ಆಡಳಿತಾತ್ಮಕ ನಿಯಂತ್ರಣ ಕಡತ ಹಿಂಪಡೆಯುವಂತೆ ಉಪನ್ಯಾಸರಿಂದ ಪ್ರತಿಭಟನೆ

KannadaprabhaNewsNetwork |  
Published : Mar 13, 2026, 01:45 AM IST
12ಕೆಎಂಎನ್ ಡಿ24 | Kannada Prabha

ಸಾರಾಂಶ

ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿದ್ದ ಪರೀಕ್ಷಾ ವಿಭಾಗವನ್ನು ಹಿಂದಿನಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶನಾಲಯಕ್ಕೆ ಮರಳಿ ವರ್ಗಾಹಿಸಬೇಕು. ಇಲಾಖೆಯಲ್ಲಿರಿನ ಪ್ರಸ್ತುತ ಇರುವ 32:1 ವಿದ್ಯಾರ್ಥಿ ಉಪನ್ಯಾಸಕರ ಅನುಪಾತವನ್ನು ಎನ್‌ಸಿಇಆರ್‌ಟಿ ಮಾರ್ಗಸೂಚಿಗಳನ್ವಯ ಮರುನಿಗದಿಪಡಿಸಬೇಕು.

ಕನ್ನಡಪ್ರಭ ವಾರ್ತೆ ಮಂಡ್ಯ

ಜಿಲ್ಲಾ ಉಪ ನಿರ್ದೇಶಕರ ಕಚೇರಿಗಳ ಮೇಲಿನ ಆಡಳಿತಾತ್ಮಕ ನಿಯಂತ್ರಣವನ್ನು ಜಿಪಂ ಸಿಇಒಗೆ ವಹಿಸುವ ಕುರಿತು ಪ್ರಸ್ತಾಪಿತ ಸರ್ಕಾರದ ಕಡತವನ್ನು ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿ ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರು ನಗರದಲ್ಲಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಸೇರಿದ ಉಪನ್ಯಾಸಕರು ಅಪರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ, ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿದ್ದ ಪರೀಕ್ಷಾ ವಿಭಾಗವನ್ನು ಹಿಂದಿನಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶನಾಲಯಕ್ಕೆ ಮರಳಿ ವರ್ಗಾಹಿಸಬೇಕು. ಇಲಾಖೆಯಲ್ಲಿರಿನ ಪ್ರಸ್ತುತ ಇರುವ 32:1 ವಿದ್ಯಾರ್ಥಿ ಉಪನ್ಯಾಸಕರ ಅನುಪಾತವನ್ನು ಎನ್‌ಸಿಇಆರ್‌ಟಿ ಮಾರ್ಗಸೂಚಿಗಳನ್ವಯ ಮರುನಿಗದಿಪಡಿಸಬೇಕು ಎಂದು ಒತ್ತಾಯಿಸಿದರು.

ಕಳೆದ ಮೂರು ವರ್ಷಗಳಿಂದ ಪರಿಷ್ಕರಿಸದಿರುವ ದ್ವಿತೀಯ ಪಿಯುಸಿ ಉತ್ತರ ಪತ್ರಿಕೆ ಮೌಲ್ಯಮಾಪನ ಭತ್ಯೆ ಹಾಗೂ ಪರೀಕ್ಷಾ ಸಂಭಾವನೆಯನ್ನು ತಕ್ಷಣ ಪರಿಷ್ಕರಿಸಿ ಹಿಂದಿನ ವರ್ಷದ ಬಾಕಿ ಇರುವ ಸಂಭಾವನೆಗಳನ್ನು ತಕ್ಷಣ ಪಾವತಿಸಬೇಕು. ಪ್ರಥಮ ಆಧ್ಯತೆಯಾಗಿ ಸಂಭವಾನೆಗಳನ್ನು ಖಾಸಗಿ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರು ಹಾಗೂ ಅತಿಥಿ ಉಪನ್ಯಾಸಕರಿಗೆ ವಿತರಿಸಬೇಕು ಎಂದು ಆಗ್ರಹಿಸಿದರು.

ಕಾರ್ಯಭಾರ ಕೊರತೆ ಇರುವ ಅನುದಾನಿತ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರನ್ನು ಸೇವೆಯಿಂದ ವಿಮುಕ್ತಿಗೊಳಿಸುವ ಆದೇಶವನ್ನು ಹಿಂಪಡೆದು ಅವರಿಗೆ ಸಮೀಪದ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಕಾರ್ಯಭಾರ ನೀಡುವ ಕುರಿತು ಸಲ್ಲಿಸಲಾದ ಪ್ರಸ್ತಾವನೆಗೆ ಅನುಮೋದನೆ ನೀಡಬೇಕು ಎಂದು ಒತ್ತಾಯಿಸಿದರು.

ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ವರ್ಗಾವಣೆ ಹಾಗೂ ಪದೋನ್ನತಿ ಹೊಂದಿದ ಪ್ರಾಂಶುಪಾಲರ ಸ್ಥಳ ನಿಯುಕ್ತಿಯ ಸಂದರ್ಭದಲ್ಲಿ ಎಲ್ಲಾ ಖಾಲಿ ಹುದ್ದೆಗಳನ್ನು ಯಾವುದೇ ನಿರ್ಬಂಧವಿಲ್ಲದೆ ಆಯ್ಕೆ ಮಾಡಲು ಮುಕ್ತ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ಚನ್ನಕೃಷ್ಣಯ್ಯ, ವೆಂಕಟೇಗೌಡ, ರಾಮಕೃಷ್ಣೇಗೌಡ, ಹನುಮಂತಪ್ಪ, ಗುರುಲಿಂಗಯ್ಯ, ರವೀಲಾ, ಲತಾ, ಶಿವಲಿಂಗಯ್ಯ, ತಮ್ಮೇಗೌಡ, ಶಿವಲಿಂಗೇಗೌಡ, ಲಕ್ಷ್ಮೀಕಾಂತ್ ಇತರರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಿರಾಶ್ರಿತರಿಗೆ ವಾತ್ಸಲ್ಯ ತುಂಬುವ ಕೆಲಸವಾಗಬೇಕು: ಮಲ್ಲಿಕಾರ್ಜುನ್
ಹಾವಿನಮಾರನಹಳ್ಳಿಯಲ್ಲಿ ಅಕ್ರಮ ಮದ್ಯ ಮಾರಾಟ ವಿರುದ್ಧ ಪ್ರತಿಭಟನೆ