ಡಿವೈಎಸ್ಪಿ ಕಚೇರಿ ಮುಂದೆ ಹಿಂದೂಪರ ಸಂಘಟನೆಗಳ ಮುಖಂಡರಿಂದ ಪ್ರತಿಭಟನೆ

KannadaprabhaNewsNetwork |  
Published : Sep 10, 2025, 01:03 AM IST
9ಕೆಎಂಎನ್ ಡಿ11 | Kannada Prabha

ಸಾರಾಂಶ

ಗಣೇಶನನ್ನು ಕೂರಿಸುವುದು, ಪೂಜಿಸುವುದು, ಮೆರವಣಿಗೆ ಮೂಲಕ ವಿಸರ್ಜಿಸುವುದು ನಮ್ಮ ಹಿಂದೂ ಸಂಪ್ರದಾಯದಲ್ಲಿ ತಲ ತಲಾಂತರಗಳಿಂದ ನಡೆದುಕೊಂಡು ಬಂದಿರುವ ಸಂಪ್ರದಾಯ. ಇದೀಗ ಸರ್ಕಾರ ಪೊಲೀಸ್ ಇಲಾಖೆಯನ್ನು ದುರುಪಯೋಗ ಪಡಿಸಿಕೊಂಡು, ಹಿಂದೂ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ತೋರಲು ಮುಂದಾಗುತ್ತಿದೆ.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಮದ್ದೂರಿನಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲುತೂರಿ ಕೋಮು ಗಲಭೆ ಸೃಷ್ಟಿಸಿರುವ ಧುರುಳರ ವಿರುದ್ದ ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿ ಹಿಂದೂಪರ ಸಂಘಟನೆಗಳ ಮುಖಂಡರು ಪಟ್ಟಣದ ಡಿವೈಎಸ್ಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಹಿಂದೂ ಜಾಗರಣಾ ವೇದಿಕೆಯ ಚಂದನ್ ನೇತೃತ್ವದಲ್ಲಿ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಡಿವೈಎಸ್ಪಿ ಕಚೇರಿ ಎದುರು ಆಗಮಿಸಿ ಗಲಭೆಗೆ ಕುಮ್ಮಕ್ಕು ನೀಡುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಗಲಭೆಕೋರರಿಗೆ ಲಾಠಿ ರುಚಿ ತೋರಿಸಬೇಕಾಗಿದ್ದ ಪೊಲೀಸರು ಪ್ರತಿಭಟನಾನಿರತ ಹಿಂದೂ ಕಾರ್ಯಕರ್ತರು ಹಾಗೂ ಮಹಿಳೆಯರು, ಮಕ್ಕಳ ಮೇಲೆ ತೋರಿಸಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.

ಗಣೇಶನನ್ನು ಕೂರಿಸುವುದು, ಪೂಜಿಸುವುದು, ಮೆರವಣಿಗೆ ಮೂಲಕ ವಿಸರ್ಜಿಸುವುದು ನಮ್ಮ ಹಿಂದೂ ಸಂಪ್ರದಾಯದಲ್ಲಿ ತಲ ತಲಾಂತರಗಳಿಂದ ನಡೆದುಕೊಂಡು ಬಂದಿರುವ ಸಂಪ್ರದಾಯ. ಇದೀಗ ಸರ್ಕಾರ ಪೊಲೀಸ್ ಇಲಾಖೆಯನ್ನು ದುರುಪಯೋಗ ಪಡಿಸಿಕೊಂಡು, ಹಿಂದೂ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ತೋರಲು ಮುಂದಾಗುತ್ತಿದೆ ಎಂದು ಕಿಡಿಕಾರಿದರು.

ಮೊದಲು ಶ್ರೀರಂಗಪಟ್ಟಣ ಆಯ್ತು, ಕೆರಗೋಡು, ನಾಗಮಂಗಲ ಆಯ್ತು ಇದೀಗ ಮದ್ದೂರು. ಕೇವಲ ವೋಟ್ ಬ್ಯಾಂಕ್‌ಗಾಗಿ ಮುಸ್ಲಿಮರ ಓಲೈಕೆ ಮಾಡುತ್ತಿರುವ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರಕ್ಕೆ ಶ್ರೀರಂಗಪಟ್ಟಣದಿಂದಲೇ ಉತ್ತರ ನೀಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಗಲಭೆಕೋರರ ವಿರುದ್ಧ ನಿರ್ದಾಕ್ಷಣ್ಯ ಕ್ರಮ ಕೈಗೊಳ್ಳದೆ ಹೋದರೆ ಮುಂದಾಗುವ ಎಲ್ಲಾ ಅಹಿತಕರ ಘಟನೆಗಳಿಗೆ ಸರ್ಕಾರ ಹಾಗೂ ಪೊಲೀಸ್ ಇಲಾಖೆಯೇ ನೇರ ಹೊಣೆ ಎಂದು ತಿಳಿಸಿ ಎಸ್ಪಿ ಮಲ್ಲಿಕಾರ್ಜುನ್ ಬಾಲದಂಡಿ ಅವರಿಗೆ ಸರ್ಕಲ್ ಇನ್ಸ್‌ಪೆಕ್ಟರ್‌ ಬಿ.ಜಿ.ಕುಮಾರ್ ಮೂಲಕ ಮನವಿ ಸಲ್ಲಿಸಲಾಯಿತು.

ನಂತರ ತಾಲೂಕು ಕಚೇರಿಗೆ ತೆರಳಿದ ಪ್ರತಿಭಟನಾಕಾರರು ಕೆಲ ಕಾಲ ಪ್ರತಿಭಟನಾ ಧರಣಿ ನಡೆಸಿ ಸರ್ಕಾರ ಹಾಗೂ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ತಹಸೀಲ್ದಾರ್ ಚೇತನಾ ಯಾದವ್ ಅವರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ರೈತ ಹೋರಾಟಗಾರ ಕೆ.ಎಸ್.ನಂಜುಂಡೇಗೌಡ, ವಕೀಲರಾದ ಬಾಲ್ ರಾಜ್, ರವೀಶ್, ಸಿದ್ದೇಶ್, ಪುರಸಭೆ ಸದಸ್ಯ ಶ್ರೀನಿವಾಸ್, ಹಿಂದೂ ಜಾಗರಣಾ ವೇಧಿಕೆಯ ಸನತ್, ಹರ್ಷ, ಸೋಮಶೇಖರ್, ಮದನ್ ಸೇರಿದಂತೆ ಹಿಂದೂಪರ ಸಂಘಟನೆಯ ನೂರಾರು ಕಾರ್ಯಕರ್ತರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಫೆ.೮ರಂದು ಶ್ರೀ ರಾಮಲಿಂಗೇಶ್ವರ ಮಠ ಲೋಕಾರ್ಪಣೆ
ಚಳಿ ಹೆಚ್ಚಿದಂತೆ ಏರುತ್ತಿದೆ ಮೊಟ್ಟೆ ದರ