-ಅಬಿವಿಪಿಯಿಂದ ಮಿನಿವಿಧಾನಸೌಧ ಕಚೇರಿಯ ಮುಂದೆ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ಸಿಂಧನೂರು
ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಯಲ್ಲಿ ನಡೆದ ಲೋಪಗಳಿಂದ ಸಮಸ್ಯೆಗೊಳಗಾದ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು. ಕೆಪಿಎಸ್ಸಿಯಲ್ಲಿ ನಡೆದಿರುವ ಹಗರಣದ ಕುರಿತು ಉನ್ನತ ಮಟ್ಟದ ತನಿಖಾ ಸಂಸ್ಥೆಯಿಂದ ಸಮಗ್ರ ತನಿಖೆ ನಡೆಸಬೇಕು ಹಾಗೂ ಖಾಲಿಯಿರುವ ಶಿಕ್ಷಕರ ಹುದ್ದೆಯನ್ನು ತಕ್ಷಣವೇ ಖಾಯಂ ನೇಮಕಾತಿ ಮಾಡಬೇಕು ಎಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಿನಿವಿಧಾನಸೌಧ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿತು.ಕಾರ್ಯದರ್ಶಿ ವೀರಭದ್ರಯ್ಯ ಮಾತನಾಡಿ, ಸಂವಿಧಾನಿಕ ಉನ್ನತ ಸ್ಥಾನದಲ್ಲಿರುವ ಕೆಪಿಎಸ್ಸಿ ಅಧ್ಯಕ್ಷರು ಸುಳ್ಳು ದಾಖಲೆ ಮತ್ತು ಪ್ರಭಾವ ಬಳಸಿ ತಮ್ಮ ಮಕ್ಕಳಿಗೆ ಸರ್ಕಾರಿ ಹುದ್ದೆ ದೊರೆಯುವಂತೆ ಮಾಡಿರುವುದು ಅವರ ಹುದ್ದೆಗೆ ಮಾಡಿದ ಕಳಂಕವಾಗಿದೆ.
ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನಕಿನಲ್ಲಿ ಆ.3, 2026 ರಂದು ನಡೆದ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಯಲ್ಲಿ ಅಭ್ಯರ್ಥಿಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ನಿಗದಿತ ಸಮಯಕ್ಕೆ ನೀಡದ ಪರಿಣಾಮ ಅವ್ಯವಸ್ಥೆ ಉಂಟಾಗಿದೆ.
ಎಬಿವಿಪಿ ಸಹಕಾರ್ಯದರ್ಶಿ ಮೌನೇಶ ವಿಶ್ವಕರ್ಮ, ಸದಸ್ಯರಾದ ಅಭಿಷೇಕ, ಮನೋಜ್, ಗಣೇಶ ಬಾದರ್ಲಿ, ಮಹೇಶ್, ಗುರುಕಿರಣ್ ಶೆಟ್ಟಿ, ಮುತ್ತು, ಪ್ರಶಾಂತ್, ಪ್ರವೀಣ, ಅವಿನಾಶ ಮತ್ತಿತರರು ಇದ್ದರು.
ಫೋಟೋ:11ಕೆಪಿಎಸ್ಎನ್ಡಿ2: