ರಸ್ತೆಯಲ್ಲಿ ಬಾಳೆಗಿಡ ನೆಟ್ಟು ಪ್ರತಿಭಟನೆ

KannadaprabhaNewsNetwork |  
Published : Oct 29, 2025, 01:45 AM IST
ಬಸ್ ನಿಲ್ದಾಣದ ಎದುರಿನ ರಸ್ತೆಯಲ್ಲಿ ಬಾಳೆಗಿಡ ನೆಟ್ಟು ಪ್ರತಿಭಟಿಸಿ ಸಾರ್ವಜನಿಕರು | Kannada Prabha

ಸಾರಾಂಶ

ರಸ್ತೆ ದುರಸ್ತಿ ಮಾಡದ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ವರ್ತನೆ ಖಂಡಿಸಿ ಹೊನ್ನಾವರ ಉಳಿಸಿ ಬೆಳೆಸಿ ಸಂಘಟನೆಯವರು ಹಾಗೂ ಆಟೋ ಚಾಲಕರು ಪಟ್ಟಣದ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಹೊಂಡದಲ್ಲಿ ಬಾಳೆಗಿಡ ನೆಟ್ಟು ವಿನೂತನ ಪ್ರತಿಭಟನೆ ನಡೆಸಿದರು.

ದ್ವಿಚಕ್ರ, ರಿಕ್ಷಾ ಚಾಲಕರು ಪ್ರತಿನಿತ್ಯ ವಾಹನ ದುರಸ್ತಿಗೆ ಹಣ ವ್ಯಯಿಸುವ ದುಸ್ಥಿತಿ ಕನ್ನಡಪ್ರಭ ವಾರ್ತೆ ಹೊನ್ನಾವರ

ರಸ್ತೆ ದುರಸ್ತಿ ಮಾಡದ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ವರ್ತನೆ ಖಂಡಿಸಿ ಹೊನ್ನಾವರ ಉಳಿಸಿ ಬೆಳೆಸಿ ಸಂಘಟನೆಯವರು ಹಾಗೂ ಆಟೋ ಚಾಲಕರು ಪಟ್ಟಣದ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಹೊಂಡದಲ್ಲಿ ಬಾಳೆಗಿಡ ನೆಟ್ಟು ವಿನೂತನ ಪ್ರತಿಭಟನೆ ನಡೆಸಿದರು.

ಬಸ್ ನಿಲ್ದಾಣಕ್ಕೆ ಆಗಮಿಸುವ ಕೋರ್ಟ್ ರಸ್ತೆಯು ಸಹ ಹೊಂಡಮಯವಾಗಿದೆ. ದುರ್ಗಾಕೇರಿ, ಪ್ರಭಾತನಗರ, ರಾಯಲಕೇರಿ, ಸೇರಿದಂತೆ ಪಟ್ಟಣದ ವಿವಿಧ ಭಾಗದಲ್ಲಿ ರಸ್ತೆಗಳು ಹೊಂಡಮಯವಾಗಿದ್ದು, ಸಾರ್ವಜನಿಕರು ಸಂಚರಿಸಲು ಹರಸಾಹಸ ಪಡುವಂತಾಗಿದೆ. ಹೊಂಡ ತಪ್ಪಿಸಲು ಹೋಗಿ ಹಲವರು ಬಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಶಾಲಾ ಮಕ್ಕಳು ಸಮವಸ್ತ್ರ ಧರಿಸಿ ಹೋಗುವಾಗ ವಾಹನ ಬಂದಾಗ ಕೆಸರುಮಯ ನೀರು ಸಿಂಪಡಣೆಯಾದ ನಿದರ್ಶನಗಳು ಆಗಿವೆ. ದ್ವಿಚಕ್ರ ಹಾಗೂ ರಿಕ್ಷಾ ಚಾಲಕರು ಪ್ರತಿನಿತ್ಯ ವಾಹನ ದುರಸ್ತಿಗೆ ಹೆಚ್ಚಿನ ಹಣ ವ್ಯಯಿಸುವ ದುಸ್ಥಿತಿ ನಿರ್ಮಾಣವಾಗಿದೆ.

ಹೊನ್ನಾವರ ಉಳಿಸಿ ಬೆಳೆಸಿ ಸಂಘಟನೆಯ ಅಧ್ಯಕ್ಷ ಜಿ.ಎನ್. ಗೌಡ ಮಾತನಾಡಿ, ಪಟ್ಟಣದ ರಸ್ತೆಗಳು ಹೊಂಡಮಯವಾಗಿದೆ. ಬಸ್ ನಿಲ್ದಾಣಕ್ಕೆ ನಿತ್ಯ ಸಾವಿರಾರು ಜನರು ಬರುತ್ತಾರೆ. ಅಲ್ಲದೇ ಬೇರೆ ತಾಲೂಕು, ಜಿಲ್ಲೆಗೆ ತೆರಳುವ ಬಸ್ ನಿತ್ಯ ಬರುವಾಗ ಈ ಮುಂಭಾಗದ ಹೊಂಡದಿಂದ ಹೊನ್ನಾವರದ ಮಾನ ಹರಾಜು ಆಗುತ್ತಿದೆ. ವಾಹನ ಸವಾರರು ಹಾಗೂ ಸಾರ್ವಜನಿಕರ ಸಮಸ್ಯೆ ಮನಗಂಡು ಸಾಂಕೇತಿಕವಾಗಿ ಇಂದು ಪ್ರತಿಭಟನೆ ಮಾಡಲಾಗಿದೆ. 15 ದಿನದೊಳಗೆ ಹೊಂಡಮಯ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳದೇ ಹೊದಲ್ಲಿ ಪಪಂ ಮುಂದೆ ಜನಪ್ರತಿನಿಧಿಗಳ ಮನೆ ಹಾಗೂ ಕಚೇರಿಯ ಎದುರು ಸಾರ್ವಜನಿಕರು, ರಿಕ್ಷಾ ಚಾಲಕರ ಸಹಕಾರದ ಮೇರೆಗೆ ಬೃಹತ್ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಉದ್ಯಮಿ ಅನುಪ ಪ್ರಭು, ಪರಮೇಶ್ವರ ಮೇಸ್ತ, ಗಣಪತಿ ಗೌಡ, ರಾಜೇಂದ್ರ ಪ್ರಭು, ಶಂಕರ ಮೇಸ್ತ, ಪ್ರಕಾಶ ಪಿಂಟೋ, ರಾಮನಾಥ ನಾಯ್ಕ, ಮಹೇಶ ಭಂಡಾರಿ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾಯಕತ್ವ ಗೊಂದಲ ಮಧ್ಯೆ 13 ಕೈ ಶಾಸಕರು ವಿದೇಶಕ್ಕೆ :
ವಿದ್ಯಾರ್ಥಿಗಳ ಗೋಳು, ಕೇಳೋರು ಯಾರು?