ಇಂದು ಅಥಣಿಯಲ್ಲಿ ಪಂಚಮಸಾಲಿ ಸಮಾಜದಿಂದ ಪ್ರತಿಭಟನೆ

KannadaprabhaNewsNetwork |  
Published : Dec 12, 2024, 12:30 AM IST
ಅಥಣಿ ಪಟ್ಟಣದಲ್ಲಿ ಪಂಚಮಸಾಲಿ ಸಮುದಾಯದ ಚಿಕ್ಕೋಡಿ ಜಿಲ್ಲಾ ಅಧ್ಯಕ್ಷ ಧರೇಪ್ಪ ಟಕ್ಕಣ್ಣವರ ಮುಖಂಡರ ಸಭೆಯ ನಂತರ ಸುದ್ದಿಗರೊಂದಿಗೆ ಮಾತನಾಡಿದರು. | Kannada Prabha

ಸಾರಾಂಶ

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನ ಸಂದರ್ಭದಲ್ಲಿ ಮಂಗಳವಾರ ನಡೆದ ಪಂಚಮಸಾಲಿ ಸಮಾಜದ ಹಾಕ್ಕೋತಾಯ ಪ್ರತಿಭಟನೆಯಲ್ಲಿ ಪೊಲೀಸರು ಲಾಟಿ ಪ್ರಹಾರ ಮಾಡಿದ್ದು, ಅನೇಕ ಸಮಾಜ ಬಂಧುಗಳ ಮೇಲೆ ಹಲ್ಲೆ ಮಾಡಿ, ಸಮಾಜದ ಮುಖಂಡರನ್ನು ಬಂಧಿಸಿರುವುದನ್ನು ಖಂಡಿಸಿ ಡಿ.12ರಂದು ಅಥಣಿ ಪಟ್ಟಣದಲ್ಲಿ ಪಂಚಮಸಾಲಿ ಸಮಾಜ ಬಂಧುಗಳಿಂದ ಪ್ರತಿಭಟನೆ ಕೈಗೊಳ್ಳಲಾಗಿದೆ ವೀರಶೈವ ಪಂಚಮಶಾಲಿ ಸಮಾಜದ ಚಿಕ್ಕೋಡಿ ಜಿಲ್ಲಾ ಅಧ್ಯಕ್ಷ ಧರೆಪ್ಪ ಟಕ್ಕಣ್ಣವರ ಹೇಳಿದರು.

ಕನ್ನಡಪ್ರಭ ವಾರ್ತೆ ಅಥಣಿ

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನ ಸಂದರ್ಭದಲ್ಲಿ ಮಂಗಳವಾರ ನಡೆದ ಪಂಚಮಸಾಲಿ ಸಮಾಜದ ಹಾಕ್ಕೋತಾಯ ಪ್ರತಿಭಟನೆಯಲ್ಲಿ ಪೊಲೀಸರು ಲಾಟಿ ಪ್ರಹಾರ ಮಾಡಿದ್ದು, ಅನೇಕ ಸಮಾಜ ಬಂಧುಗಳ ಮೇಲೆ ಹಲ್ಲೆ ಮಾಡಿ, ಸಮಾಜದ ಮುಖಂಡರನ್ನು ಬಂಧಿಸಿರುವುದನ್ನು ಖಂಡಿಸಿ ಡಿ.12ರಂದು ಅಥಣಿ ಪಟ್ಟಣದಲ್ಲಿ ಪಂಚಮಸಾಲಿ ಸಮಾಜ ಬಂಧುಗಳಿಂದ ಪ್ರತಿಭಟನೆ ಕೈಗೊಳ್ಳಲಾಗಿದೆ ವೀರಶೈವ ಪಂಚಮಶಾಲಿ ಸಮಾಜದ ಚಿಕ್ಕೋಡಿ ಜಿಲ್ಲಾ ಅಧ್ಯಕ್ಷ ಧರೆಪ್ಪ ಟಕ್ಕಣ್ಣವರ ಹೇಳಿದರು.

ಪಟ್ಟಣದಲ್ಲಿ ಸಮಾಜ ಮುಖಂಡರ ಪೂರ್ವಭಾವಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೀರಶೈವ ಪಂಚಮಸಾಲಿ ಸಮಾಜಕ್ಕೆ ರಾಜ್ಯ ಸರ್ಕಾರ 2ಎ ಮೀಸಲಾತಿ ನೀಡಬೇಕು ಎಂಬ ಬೇಡಿಕೆಗೆ ಆಗ್ರಹಿಸಿ ಕೂಡಲಸಂಗಮದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿಗಳ ಮತ್ತು ಸಮಾಜದ ಮುಖಂಡರ ನೇತೃತ್ವದಲ್ಲಿ ನಡೆದಿರುವ ಹೋರಾಟವನ್ನು ರಾಜ್ಯ ಸರ್ಕಾರ ಹತ್ತಿಕುವ ಪ್ರಯತ್ನ ಮಾಡುತ್ತಿದೆ. ಮಂಗಳವಾರ ಬೆಳಗಾವಿಯಲ್ಲಿ ನಡೆದ ಹೋರಾಟದಲ್ಲಿ ಅನೇಕ ಸಮಾಜ ಬಂಧುಗಳ ಮೇಲೆ ಪೊಲೀಸರು ಲಾಟಿ ಪ್ರಹಾರ ನಡೆಸಿ, ಹಲ್ಲೆ ಮಾಡಿದ್ದಾರೆ. ಮುಖ್ಯಮಂತ್ರಿಗಳು ಮತ್ತು ಸಂಬಂಧಪಟ್ಟ ಸಚಿವರು ನಮ್ಮ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿಲ್ಲ. ನಮ್ಮ ಬೇಡಿಕೆ ಈಡಿರುವವರಿಗೆ ಕೂಡಲಸಂಗಮ ಪೀಠದ ಜಗದ್ಗುರುಗಳ ನೇತೃತ್ವದಲ್ಲಿ ಹೋರಾಟ ನಿರಂತರವಾಗಿರುತ್ತದೆ ಎಂದು ತಿಳಿಸಿದರು. ಪಂಚಮಸಾಲಿ ಸಮಾಜದ ತಾಲೂಕು ಅಧ್ಯಕ್ಷ ಅವಿನಾಶ ನಾಯಕ ಮಾತನಾಡಿ, ಪಂಚಮಸಾಲಿ ಸಮುದಾಯದ ಹೋರಾಟವನ್ನು ಹತ್ತಿಕುವ ಮತ್ತು ಲಾಟಿ ಪ್ರಹಾರದ ಪ್ರಕರಣವನ್ನು ಖಂಡಿಸಿ ಪಂಚಮಸಾಲಿ ಸಮುದಾಯದ ವತಿಯಿಂದ ಅಥಣಿ ಪಟ್ಟಣದಲ್ಲಿ ಡಿ.12ರಂದು ಬೆಳಗ್ಗೆ 9 ಗಂಟೆಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಸಮಾಜ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಪಂಚಮಸಾಲಿ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ