ಮೆಳೇಕೋಟೆ ಗೊಲ್ಲರಹಟ್ಟಿ ಗ್ರಾಮಸ್ಥರಿಂದ ಪ್ರತಿಭಟನೆ

KannadaprabhaNewsNetwork |  
Published : Nov 28, 2025, 01:15 AM IST
೨೮ಶಿರಾ೨: ಶಿರಾ ತಾಲೂಕಿನ ಗೌಡಗೆರೆ ಹೋಬಳಿಯ ಮೆಳೇಕೋಟೆ ಗೊಲ್ಲರಟ್ಟಿ ಗ್ರಾಮದಲ್ಲಿ ನಿವೇಶನಕ್ಕಾಗಿ ಕಾಡುಗೊಲ್ಲ ಸಮುದಾಯದವರು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಸ್ಥಳಕ್ಕೆ  ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಅವರು ಭೇಟಿ ನೀಡಿ ಪ್ರತಿಭಟನಾಕಾರರ ಸಮಸ್ಯೆಗಳನ್ನು ಆಲಿಸಿದರು. | Kannada Prabha

ಸಾರಾಂಶ

ಮೆಳೇಕೋಟೆ ಗೊಲ್ಲರಹಟ್ಟಿಯಲ್ಲಿ ಸುಮಾರು 50 ಕುಟುಂಬಗಳು 30 ವರ್ಷದಿಂದಲೂ ಗುಡಿಸಲು ಕಟ್ಟಿಕೊಂಡು ವಾಸ ಮಾಡುತ್ತಿದ್ದೇವೆ. ಈ ಜಮೀನು ಖಾಸಗಿ ವ್ಯಕ್ತಿಗಳ ಹೆಸರಿನಲ್ಲಿದ್ದು, ನಮಗೆ ಪ್ರತ್ಯೇಕವಾಗಿ ನಿವೇಶನ ಹಂಚಿಕೆ ಮಾಡಿಕೊಡಬೇಕೆಂದು ಒತ್ತಾಯಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಶಿರಾ

ನಿವೇಶನಕ್ಕಾಗಿ ಸರ್ಕಾರವು 2 ಎಕರೆ ಜಮೀನನ್ನು ಮಂಜೂರು ಮಾಡಿದ್ದರೂ ಸಹ ಗ್ರಾಮ ಪಂಚಾಯಿತಿ ಪಿಡಿಒ ನಿರ್ಲಕ್ಷದಿಂದ ನಿವೇಶನ ರಹಿತರು ನಿವೇಶನ ಪಡೆಯದೆ ವಂಚಿತರಾಗಿದ್ದಾರೆ. ಶೀಘ್ರವಾಗಿ ಸದರಿ ಜಮೀನಿನಲ್ಲಿ ನಿವೇಶನಗಳನ್ನು ಹಂಚಿಕೆ ಮಾಡದೆ ಇದ್ದರೆ ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಮೆಳೇಕೋಟೆ ಗೊಲ್ಲರಹಟ್ಟಿ ಗ್ರಾಮದ ತಾವರೆಕೆರೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಅನಿತಾ ಎಚ್ಚರಿಸಿದರು.

ಈ ಬಗ್ಗೆ ಮೆಳೇಕೋಟೆ ಗೊಲ್ಲರಹಟ್ಟಿ ಗ್ರಾಮದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ಶಿರಾ ತಾಲೂಕು ಗೌಡಗೆರೆ ಹೋಬಳಿ, ತಾವರೆಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೆಳೇಕೋಟೆ ಗೊಲ್ಲರಹಟ್ಟಿಯಲ್ಲಿ ಸುಮಾರು 50 ಕುಟುಂಬಗಳು 30 ವರ್ಷದಿಂದಲೂ ಗುಡಿಸಲು ಕಟ್ಟಿಕೊಂಡು ವಾಸ ಮಾಡುತ್ತಿದ್ದೇವೆ. ಈ ಜಮೀನು ಖಾಸಗಿ ವ್ಯಕ್ತಿಗಳ ಹೆಸರಿನಲ್ಲಿದ್ದು, ನಮಗೆ ಪ್ರತ್ಯೇಕವಾಗಿ ನಿವೇಶನ ಹಂಚಿಕೆ ಮಾಡಿಕೊಡಬೇಕೆಂದು ಈ ಹಿಂದೆ ನಾನು 2021ರಲ್ಲಿ ತಾವರೆಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಆದಾಗಿನಿಂದಲೂ ಮನವಿ ಮಾಡುತ್ತಿದ್ದೇವೆ.

ನಮ್ಮ ಬೇಡಿಕೆ ತಾಲೂಕು ಆಡಳಿತ ಮೆಳೆಕೋಟೆ ಗ್ರಾಮದ ಸ.ನಂ 92ರಲ್ಲಿ 2 ಎಕರೆ ಜಮೀನನ್ನು ಮೆಳೆಕೋಟೆ ಗೊಲ್ಲರಹಟ್ಟಿ ಗ್ರಾಮದ ನಿವೇಶನ ರಹಿತರಿಗೆ ಆಶ್ರಯ ಯೋಜನೆಯಡಿ ನಿವೇಶನ ಹಂಚಿಕೆ ಮಾಡಲು ಜಮೀನು ಮಂಜೂರಾಗಿ ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳ ಹೆಸರಿಗೆ ಸದರಿ ಜಮೀನು ಇದ್ದು, ಈ ಜಮೀನನ್ನು ತಾವರೆಕೆರೆ ಪಂಚಾಯಿತಿಗೆ ಹಸ್ತಾಂತರಿಸಿಕೊಂಡು ಮೆಳೆಕೋಟೆ ಗೊಲ್ಲರಹಟ್ಟಿ ಗ್ರಾಮಸ್ಥರಿಗೆ ನಿವೇಶನ ಹಂಚಿಕೆ ಮಾಡಬೇಕು. ಆದರೆ ಇಲ್ಲಿನ ಪಿಡಿಒ ಇದಕ್ಕೆ ಸ್ಪಂದಿಸದೆ ನಿರ್ಲಕ್ಷ ತೋರಿಸುತ್ತಿದ್ದಾರೆ. ಹಲವಾರು ಬಾರಿ ನಾವು ಮನವಿ ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಉಡಾಫೇ ಉತ್ತರ ನೀಡುತ್ತಾರೆ. ಶೀಘ್ರದಲ್ಲಿ ನಮ್ಮ ಬೇಡಿಕೆ ಈಡೇರಿಸದಿದ್ದರೆ ತಾವರೆಕೆರೆ ಗ್ರಾಮ ಪಂಚಾಯಿತಿ ಮುಂದೆ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.

ಚಿದಾನಂದ್ ಎಂ.ಗೌಡ ಭೇಟಿ:

ಪ್ರತಿಭಟನೆ ಸ್ಥಳಕ್ಕೆ ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಅವರು ಭೇಟಿ ನೀಡಿ ಪ್ರತಿಭಟನಾಕಾರರ ಸಮಸ್ಯೆಗಳನ್ನು ಆಲಿಸಿ ಮೆಳೆಕೋಟೆ ಗೊಲ್ಲರಹಟ್ಟಿಯಲ್ಲಿ ಕಾಡುಗೊಲ್ಲ ಸಮುದಾಯದವರು ಸುಮಾರು ೩೦ಕ್ಕೂ ಹೆಚ್ಚು ವರ್ಷಗಳಿಂದ ವಾಸ ಮಾಡುತ್ತಿದ್ದಾರೆ. ಆದರೆ ಮೆಳೆಕೋಟೆ ಗೊಲ್ಲರಹಟ್ಟಿ ಗ್ರಾಮದ ಸಮಸ್ಯೆ ಅಧಿಕಾರಿಗಳ ಗಮನಕ್ಕಾಗಲಿ ಸರ್ಕಾರದ ಗಮನಕ್ಕೆ ಬಂದಿಲ್ಲ. ಬಿಜೆಪಿ ರ್ಕಾರದ ಅವಧಿಯಲ್ಲಿ ಮೆಳೇಕೋಟೆ ಗೊಲ್ಲರಹಟ್ಟಿ ಗ್ರಾಮಕ್ಕೆ 2 ಎಕರೆ ಜಮೀನು ಮಂಜೂರು ಮಾಡಲಾಗಿದೆ. ಆದರೆ ಇದುವರೆಗೂ ನಿವೇಶನ ಹಂಚಿಕೆ ಮಾಡಲಾಗಿಲ್ಲ. ಈ ಕೂಡಲೇ ತಾಲೂಕು ಆಡಳಿತ ಕ್ರಮ ಕೈಗೊಂಡು ಶೀಘ್ರ ನಿವೇಶನಗಳನ್ನು ಹಂಚಿಕೆ ಮಾಡಬೇಕು ಎಂದರು.

ಪ್ರತಿಭಟನೆಯಲ್ಲಿ ಗ್ರಾಮಸ್ಥರಾದ ಈರಣ್ಣ ಎಂ.ವಿ., ಮಾರಪ್ಪ, ಡಿ. ವೀರಪ್ಪ, ಶಿವಣ್ಣ, ಮಧುಸೂದನ್ ಗೌಡಪ್ಪ, ಗ್ರಾ.ಪಂ. ಸದಸ್ಯ ಶಿವು ಸ್ನೇಹಪ್ರಿಯ, ಬಿಜೆಪಿ ಗ್ರಾಮಂತರ ಅಧ್ಯಕ್ಷ ಈರಣ್ಣ ಪಟೇಲ್, ಚಿಕ್ಕಣ್ಣ, ರಾಮಣ್ಣ, ನಾಗಭೂಷಣ ಸೇರಿದಂತೆ ಊರಿನ ಗ್ರಾಮಸ್ಥರು ಭಾಗವಹಿಸಿದ್ದರು.

೨೮ಶಿರಾ೨: ಶಿರಾ ತಾಲೂಕಿನ ಗೌಡಗೆರೆ ಹೋಬಳಿಯ ಮೆಳೇಕೋಟೆ ಗೊಲ್ಲರಟ್ಟಿ ಗ್ರಾಮದಲ್ಲಿ ನಿವೇಶನಕ್ಕಾಗಿ ಕಾಡುಗೊಲ್ಲ ಸಮುದಾಯದವರು ಪ್ರತಿಭಟನೆ ನಡೆಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರದಿಂದ ಗೋಬ್ಯಾಕ್‌ ಗೌರ್ನರ್‌ ಅಭಿಯಾನ ಚಿಂತನೆ
ವಿಧಾನ ಕದನಾಧಿವೇಶನ