ಅಕ್ರಮ ಗೋ ಸಾಗಾಟ ತಡೆಯುವಂತೆ ಆಗ್ರಹಿಸಿ ಪ್ರತಿಭಟನೆ

KannadaprabhaNewsNetwork |  
Published : May 23, 2026, 02:00 AM IST
ಹಿರೇಕೆರೂರು ತಾಲೂಕಿನಲ್ಲಿ ಅಕ್ರಮವಾಗಿ ಜರುಗುತ್ತಿರುವ ಗೋ ಸಾಗಾಟ ಮತ್ತು ಗೋ ಹತ್ಯೆ ತಡೆಗಟ್ಟುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಪಟ್ಟಣದ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿ, ತಹಸೀಲ್ದಾರ್ ಎಂ.ರೇಣುಕಾ ಮತ್ತು ಸಿಪಿಐ ಮಂಜುನಾಥ ಪಂಡಿತ ಅವರಿಗೆ ಮನವಿ ಸಲ್ಲಿಸಲಾಯಿತು. | Kannada Prabha

ಸಾರಾಂಶ

ತಾಲೂಕಿನಲ್ಲಿ ಅಕ್ರಮವಾಗಿ ಜರುಗುತ್ತಿರುವ ಗೋ ಸಾಗಾಟ ಮತ್ತು ಗೋ ಹತ್ಯೆ ತಡೆಗಟ್ಟುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಪಟ್ಟಣದ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿ, ತಹಸೀಲ್ದಾರ್ ಎಂ.ರೇಣುಕಾ ಮತ್ತು ಸಿಪಿಐ ಮಂಜುನಾಥ ಪಂಡಿತ ಅವರಿಗೆ ಮನವಿ ಸಲ್ಲಿಸಲಾಯಿತು.

ಹಿರೇಕೆರೂರು: ತಾಲೂಕಿನಲ್ಲಿ ಅಕ್ರಮವಾಗಿ ಜರುಗುತ್ತಿರುವ ಗೋ ಸಾಗಾಟ ಮತ್ತು ಗೋ ಹತ್ಯೆ ತಡೆಗಟ್ಟುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಪಟ್ಟಣದ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿ, ತಹಸೀಲ್ದಾರ್ ಎಂ.ರೇಣುಕಾ ಮತ್ತು ಸಿಪಿಐ ಮಂಜುನಾಥ ಪಂಡಿತ ಅವರಿಗೆ ಮನವಿ ಸಲ್ಲಿಸಲಾಯಿತು.ಅಖಂಡ ಧಾರವಾಡ ವಿಭಾಗದ ಬಜರಂಗದಳ ಸಂಯೋಜಕ ಅನಿಲ್ ಹಲವಾಗಿಲ ಮಾತನಾಡಿ, ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದ್ದರೂ ಪ್ರತಿವರ್ಷ ಬಕ್ರೀದ್ ಹಬ್ಬದ ಸಮಯದಲ್ಲಿ ಮತ್ತು ನಿತ್ಯ ರಾಜಾರೋಷವಾಗಿ ಗೋ ಹತ್ಯೆ ಮಾಡಲಾಗುತ್ತಿದೆ. ಪಟ್ಟಣದಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡಲಾಗುತ್ತಿದೆ. ಇದರ ವಿರುದ್ಧ ಕೂಡಲೇ ಪೊಲೀಸ್ ಮತ್ತು ತಾಲೂಕು ಆಡಳಿತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಜಿಲ್ಲಾ ವಿಶ್ವ ಹಿಂದೂ ಪರಿಷತ್ ಉಪಾಧ್ಯಕ್ಷ ನಾಗರಾಜ ಸರಸಾಪುರ, ಜಿಲ್ಲಾ ಕಾರ್ಯದರ್ಶಿ ಕಿಟ್ಟಿ ಪಾಟೀಲ, ವಿನಾಯಕ ಕರ್ನೂಲ್, ಸಂತೋಷ ಬೆಳಗುತ್ತಿ, ಉಮೇಶ ಬಣಕಾರ, ಬಸವರಾಜ ಓಲೇಕಾರ, ಮೈಲಾರಿ ಮ್ಯಾದಾರ, ಪ್ರಮೋದ ಹಾದ್ರಿಹಳ್ಳಿ, ಅಭಿ ಕಾಯಕದ, ವಿನಾಯಕ ನೇಸ್ವಿ, ಅಖಿಲ ಪಾಟೀಲ, ಮುಕೇಶ ಪಾಟೀಲ, ನವೀನ್ ಕುರಬರ, ನಿಂಗಾಚಾರಿ ಮಾಯಾಚಾರಿ,ಬಸವರಾಜ ಓಲೆಕಾರ, ಹಾಗೂ ಕಾರ್ಯಕರ್ತರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಣಕೋಣ ಗ್ರಿಡ್‌ನಿಂದಲೇ ಮರಳಿ ವಿದ್ಯುತ್ ಸಂಪರ್ಕ: ಗ್ರಾಮಸ್ಥರ ಹರ್ಷ
ನನ್ನ ಗಟ್ಟಿ ಧ್ವನಿ ಅಡಗಿಸಲು ಪ್ಯಾಕೇಜ್ ಮಾಡಿ ಸೋಲಿಸಿದ್ದಾರೆ: ಆಂಜನೇಯ