ಕನ್ನಡಪ್ರಭ ವಾರ್ತೆ ಹನೂರು
ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ಜಿಲ್ಲಾಧಿಕಾರಿಗಳನ್ನು ಅಭಿವೃದ್ಧಿಗಾಗಿ ಮುಂದುವರಿಸಬೇಕು, ಪ್ರಾಣಿ ಮತ್ತು ಮಾನವ ಸಂಘರ್ಷದ ಜೊತೆಗೆ ಬೆಳೆ ಹಾನಿ ಹೆಚ್ಚಾಗಿ ಆಗುವುದರಿಂದ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು, ಈ ಹಿಂದೆ ಇದ್ದಂತೆ ಅಕ್ರಮ ಸಕ್ರಮ ಮುಂದುವರೆಯಬೇಕು. ಕರ ನಿರಾಕಣ ಚಳವಳಿಯ ಸಂದರ್ಭದಲ್ಲಿ, ಚಂಗಡಿ ಗ್ರಾಮವನ್ನು ಅತಿ ಶೀಘ್ರದಲ್ಲಿಯೇ ಸ್ಥಳಾಂತರ ಮಾಡಬೇಕು, ಕಾಡಂಚಿನ ಗ್ರಾಮಗಳ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲು ಕೆಎಸ್ಆರ್ಟಿಸಿ ಬಸ್ ವ್ಯವಸ್ಥೆ ಕಲ್ಪಿಸಬೇಕು, ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹದಗೆಟ್ಟಿರುವ ರಸ್ತೆ ದುರಸ್ತಿ ಮಾಡಬೇಕು. ರೈತರ ಎಲ್ಲಾ ಬೆಳೆಗಳಿಗೂ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆ ವಿಸ್ತರಣೆ ಸೇರಿದಂತೆ ಇನ್ನಿತರ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದರು.
ಚೆಸ್ಕಾಂ ಕಚೇರಿಗೆ ಭೇಟಿ: ಪ್ರತಿಭಟನೆ ನಂತರ ಪಟ್ಟಣದ ಕಚೇರಿಗೆ ಭೇಟಿ ನೀಡಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ವಿಭಾಗದ ಎಇಇ ಶಂಕರ್ ಜೊತೆ ಮಾತನಾಡಿದ ರೈತ ಸಂಘ, ಪಟ್ಟಣದಲ್ಲಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಕ್ಷೇತ್ರ ವ್ಯಾಪ್ತಿಯಲ್ಲಿ ರೈತರಿಗೆ ಹಲವಾರು ಸಮಸ್ಯೆಗಳಿವೆ. ವಿದ್ಯುತ್ತನ್ನುಏಳು ಗಂಟೆ ನೀಡಬೇಕು. ಜೊತೆಗೆ ವಿದ್ಯುತ್ ಪರಿಕರಗಳನ್ನು ನಿಗದಿತ ಸಮಯದಲ್ಲಿ ಗುಣಮಟ್ಟದಿಂದ ದುರಸ್ತಿ ಪಡಿಸಿ ರೈತರಿಗೆ ಅನುಕೂಲ ಕಲ್ಪಿಸಬೇಕು. ಇನ್ನು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ನೀಡಿರುವ ಮನವಿಗಳನ್ನು ಪುರಸ್ಕರಿಸುವಂತೆ ಒತ್ತಾಯಿಸಿದರು.ಹೆಚ್ಚುವರಿ ತಹಸೀಲ್ದಾರ್ ಕಚೇರಿಗೆ ಭೇಟಿ: ರೈತರ ಜಮೀನುಗಳಿಗೆ ಅಕ್ರಮ ಸಕ್ರಮ ಹಾಗೂ ವಿವಿಧ ಬೇಡಿಕೆಗಳನ್ನು ಪೂರೈಸುವಂತೆ ನೀಡಿರುವ ಮನವಿಗೆ ಸ್ಪಂದಿಸಿ ಜೊತೆಗೆ ಬೆಳೆ ಪರಿಹಾರ ವಿಳಂಬವಾಗುತ್ತಿರುವುದು ರೈತರಿಗೆ ತೊಂದರೆಯಾಗುತ್ತಿದೆ. ಹೀಗಾಗಿ ಕ್ರಮ ಕೈಗೊಳ್ಳುವಂತೆ ತಹಸೀಲ್ದಾರ್ ಗುರುಪ್ರಸಾದ್ ಅವರಿಗೆ ರೈತ ಮುಖಂಡರು ಮನವಿ ಮಾಡಿದರು. ಪ್ರತಿಭಟನೆಯಲ್ಲಿ ರೈತ ಸಂಘದ ಮುಖಂಡರಾದ ಶಾಂತಕುಮಾರ್, ಮಾದಪ್ಪ, ಪುಟ್ಟರಾಜು, ರಾಜು, ಪಳನಿ ಸ್ವಾಮಿ ಸೇರಿದಂತೆ 50ಕ್ಕೂ ಹೆಚ್ಚು ರೈತ ಮುಖಂಡರು ಪಾಲ್ಗೊಂಡಿದ್ದರು.