ಕನ್ನಡಪ್ರಭ ವಾರ್ತೆ ಜಮಖಂಡಿ
ಸಂಘಟನೆಗಳ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆದು ಆಕ್ರೋಶ ಹೊರಹಾಕಿದರು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಕರವೇ ತಾಲೂಕು ಉಪಾಧ್ಯಕ್ಷ ಆನಂದ ಕಾಂಬಳೆ, ವೈದ್ಯಕೀಯ ಶಿಕ್ಷಣದ ಪ್ರವೇಶಕ್ಕೆ ನಡೆಸುವ ನೀಟ್ ಪರೀಕ್ಷೆ ಸೋರಿಕೆ ಹಾಗೂ 21 ವಿದ್ಯಾರ್ಥಿಗಳ ಆತ್ನಹತ್ಯೆಗೆ ನೇರವಾಗಿ ಕೇಂದ್ರ ಶಿಕ್ಷಣ ಸಚಿವ ಧಮೇಂದ್ರ ಪ್ರಧಾನ ಹೊಣೆಗಾರರಾಗಿದ್ದಾರೆ. ದೇಶದ ಶಿಕ್ಷಣ ವ್ಯವಸ್ಥೆಗೆ ಇದು ಕಪ್ಪು ಚುಕ್ಕೆ ಇದ್ದಂತೆ. ವಿದ್ಯಾರ್ಥಿಗಳ ಜೀವನದ ಜತೆ ಚಲ್ಲಾಟ ವಾಡುತ್ತಿರುವರು ಅಧಿಕಾರದಲ್ಲಿರ ಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದರು. ಹೈಕೋರ್ಟ್ನ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸ್ವತಂತ್ರ ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಡಿಎಸ್ಎಸ್ ಜಿಲ್ಲಾ ಸಂಚಾಲಕ ಮುತ್ತಣ್ಣ ಮೈತ್ರಿ, ರೈತ ಮುಖಂಡ ರಾಜು ನದಾಫ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕುಮಾರ ಆಲಗೂರ, ಭೀಮ ಆರ್ಮಿ ಜಿಲ್ಲಾಧ್ಯಕ್ಷ ರಮೇಶ್ ಬಲೊಳ್ಳಗಿಡದ ಹಾಗೂ ವಿದ್ಯಾರ್ಥಿನಿ ಕಾವೇರಿ ಯಡಳ್ಳಿ ಮಾತನಾಡಿ, ನೀಟ್ ಪರೀಕ್ಷೆ ಅಕ್ರಮದ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಿ ದೇಶದ ಪರೀಕ್ಷಾ ವ್ಯವಸ್ಥೆಯ ಮೇಲಿನ ವಿಶ್ವಾಸ ಮರುಸ್ಥಾಪಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದರು.