುಳಾ ಹೂಗಾರ, ಹಿರಿಯ ಅರೋಗ್ಯ ನಿರೀಕ್ಷಕ ಮಂಜುನಾಥ ಮುದಗಲ್, ಕಂದಾಯ ಅಧಿಕಾರಿ ನಬಿ ಕಂದಗಲ್, ಎಸ್.ಪಿ. ಲಿಂಬಯ್ಯನಮಠ, ಹೇಮರಾಜ ಅಣ್ಣಿಗೇರಿ, ಶಿದ್ದು ಹಿರೇಮಠ, ಮಹೇಶ ಹೊಸಮನಿ, ನೇತ್ರಾ ಹೊಸಮನಿ, ಹನುಮಂತಪ್ಪ ನಂದೆಣ್ಣವರ, ಅಶೋಕ ನಡಗೇರಿ, ದುರ್ಗಪ್ಪ ಬಾಲಣ್ಣವರ, ನೀಲಪ್ಪ ನಂದೆಣ್ಣವರ, ಮುತ್ತಪ್ಪ ದೊಡ್ಡಮನಿ, ಗೋಣೆಪ್ಪ ಗಡದವರ, ಪರಶುರಾಮ ಮುಳುಗುಂದ, ಮಂಜುನಾಥ ನಂದೆಣ್ಣವರ, ವಿಶ್ವನಾಥ ಹಾದಿಮನಿ ಹಾಗೂ ಚಾಲಕರು, ಪೌರಕಾರ್ಮಿಕರ ಸಿಬ್ಬಂದಿ ಇದ್ದರು.