ಹಕ್ಕುಪತ್ರ ವಿತರಣೆಗೆ ಆಗ್ರಹಿಸಿ ಪ್ರತಿಭಟನೆ

KannadaprabhaNewsNetwork |  
Published : Feb 21, 2025, 11:45 PM IST
ರಾಜೀವ್‌ಗಾಂಧಿ ನಗರದ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸಬೇಕು ಎಂದು ಆಗ್ರಹಿಸಿ ಬಳ್ಳಾರಿಯ ಡಿಸಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ಜರುಗಿತು. ಚಿತ್ರನಟ ಚೇತನ್, ಸಿರಿಗೇರಿ ಪನ್ನರಾಜ್, ಕಟ್ಟೆಸ್ವಾಮಿ ಸೇರಿದಂತೆ ನಿವಾಸಿಗಳು ಭಾಗವಹಿಸಿದ್ದರು.  | Kannada Prabha

ಸಾರಾಂಶ

ಹಕ್ಕುಪತ್ರ ವಿತರಣೆ ಸಂಬಂಧ ಸಹಾಯಕ ಆಯುಕ್ತರು, ಪಾಲಿಕೆ ಆಯುಕ್ತರು, ತಹಸೀಲ್ದಾರರು, ಸಹಾಯಕ ಕಾರ್ಯ ಪಾಲಕ ಅಭಿವೃದ್ಧಿ ಮಂಡಳಿ ಹಾಗೂ ಭೂಮಾಪನ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಸ್ಥಳ ಪರಿಶೀಲನೆ ಮಾಡಿದ್ದಾರೆ.

ಬಳ್ಳಾರಿ: ಇಲ್ಲಿನ ರಾಜೀವ್‌ ಗಾಂಧಿ ನಗರದ ನಿವಾಸಿಗಳಿಗೆ ಹಕ್ಕು ಪತ್ರ ವಿತರಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ಜರುಗಿತು.

ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್‌ ಸಂಖ್ಯೆ 34ರ ರಾಜೀವ್ ಗಾಂಧಿ ನಗರದ ನಿವಾಸಿಗಳು ಸುಮಾರು 60 ವರ್ಷಗಳಿಂದ ವಾಸವಾಗಿದ್ದು, ಹಕ್ಕುಪತ್ರ ವಿತರಣೆಗೆ ಹಲವು ಬಾರಿ ಮನವಿ ಮಾಡಿಕೊಂಡರೂ ಯಾವುದೇ ಪ್ರಯೋಜನವಾಗಿಲ್ಲ. ಇದೀಗ ಅನಿವಾರ್ಯವಾಗಿ ಹೋರಾಟದ ಹಾದಿ ಹಿಡಿಯಬೇಕಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.

ಹಕ್ಕುಪತ್ರ ವಿತರಣೆ ಸಂಬಂಧ ಸಹಾಯಕ ಆಯುಕ್ತರು, ಪಾಲಿಕೆ ಆಯುಕ್ತರು, ತಹಸೀಲ್ದಾರರು, ಸಹಾಯಕ ಕಾರ್ಯ ಪಾಲಕ ಅಭಿವೃದ್ಧಿ ಮಂಡಳಿ ಹಾಗೂ ಭೂಮಾಪನ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಸ್ಥಳ ಪರಿಶೀಲನೆ ಮಾಡಿದ್ದಾರೆ. ಅಧಿಕಾರಿಗಳು ನೀಡಿರುವ ವರದಿಯನ್ವ 2023ರ ಮಾರ್ಚ್ 15 ರಂದು ಜಿಲ್ಲಾಧಿಕಾರಿಗಳು ಅಂತಿಮ ಅಧಿಸೂಚನೆ ಹೊರಡಿಸಿದ್ದಾರೆ. ಉಪ ನಿರ್ದೇಶಕರು ಭೂ ದಾಖಲೆ ಆದೇಶದ ಮೇರೆಗೆ ಸಹಾಯಕ ನಿರ್ದೇಶಕರು ಭೂ ದಾಖಲೆ ಕಾರ್ಯಲಯದಿಂದ 2023ರಲ್ಲಿಯೇ ಕರ್ನಾಟಕ ಕೊಳಗೆರಿ ಅಭಿವೃದ್ಧಿ ಮಂಡಳಿಯವರಿಗೆ ಖಾತೆ ಬದಲಾವಣೆ ಹಾಗೂ ನಕ್ಷೆಯೂ ಆಗಿದೆ. ಕರ್ನಾಟಕ ಕೊಳಗೆರಿ ಅಭಿವೃದ್ಧಿ ಮಂಡಳಿ ಹೆಸರಿಗೆ ಆಸ್ತಿ ಘೊಷಣಾ ಪತ್ರ (PR CARD) ಸಹ ಆಗಿದೆ. ಇಷ್ಟಾಗಿಯೂ ಹಕ್ಕುಪತ್ರ ವಿತರಣೆ ಸಂಬಂಧ ಯಾವುದೇ ಕ್ರಮ ಈವರೆಗೆ ಕೈಗೊಂಡಿಲ್ಲ. ಹೀಗಾಗಿ ಮತ್ತೊಮ್ಮೆ ದಾಖಲೆಗಳನ್ನು ಕೂಲಂಕುಷವಾಗಿ ಪರಿಶೀಲಿಸಬೇಕು. ಹಕ್ಕುಪತ್ರ ವಿತರಣೆಗೆ ಕ್ರಮ ವಹಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಚಿತ್ರನಟ ಚೇತನ್, ಹಿರಿಯ ಲೆಕ್ಕಪರಿಶೋಧಕ ಸಿರಿಗೇರಿ ಪನ್ನರಾಜ್, ಕಟ್ಟೆಸ್ವಾಮಿ, ಆಮ್‌ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಜೆ.ವಿ. ಮಂಜುನಾಥ, ದಲಿತ ಸಂಘರ್ಷ ಸಮಿತಿಯ (ಮೂರ್ತಿ ಬಣ) ಜಿಲ್ಲಾಧ್ಯಕ್ಷ ಶ್ರೀನಿವಾಸ ಭಂಡಾರಿ, ಕರ್ನಾಟಕ ಏಕೀಕರಣ ಸಮಿತಿಯ ರಾಜ್ಯಾಧ್ಯಕ್ಷ ಪಿ.ಶೇಖರ್, ದಲಿತ ಸೇನೆಯ ಮುರಳಿ ಕೃಷ್ಣ, ಮಾನಪ್ಪ, ರತ್ನಯ್ಯ, ಕರ್ನಾಟಕ ರಕ್ಷಣಾ ವೇದಿಕೆಯ ಹನುಮೇಶ್ ಸೇರಿದಂತೆ ರಾಜೀವ್‌ಗಾಂಧಿ ನಗರ ನಿವಾಸಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಮುಖ್ಯಮಂತ್ರಿಗಳಿಗೆ ಬರೆದ ಮನವಿಪತ್ರ ಜಿಲ್ಲಾಡಳಿತಕ್ಕೆ ಸಲ್ಲಿಸಲಾಯಿತು. ಅಪರ ಜಿಲ್ಲಾಧಿಕಾರಿ ಮಹ್ಮದ್‌ ಜುಭೇರ್ ಸ್ವೀಕರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ