ರಾಣಿಬೆನ್ನೂರು: ತಾಲೂಕಿನ ಹೂಲಿಹಳ್ಳಿ ಗ್ರಾಮಕ್ಕೆ ಸಮರ್ಪಕವಾಗಿ ಬಸ್ ಸೇವೆ ಒದಗಿಸುವಂತೆ ಹಾಗೂ ಕಡ್ಡಾಯವಾಗಿ ಎಲ್ಲ ಬಸ್ಗಳನ್ನು ನಿಲ್ಲಿಸುವಂತೆ ಆಗ್ರಹಿಸಿ ಎಸ್ಎಫ್ಐ ನೇತೃತ್ವದಲ್ಲಿ ಶನಿವಾರ ಹೂಲಿಹಳ್ಳಿ ಮಾರ್ಗವಾಗಿ ಹೋಗುವ ಎಲ್ಲ ಬಸ್ ಗಳನ್ನು ತಡೆದು ವಿದ್ಯಾರ್ಥಿಗಳು, ಊರಿನ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ರಾಣಿಬೆನ್ನೂರ ಗ್ರಾಮೀಣ ಠಾಣೆ ಪಿಎಸ್ಐ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಹಾಗೂ ಪ್ರತಿಭಟನಾಕಾರರ ಮನವೊಲಿಸಿ ವಿದ್ಯಾರ್ಥಿಗಳ ಪರವಾಗಿ ಘಟಕ ವ್ಯವಸ್ಥಾಪಕರಿಗೆ ಕೂಡಲೇ ವಿದ್ಯಾರ್ಥಿಗಳ ಬೇಡಿಕೆಗಳಿಗೆ ಸ್ಪಂದಿಸಬೇಕು ಎಂದು ಸಂಧಾನ ಸಭೆ ನಡೆಸಿದರು.
ಪುನೀತ್ ಬಣಗಾರ, ವಿನಾಯಕ ಗು. ಬನ್ನಿಹಟ್ಟಿ, ಜೀವನ ಮಲೂರು, ದರ್ಶನ ಮತ್ತೂರು, ಮಹೇಶ ಮೂಡಲಸೀಮಿ, ಚೇತನ್ ಕೆ., ಕಿರಣ್ ಎನ್., ನಿವೇದಿತಾ ಎಸ್., ಮೇಘನಾ ಆರ್.ಡಿ., ಹೇಮಾ ಯು.ಜಿ., ಸವಿತಾ, ಸಹನಾ ಕೆ .ಆರ್., ಶಾರದಾ ಸೇರಿದಂತೆ ವಿದ್ಯಾರ್ಥಿಗಳು, ಊರಿನ ಗ್ರಾಮಸ್ಥರು ಹಾಗೂ ಪೋಲಿಸರು, ಸಾರಿಗೆ ಸಿಬ್ಬಂದಿ ಉಪಸ್ಥಿತರಿದ್ದರು.