ಹೋರಾಟಗಾರ್ತಿ ನೇಹಾ ಮೇಲೆ ನಡೆದ ದಾಳಿ ಖಂಡಿಸಿ ಪ್ರತಿಭಟನೆ

KannadaprabhaNewsNetwork |  
Published : Aug 10, 2026, 02:45 AM IST
ಹರಪನಹಳ್ಳಿ: ಜಾರ್ಖಂಡನಲ್ಲಿ ಎಐಎಸ್ಎ ರಾಷ್ಟ್ರೀಯ ಅಧ್ಯಕ್ಷೆ ನೇಹಾ ಮೇಲೆ ನಡೆದ ದಾಳಿಯನ್ನು ಖಂಡಿಸಿ ಎಐಎಸ್ಎ ಕಾರ್ಯಕರ್ತರು  ನಗರದಲ್ಲಿ ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಜಾರ್ಖಂಡ್‌ನ ರಾಂಚಿಯಲ್ಲಿ ಅಖಿಲ ಭಾರತ ವಿದ್ಯಾರ್ಥಿ ಸಂಘದ (ಎಐಎಸ್ಎ) ರಾಷ್ಟ್ರೀಯ ಅಧ್ಯಕ್ಷೆ ನೇಹಾ ಅವರ ಮೇಲೆ ನಡೆದ ದಾಳಿಯನ್ನು ಖಂಡಿಸಿ ಎಐಎಸ್ಎ ಕಾರ್ಯಕರ್ತರು ಭಾನುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಹರಪನಹಳ್ಳಿ: ಜಾರ್ಖಂಡ್‌ನ ರಾಂಚಿಯಲ್ಲಿ ಅಖಿಲ ಭಾರತ ವಿದ್ಯಾರ್ಥಿ ಸಂಘದ (ಎಐಎಸ್ಎ) ರಾಷ್ಟ್ರೀಯ ಅಧ್ಯಕ್ಷೆ ನೇಹಾ ಅವರ ಮೇಲೆ ನಡೆದ ದಾಳಿಯನ್ನು ಖಂಡಿಸಿ ಎಐಎಸ್ಎ ಕಾರ್ಯಕರ್ತರು ಭಾನುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು ಜಾರ್ಖಂಡ್‌ನ ರಾಂಚಿಯಲ್ಲಿ ನೇಮಕಾತಿ ಹಗರಣಗಳು ಮತ್ತು ಪ್ರಶ್ನೆಪತ್ರಿಕೆ ಸೋರಿಕೆಗಳ ವಿರುದ್ಧ ಹೋರಾಟದಲ್ಲಿ ಯುವಜನತೆಯೊಂದಿಗೆ ಐಕ್ಯತೆ ವ್ಯಕ್ತಪಡಿಸಲು ಪಾಲ್ಗೊಂಡಿದ್ದ ಎಐಎಸ್ಎ ರಾಷ್ಟ್ರೀಯ ಅಧ್ಯಕ್ಷೆ ನೇಹಾ ಮೇಲೆ ನಡೆದ ದಾಳಿ ತೀವ್ರ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನಿಂದ ದೆಹಲಿ-ಮುಂಬೈನಿಂದ ಪಾಟ್ನಾವರೆಗೆ ದೇಶವನ್ನೇ ವ್ಯಾಪಿಸಿದ ಇತ್ತೀಚಿನ ಯುವಜನರ ಹೋರಾಟದ ಮುಂಚೂಣಿಯಲ್ಲಿ ನಿಂತಿದ್ದು ಯುವತಿಯರು. ಇದನ್ನು ಸಹಿಸಿಕೊಳ್ಳದ ಆರ್ ಎಸ್ ಎಸ್ ಸಂಘ ಪರಿವಾರದವರು ಈ ರೀತಿಯ ಕೃತ್ಯ ನಡೆಸಿದ್ದಾರೆ ಎಂದು ಆರೋಪಿಸಿದರು.

ಮಹಿಳೆಯರನ್ನು ಕೇವಲ ಸಂಸ್ಕೃತಿಯ ಸಂಕೇತಗಳಾಗಿ, ಕುಟುಂಬದ ಗೌರವದ ಹೊರೆ ಹೊರುವವರಾಗಿ, ಪುರುಷಾಧಿಪತ್ಯದ ಆದೇಶ ಪಾಲಿಸುವ ಕಾಲಾಳುಗಳಾಗಿ ಮಾತ್ರ ನೋಡಲು ಬಯಸುವ ಸಂಘ ಪರಿವಾರದ ಸೈದ್ಧಾಂತಿಕ ಯೋಜನೆಗೆ ಮಹಿಳೆಯರು ರಾಜಕೀಯ ನಾಯಕತ್ವವನ್ನು ವಹಿಸುವ ಈ ದೃಶ್ಯವೇ ಅವರಿಗೆ ಅಸಹನೀಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಾರ್ಖಂಡನಲ್ಲಿ ನೇಹಾ ಮತ್ತು ಇತರ ಮಹಿಳಾ ಪ್ರತಿಭಟನಾಕಾರರ ಮೇಲೆ ನಡೆಸಿದ ದಾಳಿಕೊರರನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.ಗುಳ್ಳೆದಹಟ್ಟಿ ಸಂತೋಷ್, ಹುಲಿಕಟ್ಟಿ ಮೈಲಪ್ಪ, ಬಾಗಳಿ ರೇಣುಕಮ್ಮ ಮೊಮ್ಮದ್ ರಫೀಕ್, ನಾರಾಯಣಪುರ ಮಂಗಳಕ್ಕ, ರೂಪ, ವಿದ್ಯರ್ಥಿ ಸಂಘಟನೆ ಮುಖಂಡರಾದ ವಿನಯ್ ಕುಮಾರ್, ಮೋಹನ್, ಕಲೀಮ್ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಂಸ್ಕೃತಿ ಉಳಿವಿಗೆ ಕೆಸರುಗದ್ದೆ ಕ್ರೀಡಾಕೂಟ ಪ್ರೇರಣೆ: ಎಎ. ಸೂಫಿ
ಸಂಘಟನಾ ಸೃಜನ್: ಪೊನ್ನಂಪೇಟೆ ಬ್ಲಾಕ್‌ ಕಾಂಗ್ರೆಸ್ ಮುಖಂಡರ ಸಭೆ