ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಪ್ರತಿಭಟನೆ

KannadaprabhaNewsNetwork |  
Published : Feb 23, 2025, 12:31 AM IST
22ಜಿಯುಡಿ1 | Kannada Prabha

ಸಾರಾಂಶ

ಬೆಸ್ಕಾಂ ನಿರ್ಲಕ್ಷ್ಯದಿಂದ ಬಹುತೇಕ ಕೈಗೆ ಬಂದಿರುವ ಆಲೂಗಡ್ಡೆ ಸೇರಿದಂತೆ ಹಲವು ಬೆಳೆ ನೀರಿಲ್ಲದೆ ಒಣಗುತ್ತಿದೆ. ವಿದ್ಯುತ್ ಕೊರತೆಯಿಲ್ಲದಿದ್ದರೂ ವಿದ್ಯುತ್ ನಿರ್ವಹಣೆ ಹಾಗೂ ಹಂಚಿಕೆ ಮಾಡುವಲ್ಲಿ ಬೆಸ್ಕಾಂ ಅಧಿಕಾರಿಗಳು ವಿಫಲರಾಗಿದ್ದಾರೆ. ಮೂರು ತಿಂಗಳ ಹಿಂದೆ ಬೆಸ್ಕಾಂ ಅಧಿಕಾರಿಗಳಿಗೆ ವಿವಿಧ ಗ್ರಾಮಗಳ ವಿದ್ಯುತ್ ವಿತರಣೆಗಾಗಿ ಪೂರ್ವಸಿದ್ಧತೆ ಮಾಡಿಕೊಳ್ಳಲು ಸಲಹೆ ನೀಡಿದ್ದರೂ ನಿರ್ಲಕ್ಷ್ಯ ತೋರಿದ್ದಾರೆ

ಕನ್ನಡಪ್ರಭ ವಾರ್ತೆ ಗುಡಿಬಂಡೆ

ತಾಲೂಕಿನ ವಿವಿಧ ಕಡೆ ರೈತರು ಆಲೂಗಡ್ಡೆ ಬೆಳೆಯನ್ನು ಇಟ್ಟಿದ್ದು, ಇದೀಗ ಅಮಸರ್ಪಕ ವಿದ್ಯುತ್ ಪೂರೈಕೆ ಮಾಡುತ್ತಿರುವುದರಿಂದ ತಮ್ಮ ಬೆಳೆ ನೀರಿಲ್ಲದೇ ಒಣಗುತ್ತಿದೆ. ಕೂಡಲೇ ಸಮರ್ಪಕವಾಗಿ ವಿದ್ಯುತ್ ಪೂರೈಸುವಂತೆ ಒತ್ತಾಯಿಸಿ ಬೆಸ್ಕಾಂ ಕಚೇರಿ ಮುಂಭಾಗ ಶನಿವಾರ ರೈತರು ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅಖಿಲ ಕರ್ನಾಟಕ ರೈತ ಸಂಘಟನೆಯ ಜಿಲ್ಲಾ ಸಹ ಸಂಚಾಲಕ ಎಚ್.ಪಿ.ಲಕ್ಷ್ಮೀನಾರಾಯಣ, ಎಲ್ಲೆಡೆ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ನೀರು ಹಾಗೂ ವಿದ್ಯುತ್ ಪೂರೈಕೆ ಕಷ್ಟವಾಗುತ್ತಿದೆ. ಜೊತೆಗೆ ತಾವು ಸಾಲಸೋಲ ಮಾಡಿ ಬೆಳೆದಿರುವ ಬೆಳೆ ಎಲ್ಲಿ ಕೈಕೊಡುತ್ತದೆಯೋ ಎಂಬ ಆತಂಕದಲ್ಲಿ ರೈತರಲ್ಲಿ ಕಾಡುತ್ತಿದೆ ಎಂದರು.

ಒಣಗುತ್ತಿರುವ ಆಲೂಗಡ್ಡೆ ಬೆಳೆ

ಬೆಸ್ಕಾಂ ನಿರ್ಲಕ್ಷ್ಯದಿಂದ ಬಹುತೇಕ ಕೈಗೆ ಬಂದಿರುವ ಆಲೂಗಡ್ಡೆ ಸೇರಿದಂತೆ ಹಲವು ಬೆಳೆ ನೀರಿಲ್ಲದೆ ಒಣಗುತ್ತಿದೆ. ವಿದ್ಯುತ್ ಕೊರತೆಯಿಲ್ಲದಿದ್ದರೂ ವಿದ್ಯುತ್ ನಿರ್ವಹಣೆ ಹಾಗೂ ಹಂಚಿಕೆ ಮಾಡುವಲ್ಲಿ ಬೆಸ್ಕಾಂ ಅಧಿಕಾರಿಗಳು ವಿಫಲರಾಗಿದ್ದಾರೆ. ಮೂರು ತಿಂಗಳ ಹಿಂದೆ ಬೆಸ್ಕಾಂ ಅಧಿಕಾರಿಗಳಿಗೆ ಹಳೇಗುಡಿಬಂಡೆ, ಬೊಮ್ಮಗಾನಹಳ್ಳಿ, ಪೋಲಂಪಲ್ಲಿ ಸೇರಿದಂತೆ ವಿವಿಧ ಗ್ರಾಮಗಳಿಗೆ ವಿದ್ಯುತ್ ವಿತರಣೆಗಾಗಿ ಪೂರ್ವಸಿದ್ಧತೆ ಮಾಡಿಕೊಳ್ಳಲು ಸಲಹೆ ನೀಡಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಿದರು.

ನಂತರ ಸ್ಥಳಕ್ಕೆ ಆಗಮಿಸಿದ ಬೆಸ್ಕಾಂ ಸಹಾಯಕ ಎಂಜಿನಿಯರ್ ಸದಾಶಿವ ಪ್ರತಿಭಟನಕಾರರೊಂದಿಗೆ ಮಾತನಾಡಿ, ನಾವು ಇಂದಿನಿಂದ ಹಗಲು ರಾತ್ರಿ ಶ್ರಮವಹಿಸಿ ವಿದ್ಯುತ್ ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಮತ್ತೆ ಹೋರಾಟದ ಎಚ್ಚರಿಕೆ

ಈ ಸಮಯದಲ್ಲಿ ಕೆಪಿಟಿಸಿಎಲ್ ಸಹಾಯಕ ಎಂಜಿನಿಯರ್ ಮಂಜುನಾಥ ನಾಯ್ಡು ಹಾಜರಿದ್ದರು. ನಂತರದಲ್ಲಿ ಎಫ್ 6 ವಿದ್ಯುತ್ ಹೆಚ್ಚುವರಿ ಪೂರೈಕೆ ಲೈನ್ ಪ್ರಾರಂಭವಾಗಬೇಕು. ಇಲ್ಲವಾದರೆ ಸೋಮವಾರದಿಂದ ಸಾವಿರಾರು ರೈತರೊಂದಿಗೆ ಪ್ರತಿಭಟನೆ ನಡೆಸಲಿದ್ದೇವೆ ಎಂದು ರೈತ ಮುಖಂಡರು ಎಚ್ಚರಿಕೆ ನೀಡಿದರು.

ಈ ವೇಳೆ ಅಖಿಲ ಕರ್ನಾಟಕ ರೈತ ಸಂಘಟನೆಯ ಜಿಲ್ಲಾ ಸಹ ಸಂಚಾಲಕ ಎಚ್‌.ಪಿ.ಲಕ್ಷ್ಮೀನಾರಾಯಣ, ಪಿ.ಎಲ್.ಡಿ ಬ್ಯಾಂಕ್ ನಿರ್ದೇಶಕ ಪೋಲಂಪಲ್ಲಿ ಮಂಜುನಾಥ್, ರೈತ ಸಂಘದ ಮನೋಜ್, ಬೊಮ್ಮಗಾನಹಳ್ಳಿ ಕೃಷ್ಣಪ್ಪ, ಶ್ರೀನಿವಾಸ್, ದಿನ್ನೆಗಂಗಪ್ಪ, ಬೊಮ್ಮನಹಳ್ಳಿ ಅಶ್ವತ್ಥರೆಡ್ಡಿ, ಗ್ಯಾದರಮಾಕಲಹಳ್ಳಿ ಗೋಪಾಲರೆಡ್ಡಿ ಸೇರಿದಂತೆ ಹಲವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅದೃಶ್ಯ ಜನಾಂಗ ಪ್ರಜಾಪ್ರಭುತ್ವಕ್ಕೆ ಮಾರಕ: ಡಾ.ಡೊಮಿನಿಕ್
ಫೆ.೨೫ರಂದು ಮಂಡ್ಯದಲ್ಲಿ ಕನ್ನಡ ಮೊದಲು ಆಟೋ ರ್‍ಯಾಲಿ