ಕನ್ನಡಪ್ರಭ ವಾರ್ತೆ ಬಂಟ್ವಾಳ
ಹಿಂದೂ ಜಾಗರಣ ವೇದಿಕೆಯ ಮುಂಖಡ ನರಸಿಂಹ ಮಾಣಿ ಮಾತನಾಡಿ, ಸರ್ಕಾರದ ಸವಲತ್ತುಗಳನ್ನು ಅಧಿಕಾರಿಗಳ ಜತೆಗೆ ಸೇರಿಕೊಂಡು ಅಧ್ಯಕ್ಷರು ನುಂಗಿ ೧೪ ದಿನ ನ್ಯಾಯಾಂಗ ಬಂಧನ ಅನುಭವಿಸಿದ್ದಾರೆ. ಪ್ರಕರಣಕ್ಕೆ ಸಹಕಾರ ನೀಡಿರುವ ಬಂಟ್ವಾಳ ಇಒ ಅವರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಪುತ್ತೂರು ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪುಣಚ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ಬಾಳೆಕಲ್ಲು, ವಿಶ್ವ ಹಿಂದು ಪರಿಷತ್ ಪ್ರಮುಖ್ ಅಶೋಕ್ ಮಾಣಿಲ, ಪ್ರಮುಖರಾದ ಹರಿಪ್ರಸಾದ್ ಯಾದವ್, ಗಣೇಶ್ ಭಟ್, ಅಜಿತ್ ಭಟ್, ಮನೀಷ್, ಗೋಪಾಲ ಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.ಜಯರಾಮ ಆಳ್ವ ಬದಿಯಾರು ಸ್ವಾಗತಿಸಿದರು. ಯತೀಶ್ ಪೆರುವಾಯಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮೋಕ್ಷಿತ್ ಪೆರುವಾಯಿ ವಂದಿಸಿದರು.ಗ್ರಾ.ಪಂ. ಪಿಡಿಒಗೆ ಮನವಿ ಸಲ್ಲಿಕೆ
ಬೆಳಗ್ಗೆ ಪ್ರತಿಭಟನೆ ಆರಂಭಗೊಳಿಸಿದ ಪ್ರತಿಭಟನಾಕಾರರು ಸ್ಥಳಕ್ಕೆ ಸ್ಥಳಕ್ಕೆ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಆಗಮಿಸಬೇಕೆಂದು ಗ್ರಾಮಸ್ಥರು ಪಟ್ಟು ಹಿಡಿದರು. ಬಳಿಕ ಬಂಟ್ವಾಳ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್ ಸ್ಥಳಕ್ಕೆ ಆಗಮಿಸಿದರಾದರೂ, ಅವರ ಮೇಲೆಯೇ ಆರೋಪ ಮಾಡಿ ಪ್ರತಿಭಟನೆ ನಡೆಸಿದ ಕಾರಣ ಅವರು ಮನವಿ ಸ್ವೀಕರಿಸುವುದಿಲ್ಲ ಎಂದರು. ಬಳಿಕ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದೀಪಕ್ಗೆ ಮನವಿ ಸಲ್ಲಿಸಿ ಪ್ರತಿಭಟನೆ ಕೊನೆಗೊಳಿಸಿದರು.