ಬಸ್‌ ನಿಲುಗಡೆಗೆ ಒತ್ತಾಯಿಸಿ ಪ್ರತಿಭಟನೆ

KannadaprabhaNewsNetwork |  
Published : Nov 12, 2025, 02:30 AM IST
ಪೋಟೊ11.15: ಕೊಪ್ಪಳ ತಾಲೂಕಿನ ಬಸಾಪೂರ ಗ್ರಾಮದಲ್ಲಿ ಬಸ್ ಗಳು ನಿಲುಗಡೆ ಮಾಡಲಾರದ ಹಿನ್ನಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಗ್ರಾಮಸ್ಥರು ಬಸ್ ತಡೆದು ಪ್ರತಿಭಟಿಸಿದರು. | Kannada Prabha

ಸಾರಾಂಶ

ಗಂಗಾವತಿಯಿಂದ ಕೊಪ್ಪಳ ಕಡೆಗೆ ಹೋಗುವ ಎಲ್ಲ ಬಸ್ ಬಸಾಪುರ ಮಾರ್ಗವಾಗಿಯೇ ತೆರಳುತ್ತವೆ. ಆದರೆ ಹಲವು ಬಸ್ ಗ್ರಾಮದಲ್ಲಿ ನಿಲುಗಡೆ ಮಾಡುವುದಿಲ್ಲ.

ಕೊಪ್ಪಳ: ತಾಲೂಕಿನ ಬಸಾಪುರ ಗ್ರಾಮದಲ್ಲಿ ಬಸ್ ನಿಲುಗಡೆ ಮಾಡಲಾರದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಗ್ರಾಮಸ್ಥರು ಬಸ್ ತಡೆದು ಪ್ರತಿಭಟಿಸಿದ ಘಟನೆ ಮಂಗಳವಾರ ನಡೆದಿದೆ.

ಬಸಾಪುರು ಗ್ರಾಮದಲ್ಲಿ ಬಸ್‌ ನಿಲ್ಲಿಸಲಾರದ ಹಿನ್ನೆಲೆಯಲ್ಲಿ ಬಸ್‌ ತಡೆದು ಪ್ರತಿಭಟಿಸಿ ಮಾತನಾಡಿದ ಅವರು, ಗ್ರಾಮದಲ್ಲಿ ಬಸ್ ನಿಲ್ಲಿಸದಿದ್ದರೇ ನಾವು ಶಾಲಾ-ಕಾಲೇಜಿಗೆ ತೆರಳುವುದು ಹೇಗೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗಂಗಾವತಿಯಿಂದ ಕೊಪ್ಪಳ ಕಡೆಗೆ ಹೋಗುವ ಎಲ್ಲ ಬಸ್ ಬಸಾಪುರ ಮಾರ್ಗವಾಗಿಯೇ ತೆರಳುತ್ತವೆ. ಆದರೆ ಹಲವು ಬಸ್ ಗ್ರಾಮದಲ್ಲಿ ನಿಲುಗಡೆ ಮಾಡುವುದಿಲ್ಲ. ಜಿಲ್ಲಾ ಕೇಂದ್ರದಿಂದ ಐದಾರು ಕಿಮೀ ದೂರದಲ್ಲಿದ್ದರೂ ನಾವು ಸಕಾಲಕ್ಕೆ ಶಾಲಾ-ಕಾಲೇಜುಗಳಿಗೆ ಹೋಗಲು ಸಾಧ್ಯವಾಗುತ್ತಿಲ್ಲ. ಕಳೆದ ಹಲವು ವರ್ಷಗಳಿಂದ ಈ ಸಮಸ್ಯೆ ಸರಿಪಡಿಸಿ ಎಂದು ಗೊಗರೆಯುತ್ತಿದ್ದರೂ ಯಾರು ಕಿವಿಗೆ ಹಾಕಿಕೊಳ್ಳುತ್ತಿಲ್ಲ ಎಂದು ವಿದ್ಯಾರ್ಥಿಗಳು ಪ್ರತಿಭಟನೆ ವೇಳೆ ಆರೋಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ