59 ಸೂಕ್ಷ್ಮ, ಅಲೆಮಾರಿ ಪರಿಶಿಷ್ಟ ಜಾತಿಗಳ ಸಮೂಹಕ್ಕೆ ಸರ್ಕಾರದ ನಿರ್ಧಾರದಿಂದ ಆಘಾತಕನ್ನಡಪ್ರಭ ವಾರ್ತೆ ಹೂವಿನಹಡಗಲಿ
ಬುಡ್ಗ ಜಂಗಮ ಸಮಾಜದ ತಾಲೂಕು ಅಧ್ಯಕ್ಷ ಶಿವಕುಮಾರ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಒಳ ಮೀಸಲಾತಿ ಕುರಿತು ನ್ಯಾ. ನಾಗಮೋಹನ್ ದಾಸ್ ಶಿಫಾರಸ್ಸಿನಂತೆ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಕುರಿತು ತೆಗೆದುಕೊಂಡಿರುವ ತೀರ್ಮಾನವು, ಪ್ರವರ್ಗ-ಎ ರಲ್ಲಿಯ ಅನುಬಂಧಿತ 59 ಸೂಕ್ಷ್ಮ ಮತ್ತು ಅಲೆಮಾರಿ ಪರಿಶಿಷ್ಟ ಜಾತಿಗಳ ಸಮೂಹಕ್ಕೆ ಆಘಾತ ಉಂಟು ಮಾಡಿದೆ. ಈ ಕೂಡಲೇ ಅಲೆಮಾರಿಗಳಿಗೆ ಶೇ. 1ರಷ್ಟು ಮೀಸಲಾತಿ ನೀಡಿ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದರು.
ಒಳಮೀಸಲಾತಿಯನ್ನು ಜಾರಿ ಮಾಡುವ ಒತ್ತಡದಲ್ಲಿ ಸರ್ಕಾರವು 101 ಪರಿಶಿಷ್ಟ ಜಾತಿಗಳಿಗೆ ಸೂಕ್ತ ಪ್ರಾತಿನಿಧ್ಯ ಕಲ್ಪಿಸುವಲ್ಲಿ ಮೀಸಲು ಪ್ರಮಾಣವನ್ನು ಎಚ್ಚರಿಕೆಯಿಂದ ನಿಗದಿಪಡಿಸಬೇಕಿತ್ತು. ಅದರಲ್ಲೂ ಅಲೆಮಾರಿಗಳಂತಹ ತಬ್ಬಿಲಿ ಮತ್ತು ಧ್ವನಿ ಇಲ್ಲದ ಸಮುದಾಯಗಳ ವಿಷಯದಲ್ಲಿ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳದೇ ಘೋರ ಅನ್ಯಾಯ ಮಾಡಿದೆ. ಈ ಸರ್ಕಾರದ ಕ್ಯಾಬಿನೆಟ್ನಲ್ಲಿ ಕೈಗೊಂಡ ನಿರ್ಣಯ ಅಲೆಮಾರಿ ಸಮುದಾಯಗಳಿಗೆ ಮರಣ ಶಾಸನವಾಗಿದೆ ಎಂದು ಆಕ್ರೋಶ ಹೊರ ಹಾಕಿದರು.ಅರೆ ಅಲೆಮಾರಿ ಸಮುದಾಯದ ಪರಶುರಾಮ ಅಂಗೂರು ಮಾತನಾಡಿ, ಅಲೆಮಾರಿಗಳನ್ನು ಬಂಜಾರ, ಬೋವಿ, ಕೊರಮ, ಕೊರಚ, ಸಮುದಾಯಗಳ ಜೊತೆಗೆ ಸೇರಿಸಿ ಶೇ.5ರಷ್ಟು ಮೀಸಲಾತಿ ನಿಗದಿ ಮಾಡಿರುವುದರಿಂದ ಅಲೆಮಾರಿಗಳು ಶಾಶ್ವತ ಮೀಸಲಾತಿಯಿಂದ ವಂಚಿತವಾಗಲಿವೆ. ಸಾವಿರಾರು ವರ್ಷಗಳಿಂದ ಅಸ್ಪೃಶ್ಯರಲ್ಲಿ ಅಸ್ಪೃಶ್ಯರಾಗಿಯೇ ಬದುಕಿ ಬಂದ ಈ ಅನಾಥ ಸಮುದಾಯಗಳಿಗೆ ಸ್ವಾತಂತ್ರ್ಯ ನಂತರ ಸಂವಿಧಾನ ಬದ್ಧ ಸೌಲಭ್ಯಗಳಿಂದ ಈವರೆಗೂ ವಂಚಿತವಾಗಿವೆ. ಸೂಕ್ತ ಪ್ರಾತಿನಿಧ್ಯದಿಂದ ದೂರ ಉಳಿದಿರುವ ಸಮುದಾಯಗಳಿಗೆ ಮೀಸಲಾತಿ ಕಲ್ಪಿಸುವುದೇ ಮೀಸಲಾತಿ ಪರಮ ತತ್ವವಾಗಿದೆ ಎಂದರು.
ಈ ಸಂದರ್ಭ ಮೈಲಾರೆಪ್ಪ, ಎಚ್.ಜೆ. ದಾಮಣ್ಣ, ಎಸ್.ಗಿಡ್ಡಪ್ಪ, ಸಿ.ಹನುಮಂತಪ್ಪ, ಎ.ಮಂಜುನಾಥ, ಪೃಥ್ವಿರಾಜು ಸೇರಿದಂತೆ ನೂರಾರು ಅಲೆಮಾರಿ ಸಮುದಾಯದವರು ತಹಸೀಲ್ದಾರ್ ಜಿ.ಸಂತೋಷಕುಮಾರ ಇವರಿಗೆ ಮನವಿ ಸಲ್ಲಿಸಿದರು.ನಾನಾ ವೇಷ ಧರಿಸಿ ಭಾಗಿ: