ಕನ್ನಡಪ್ರಭ ವಾರ್ತೆ ಬೆಳಗಾವಿ
ನಗರದ ಚನ್ನಮ್ಮ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಅಲ್ಲಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಅಧಿಕೃತ ದಾಖಲೆಗಳಿಲ್ಲದೇ, ಮಾನ್ಯತೆ ರದ್ದಾಗಿರುವ ವೀಸಾಗಳು ಹಾಗೂ ಅಮಾನತಿನಲ್ಲಿರುವ ವೀಸಾಗಳನ್ನು ಹೊಂದಿಕೊಂಡು ರಾಜ್ಯ ಮತ್ತು ಜಿಲ್ಲೆಯಲ್ಲಿ ಅಕ್ರಮವಾಗಿ ವಾಸಿಸಿರುವ ಪಾಕಿಸ್ತಾನ ಪ್ರಜೆಗಳನ್ನು ಗುರುತಿಸಬೇಕು.ಇದು ಅತ್ಯಂತ ಪ್ರಬಲವಾದ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವಿಚಾರವಾಗಿದೆ. ಹಾಗಾಗೀ ಅಂತಹ ವ್ಯಕ್ತಿಗಳನ್ನು ಪಟ್ಟಿಮಾಡಿ ಯಾವುದೇ ವಿಳಂಬ ಮಾಡದೇ ಈ ಕೂಡಲೇ ಕಾನೂನು ಬದ್ಧವಾದ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಕೇಂದ್ರ ಸರ್ಕಾರ ಪಾಕಿಸ್ತಾನ ಪ್ರಜೆಗಳನ್ನು ಅವರ ದೇಶಕ್ಕೆ ಮರಳಿಸುವಂತೆ ಆದೇಶ ಹೊರಡಿಸಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ. ಜಿಲ್ಲೆಯಲ್ಲಿರುವ ಪಾಕಿಸ್ತಾನ ಪ್ರಜೆಗಳನ್ನು ಹೊರಹಾಕಲು ಸರ್ಕಾರ ಹಿಂಜರಿಯುತ್ತಿದೆ. ಕೂಡಲೇ ಪಾಕ್ ಪ್ರಜೆಗಳನ್ನು ಗುರುತಿಸಿ, ಅವರ ದೇಶಕ್ಕೆ ಕಳುಹಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.