ಬ್ಯಾಡಗಿಯಲ್ಲಿ ರಸ್ತೆ ಗುಂಡಿಯಲ್ಲಿ ಸಸಿ ನೆಟ್ಟು ಪ್ರತಿಭಟನೆ

KannadaprabhaNewsNetwork |  
Published : Jul 23, 2025, 12:30 AM IST
ಮ | Kannada Prabha

ಸಾರಾಂಶ

ಚಿಕ್ಕಣಜಿ ಗ್ರಾಮದ ಅಂಗನವಾಡಿ ಹಾಗೂ ಶಾಲೆಗಳ ಮುಂದೆಯೇ ರಸ್ತೆಯಲ್ಲಿ ದೊಡ್ಡ ದೊಡ್ಡ ಗುಂಡಿಗಳು ಬಿದ್ದು ರಸ್ತೆ ಅದ್ವಾನವಾಗಿವೆ. ಇದರಿಂದ ಮಕ್ಕಳು ರಸ್ತೆ ದಾಟಿ ಹೋಗುವುದು ಕಷ್ಟಸಾಧ್ಯವಾಗಿದೆ.

ಬ್ಯಾಡಗಿ: ತಾಲೂಕಿನ ಚಿಕ್ಕಣಜಿ ಗ್ರಾಮದಲ್ಲಿ ಹಾಯ್ದು ಹೋಗಿರುವ ಬೀರೂರು- ಸಮ್ಮಸಗಿ ರಾಜ್ಯ ಹೆದ್ದಾರಿ ದುರಸ್ತಿ ಕಾಣದೇ ಬಿದ್ದ ಗುಂಡಿಗಳಲ್ಲಿ ರೈತ ಸಂಘದ ನೇತೃತ್ವದಲ್ಲಿ ಗ್ರಾಮಸ್ಥರು ಮಂಗಳವಾರ ಗುಂಡಿಗಳಲ್ಲಿ ಸಸಿ ನೆಡುವ ಮೂಲಕ ಪ್ರತಿಭಟನೆ ನಡೆಸಿದರು.ಈ ವೇಳೆ ಮಾತನಾಡಿದ ರೈತ ಸಂಘದ ಸದಸ್ಯ ಮಲ್ಲೇಶಪ್ಪ ಡಂಬಳ, ಗ್ರಾಮದ ಮೂಲಕ ಹಾಯ್ದು ಹೋಗಿರುವ ಬೀರೂರು- ಸಮ್ಮಸಗಿ ರಾಜ್ಯ ಹೆದ್ದಾರಿ ಗ್ರಾಮೀಣ ರಸ್ತೆಗಳಿಂದ ಕಡೆಯಾಗಿದೆ. ಎಲ್ಲೆಂದರಲ್ಲಿ ಬಿದ್ದಿರುವ ತಗ್ಗುಗಳಿಂದ ರಸ್ತೆ ಸಂಚಾರ ದುಸ್ತರವಾಗಿದೆ. ಗ್ರಾಮದ ಎದುರಿಗೆ ಹಾದು ಹೋಗಿರುವ ರಸ್ತೆಯಲ್ಲಿ ಬಿದ್ದಿರುವ ಹತ್ತಾರು ಗುಂಡಿಗಳು, ಸಂಚಾರವನ್ನು ಹದಗೆಡಿಸಿವೆ. ವಾಹನ ಸವಾರರ ಪಾಲಿಗೆ ಕಂಟಕಪ್ರಾಯವಾಗಿ ಪರಿಣಮಿಸಿದೆ. ದುರಸ್ತಿ ಮಾಡುವಂತೆ ಸಾಕಷ್ಟು ಬಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು. ಚಿಕ್ಕಣಜಿ ಗ್ರಾಮದ ಅಂಗನವಾಡಿ ಹಾಗೂ ಶಾಲೆಗಳ ಮುಂದೆಯೇ ರಸ್ತೆಯಲ್ಲಿ ದೊಡ್ಡ ದೊಡ್ಡ ಗುಂಡಿಗಳು ಬಿದ್ದು ರಸ್ತೆ ಅದ್ವಾನವಾಗಿವೆ. ಇದರಿಂದ ಮಕ್ಕಳು ರಸ್ತೆ ದಾಟಿ ಹೋಗುವುದು ಕಷ್ಟಸಾಧ್ಯವಾಗಿದೆ. ಅಲ್ಲದೇ ರಸ್ತೆ ಮಣ್ಣಿನ ರಸ್ತೆಗಿಂತ ಕಡೆಯಾಗಿದೆ. ಇದರಿಂದ ವಾಹನಗಳು ಗುಂಡಿಯಲ್ಲಿ ಸಿಲುಕಿ ಸಂಚಾರ ನರಕವಾಗಿದೆ. ಕೂಡಲೇ ಹಾಳಾಗಿರುವ ರಸ್ತೆ ದುರಸ್ತಿ ಮಾಡಿಸಿ. ಇಲ್ಲದಿದ್ದಲ್ಲಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು. ಈ ವೇಳೆ ನೂರರು ಗ್ರಾಮಸ್ಥರು ಉಪಸ್ಥಿತರಿದ್ದರು.ಬೈಕ್‌ನಲ್ಲಿಟ್ಟಿದ್ದ ₹2 ಲಕ್ಷ ಎಗರಿಸಿದ ಕಳ್ಳರು

ಗುತ್ತಲ: ಪಟ್ಟಣದ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ ಹಣ ಡ್ರಾ ಮಾಡಿಕೊಂಡು ಬೈಕ್‌ನಲ್ಲಿಟ್ಟು ಹೊರಡುತ್ತಿದ್ದ ನಿವೃತ್ತ ಶಿಕ್ಷಕರೊಬ್ಬರ ₹2 ಲಕ್ಷ ಹಣದ ಚೀಲ ಕಳ್ಳತನವಾಗಿರುವ ಘಟನೆ ಸೋಮವಾರ ನಡೆದಿದೆ.ಪಟ್ಟಣದ ನಿವೃತ್ತ ಶಿಕ್ಷಕ ಪಿ.ಎನ್‌. ನೆಗಳೂರಮಠ ಅವರು ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಶಾಖೆಯಲ್ಲಿ ₹೨ ಲಕ್ಷ ಹಣವನ್ನು ಡ್ರಾ ಮಾಡಿಕೊಂಡು ಬೈಕ್‌ನ ಸೈಡ್‌ ಬ್ಯಾಗ್‌ನಲ್ಲಿಟ್ಟುಕೊಂಡು ಬೈಕ್‌ ಚಾಲೂ ಮಾಡಿದ್ದಾರೆ. ಅನುಮಾನಗೊಂಡ ತಕ್ಷಣವೇ ಬ್ಯಾಗ್‌ ಒಪನ್‌ ಆಗಿರುವುದನ್ನು ಗಮನಿಸಿ ಬ್ಯಾಗ್‌ ತೆರೆದಾಗ ಹಣ ಮಾಯವಾಗಿತ್ತು. ಕೂಡಲೇ ಎಲ್ಲೆಡೆ ನೋಡಿದರೂ ಕಳ್ಳನ ಸುಳಿವು ಸಿಕ್ಕಿಲ್ಲ. ಪಕ್ಕದಲ್ಲಿಯೇ ಇರುವ ಪೊಲೀಸ್ ಠಾಣೆಯಿಂದ ಸ್ಥಳಕ್ಕೆ ಆಗಮಿಸಿದ ಪೊಲೀಸರು ಎಸ್‌ಬಿಐ ಬ್ಯಾಂಕ್‌ ಸೇರಿದಂತೆ ವಿವಿಧ ಅಂಗಡಿಗಳಲ್ಲಿನ ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಿದ್ದಾರೆ. ಘಟನೆ ಕುರಿತು ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಯ್ಯಪ್ಪನ ಮಾಲೆ ಧರಿಸಿದ ಬಾಲಕನ ಮೇಲೆ ಶಿಕ್ಷಕ ಹಲ್ಲೆ!
ತಂದೆಗೆ ಕಿರುಕುಳ ನೀಡದಂತೆ ಚೈತ್ರಾ ಕುಂದಾಪುರಗೆ ಆದೇಶ