ತಮಿಳು ಕಾಲೋನಿ ನಿವಾಸಿಗಳಿಂದ ಪ್ರತಿಭಟನೆ

KannadaprabhaNewsNetwork |  
Published : Jun 27, 2025, 12:48 AM IST
26ಕೆಎಂಎನ್‌ಡಿ-3ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಎದುರು ತಮಿಳು ಕಾಲೋನಿ ನಿವಾಸಿಗಳು ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾವಣೆಗೊಂಡ ಸಂಘಟನೆಯ ಕಾರ್ಯಕರ್ತರು ಮತ್ತು ನಿವಾಸಿಗಳು ವಾಸಸ್ಥಳ ಬಿಟ್ಟು ಎಲ್ಲಿಯೂ ಹೋಗುವುದಿಲ್ಲ ಎಂದು ಘೋಷಣೆ ಕೂಗಿದರು.

ಮಂಡ್ಯ: ತಮಿಳು ಕಾಲೋನಿ ನಿವಾಸಿಗಳ ವಾಸಕ್ಕೆಂದು ಅಂದಿನ ಮಹಾರಾಜರ ಆಡಳಿತದಲ್ಲಿ ಈ ಜಮೀನನ್ನು ಕೊಡುಗೆ ನೀಡಿದ್ದಾರೆ, ನಾವು ಈ ವಾಸಸ್ಥಳ ಖಾಲಿ ಮಾಡುವುದಿಲ್ಲ, ಹಾಗಾಗಿ ನಮ್ಮನ್ನು ಒಕ್ಕಲೆಬ್ಬಿಸಬಾರದು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ತಮಿಳು ನಿವಾಸಿಗಳು ಮತ್ತು ಜೈಭೀಮ್‌ ಸಂಘಟನೆಯ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾವಣೆಗೊಂಡ ಸಂಘಟನೆಯ ಕಾರ್ಯಕರ್ತರು ಮತ್ತು ನಿವಾಸಿಗಳು ವಾಸಸ್ಥಳ ಬಿಟ್ಟು ಎಲ್ಲಿಯೂ ಹೋಗುವುದಿಲ್ಲ ಎಂದು ಘೋಷಣೆ ಕೂಗಿದರು.

ಕೆಲವರು ನಮ್ಮನ್ನು ಖಾಲಿ ಮಾಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಮಿಮ್ಸ್‌ನವರು 2010 ರಲ್ಲಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದು, 2015 ರಲ್ಲಿ ತೆರವುಗೊಳಿಸಲು ಆದೇಶ ನೀಡಿದ ನಂತರ ನಾವೆಲ್ಲರೂ ಹೈಕೋರ್ಟ್‌ಗೆ ಹೋಗಿ ತಡೆಯಾಜ್ಞೆ ತಂದಿರುತ್ತೇವೆ. ಇಷ್ಟಿದ್ದರೂ ನಮ್ಮನ್ನು ಖಾಲಿ ಮಾಡಿಸಲು ಪ್ರಯತ್ನಿಸಿರುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ತಮಿಳು ಕಾಲೋನಿಯ ನಿವಾಸಿಗಳು ಒಟ್ಟು 251 ಕುಟುಂಬಗಳು ವಾಸಿಸುತ್ತಿದ್ದಾರೆ, ಹೈಕೋರ್ಟ್‌ನಲ್ಲಿ ಹಲವು ಬಾರಿ ನಮ್ಮ ಪರವಾಗಿಯೇ ಆದೇಶ ಬಂದಿದೆ. ಈ ಸ್ಥಳಕ್ಕೆ ಸಂಬಂಧಿಸಿದಂತೆ ಹಲವು ಅಗತ್ಯ ದಾಖಲೆಗಳನ್ನು ನಾವು ಹೊಂದಿದ್ದೇವೆ. ಇದನ್ನು ಕೂಲಂಕುಷವಾಗಿ ಪರಿಶೀಲನೆ ನಡೆಸಿ ನಮಗೆ ನ್ಯಾಯ ದೊರಕಿಸಬೇಕು ಎಂದು ಮನವಿ ಮಾಡಿದರು.

ಸಂಘಟನೆಯ ವೆಂಕಟೇಶ್‌, ವಿಜಯಕಾಂತ್‌, ಪ್ರಕಾಶ್‌, ನಿವಾಸಿಗಳಾದ ಅನ್‌ಬಳಗನ್‌, ಏಳುಮಲೈ, ಶ್ರೀಕಾಂತ್‌, ಸುರೇಶ್‌, ಮುರುಗನ್‌, ಕೊಂಗನಾಥ್‌ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ