ಕನ್ನಡಪ್ರಭ ವಾರ್ತೆ ಹಲಗೂರು
ಹಲಗೂರು ವೃತ್ತದಲ್ಲಿ ಸೇರಿದ ವೇದಿಕೆ ಕಾರ್ಯಕರ್ತರು, ತಮಿಳುನಾಡಿಗೆ ತಕ್ಷಣವೇ ನೀರು ಬಿಡುತ್ತಿರುವುದನ್ನು ನಿಲ್ಲಿಸಿ ರೈತರಿಗೆ ಬೆಳೆ ಬೆಳೆಯಲು ನೀರು ಬಿಡುವಂತೆ ಸರ್ಕಾರವನ್ನು ಆಗ್ರಹಿಸಿದರು.
ವೇದಿಕೆ ಜಿಲ್ಲಾಧ್ಯಕ್ಷ ಗಿರೀಶ್ ಮಾತನಾಡಿ, ಕಾವೇರಿ ನೀರು ನಿಯಂತ್ರಣ ಸಮಿತಿ ಮತ್ತು ಪ್ರಾಧಿಕಾರ ಜುಲೈ 29ರಿಂದ ಆಗಸ್ಟ್ 24ರವರೆಗೆ ಪ್ರತಿದಿನ 12,000 ಕ್ಯುಸೆಕ್ ನೀರನ್ನು ತಮಿಳುನಾಡಿಗೆ ಬಿಡುವಂತೆ ಆದೇಶ ನೀಡಿದ ಹಿನ್ನೆಲೆ ನೀರು ಬಿಟ್ಟಿದ್ದರೂ ಸಹ ನೆನ್ನೆಯಿಂದ ಮತ್ತೆ ಪ್ರತಿ ದಿನ 9,000 ಕ್ಯುಸೆಕ್ ಬಿಡುವಂತೆ ಹೊಸ ಆದೇಶ ನೀಡಿರುವುದನ್ನು ಖಂಡಿಸಿದರು.ರಾಜ್ಯದ ಜನರಿಗೆ, ರೈತರಿಗೆ ಈ ಆದೇಶ ಮರಣ ಶಾಸನವಾಗಿದೆ. ಮುಂಗಾರು ಮಳೆ ಸರಿಯಾಗಿ ಆಗಿಲ್ಲ. ಬರ ತಾಂಡವವಾಡುತ್ತಿದೆ. ಆದರೂ ನಮ್ಮ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಿಲ್ಲ. ಈ ರಾಜ್ಯದ ರೈತರಿಗೆ ಬರ ಪರಿಹಾರ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದ 30 ಸಂಸದರು ಕಾವೇರಿ ನೀರಿನ ವಿಚಾರದಲ್ಲಿ ಮಹದಾಯಿ ಯೋಜನೆ, ಮೇಕೆದಾಟು ಯೋಜನೆ ಬಗ್ಗೆ ಸದನದಲ್ಲಿ ಧ್ವನಿ ಎತ್ತಿ, ರೈತರಿಗೆ ಬೆಳೆ ಬೆಳೆಯಲು ಸಹಕಾರಿಯಾಗಬೇಕು ಆಗ್ರಹಿಸಿ ನಾಡಕಚೇರಿ ಉಪ ತಹಸೀಲ್ದಾರ್ ಕೆ.ನಟರಾಜ್ ಅವರಿಗೆ ಮನವಿಪತ್ರ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ವೇದಿಕೆ ಹೋಬಳಿ ಅಧ್ಯಕ್ಷ ಸಂತೋಷ್, ಚಂದ್ರು, ಬಸಂತ್ ಕುಮಾರ್, ಪೂರ್ಣಚಂದ್ರ ,ಮುನಿ ಮಹಾದೇವಸ್ವಾಮಿ, ವಾಸೀಮ್ಅಕ್ರಂ , ಅಬ್ದುಲ್ ರಹಮಾನ್, ರಿಯಾಜ್, ಸೇರಿದಂತೆ ಇತರರು ಇದ್ದರು.