ಬಿತ್ತನೆ ಬೀಜ, ರಸಗೊಬ್ಬರ ಬೆಲೆ ಇಳಿಕೆಗೆ ಆಗ್ರಹಿಸಿ ಪ್ರತಿಭಟನೆ

KannadaprabhaNewsNetwork |  
Published : Jun 08, 2024, 12:35 AM IST
೭ಕೆಎಂಎನ್‌ಡಿ-೨ಬಿತ್ತನೆ ಬೀಜ, ರಸಗೊಬ್ಬರ ಬೆಲೆ ಇಳಿಸುವಂತೆ ಒತ್ತಾಯಿಸಿ ಪ್ರಾಂತ ರೈತಸಂಘದ ಕಾರ್ಯಕರ್ತರು ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಕಳೆದ ವರ್ಷ ಶತಮಾನದಲ್ಲೇ ಕಂಡರಿಯದ ಭೀಕರ ಬರಗಾಲವನ್ನು ರಾಜ್ಯ ಎದುರಿಸಿತ್ತು. ಯಾವುದೇ ಅರ್ಥಪೂರ್ಣ ಬರ ಪರಿಹಾರ ಕ್ರಮಗಳಿಲ್ಲದೆ ದೊಡ್ಡ ಪ್ರಮಾಣದ ಸಂಕಷ್ಟಕ್ಕೆ ಸಿಲುಕಿ ನರಳುತ್ತಿರುವ ರೈತಾಪಿ ಸಮುದಾಯಕ್ಕೆ ಬಿತ್ತನೆ ಬೀಜ-ರಸಗೊಬ್ಬರಗಳ ಬೆಲೆ ಏರಿಕೆ ಇನ್ನಷ್ಟು ಆರ್ಥಿಕ ಹೊರೆಯಾಗಿದೆ. ಈ ಕೂಡಲೇ ಏರಿಸಿರುವ ಬೆಲೆಗಳನ್ನು ಇಳಿಸಬೇಕು.

ಕನ್ನಡಪ್ರಭ ವಾರ್ತೆ ಮಂಡ್ಯ

ಬಿತ್ತನೆ ಬೀಜ-ರಸಗೊಬ್ಬರ ಬೆಲೆ ಇಳಿಸುವಂತೆ ಒತ್ತಾಯಿಸಿ ನಕಲಿ, ಕಳಪೆ ಬಿತ್ತನೆ ಬೀಜ, ರಸಗೊಬ್ಬರ ಮಾರಾಟ ತಡೆಗಟ್ಟುವುದು, ಸಮರ್ಪಕ ಬರ ಪರಿಹಾರಕ್ಕೆ ಆಗ್ರಹಿಸಿ ಪ್ರಾಂತ ರೈತ ಸಂಘದ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ನಗರದ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಎದುರು ಸೇರಿದ ಕಾರ್ಯಕರ್ತರು, ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ಕಳೆದ ವರ್ಷ ಶತಮಾನದಲ್ಲೇ ಕಂಡರಿಯದ ಭೀಕರ ಬರಗಾಲವನ್ನು ರಾಜ್ಯ ಎದುರಿಸಿತ್ತು. ಯಾವುದೇ ಅರ್ಥಪೂರ್ಣ ಬರ ಪರಿಹಾರ ಕ್ರಮಗಳಿಲ್ಲದೆ ದೊಡ್ಡ ಪ್ರಮಾಣದ ಸಂಕಷ್ಟಕ್ಕೆ ಸಿಲುಕಿ ನರಳುತ್ತಿರುವ ರೈತಾಪಿ ಸಮುದಾಯಕ್ಕೆ ಬಿತ್ತನೆ ಬೀಜ-ರಸಗೊಬ್ಬರಗಳ ಬೆಲೆ ಏರಿಕೆ ಇನ್ನಷ್ಟು ಆರ್ಥಿಕ ಹೊರೆಯಾಗಿದೆ. ಈ ಕೂಡಲೇ ಏರಿಸಿರುವ ಬೆಲೆಗಳನ್ನು ಇಳಿಸಬೇಕು. ಉತ್ತಮ ಮಳೆಯ ನಿರೀಕ್ಷೆಯಲ್ಲಿ ಕೃಷಿ ಚಟುವಟಿಕೆಗಳನ್ನು ನಡೆಸುತ್ತಿರುವ ರೈತರನ್ನು ಬೀಜ-ಗೊಬ್ಬರದ ವ್ಯಾಪಾರಿಗಳು ಶೋಷಣೆ ಮಾಡದಂತೆ ರಕ್ಷಣೆ ಒದಗಿಸಬೇಕು ಎಂದು ಒತ್ತಾಯಿಸಿದರು.

ಬಿತ್ತನೆ ಬೀಜ-ರಸಗೊಬ್ಬರ ಬೆಲೆಗಳನ್ನು ಇಳಿಸಲು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಕ್ರಮ ಕೈಗೊಳ್ಳಬೇಕು. ಕಳಪೆ ಹಾಗೂ ನಕಲಿ ಬಿತ್ತನೆ ಬೀಜ-ರಸಗೊಬ್ಬರಗಳ ಮಾರಾಟವನ್ನು ತಡೆಗಟ್ಟಬೇಕು. ಕೃತಕ ಅಭಾವ ಸೃಷ್ಟಿಸಿ ಕಾಳಸಂತೆಯಲ್ಲಿ ಮಾರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಬಲವಂತದ ಸಾಲ ವಸೂಲಾತಿ ನಿಲ್ಲಬೇಕು. ಬರ ಪರಿಹಾರದ ಹಣವನ್ನು ಸಾಲಕ್ಕೆ ಕಟಾಯಿಸಿಕೊಳ್ಳಬಾರದು. ಒಮ್ಮೆ ಹಣ ಕಡಿತ ಮಾಡಿದ್ದರೆ ಕೂಡಲೇ ರೈತರ ಖಾತೆಗೆ ಹಣ ಮರಳಿಸಲು ಕ್ರಮ ಕೈಗೊಳ್ಳಬೇಕು. ಬೆಳೆ ವಿಮೆ ಪರಿಹಾರ ಇತ್ಯರ್ಥಕ್ಕೆ ಕ್ರಮ ವಹಿಸುವುದು. ಮೈಕ್ರೋ ಫೈನಾನ್ಸ್ ಹಾವಳಿ ತಡೆಗಟ್ಟಿ ಮಹಿಳೆಯರು ಮತ್ತು ಕುಟುಂಬಗಳ ರಕ್ಷಣೆ ಮಾಡಬೇಕು. ಬೆಳೆ ಸರ್ವೆಯನ್ನು ಸಮರ್ಪಕವಾಗಿ ಮಾಡದ ಸಿಬ್ಬಂದಿ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಮುಖಂಡರಾದ ಎನ್.ಎಲ್.ಭರತ್‌ರಾಜ್, ವಿಶ್ವನಾಥ್ ಸೊಳ್ಳೇಪುರ, ಎನ್.ಲಿಂಗರಾಜಮೂರ್ತಿ, ಟಿ.ಎಸ್.ಸಿದ್ದೇಗೌಡ, ಎಂ.ಸಿ. ಮಹದೇವು, ಗುರುಸ್ವಾಮಿ, ಸತೀಶ್ ಗುಳಘಟ್ಟ, ಎ.ಎಲ್.ಶಿವಕುಮಾರ್, ಮರಿಲಿಂಗೇಗೌಡ, ಮುತ್ತುರಾಜು ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ