ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಪ್ರತಿಭಟನೆ

KannadaprabhaNewsNetwork |  
Published : Apr 11, 2026, 01:30 AM IST
ಪೊಟೋ: 10ಎಸ್‌ಎಂಜಿಕೆಪಿ03ಶಿವಮೊಗ್ಗದ ನಗರದ ಶಿವಪ್ಪ ನಾಯಕ ವೃತ್ತದಲ್ಲಿ ಕೇಂದ್ರ ಬಿಜೆಪಿ ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡದೇ ಯುವ ಜನತೆಗೆ ಅನ್ಯಾಯವೆಸಗುತ್ತಿರುವ ಕೇಂದ್ರ ಸರ್ಕಾರವನ್ನು ವಜಾಗೊಳಿಸಲು ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ.ವತಿಯಿಂದ ಪ್ರತಿಭಟನೆ ನಡೆಯಿತು. | Kannada Prabha

ಸಾರಾಂಶ

ಕೇಂದ್ರ ಬಿಜೆಪಿ ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡದೇ ಯುವ ಜನತೆಗೆ ಅನ್ಯಾಯವೆಸಗುತ್ತಿರುವ ಕೇಂದ್ರ ಸರ್ಕಾರವನ್ನು ವಜಾಗೊಳಿಸಲು ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ.ವತಿಯಿಂದ ನಗರದ ಶಿವಪ್ಪನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಕೇಂದ್ರ ಬಿಜೆಪಿ ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡದೇ ಯುವ ಜನತೆಗೆ ಅನ್ಯಾಯವೆಸಗುತ್ತಿರುವ ಕೇಂದ್ರ ಸರ್ಕಾರವನ್ನು ವಜಾಗೊಳಿಸಲು ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ.ವತಿಯಿಂದ ನಗರದ ಶಿವಪ್ಪನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕೇಂದ್ರ ಸರ್ಕಾರದಲ್ಲಿ ಹಲವಾರು ವರ್ಷಗಳಿಂದ ನೇಮಕಾತಿ ಕೈಗೊಳ್ಳದೇ 10 ಲಕ್ಷಕ್ಕೂ ಹೆಚ್ಚು ಹುದ್ದೆಗಳನ್ನು ಖಾಲಿ ಬಿಟ್ಟಿರುವ ಕೇಂದ್ರ ಸರ್ಕಾರದ ಕ್ರಮವನ್ನು ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ಖಂಡಿಸುತ್ತಿದೆ. ನರೇಂದ್ರ ಮೋದಿಯವರು ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭರವಸೆ ನೀಡಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದರು. ನರೇಂದ್ರ ಮೋದಿಯವರು ಮೂರನೇ ಬಾರಿ ಪ್ರಧಾನಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ, ಇದುವರೆಗೂ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುವುದರ ಬದಲಿಗೆ ಕೋಟ್ಯಂತರ ನಿರುದ್ಯೋಗಿಗಳನ್ನು ಸೃಷ್ಟಿಸುತ್ತಿದ್ದಾರೆ ಎಂದು ದೂರಿದರು.

ಭಾರತ ಅಭಿವೃದ್ಧಿ ಹೊಂದುತ್ತಿದೆ ಎಂದು ಘೋಷಣೆ ಮಾಡಲಾಗುತ್ತಿದೆ. ಆದರೆ, ದೇಶದ ಜನಸಂಖ್ಯೆಗೆ ತಕ್ಕಂತೆ ಉದ್ಯೋಗ ಭರ್ತಿ ಮಾಡಿಕೊಳ್ಳದೇ ಯುವಜನತೆಯ ಜೀವನದೊಂದಿಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ಹುದ್ದೆಗಳು ಖಾಲಿ ಇರುವುದರಿಂದ ಸಾರ್ವಜನಿಕರ ಕೆಲಸಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಲಕ್ಷಾಂತರ ಕೋಟಿಗಳ ಬಜೆಟ್ ಮಂಡಿಸುವ ಕೇಂದ್ರ ಸರ್ಕಾರ ನಿರುದ್ಯೋಗ ಸಮಸ್ಯೆಯನ್ನು ಮತ್ತಷ್ಟು ಉಲ್ಬಣ ಮಾಡುತ್ತಿದೆ. ಆದ್ದರಿಂದ ರಾಷ್ಟ್ರಪತಿಗಳು ಕೂಡಲೇ ಮಧ್ಯೆ ಪ್ರವೇಶಿಸಿ ಯುವಜನತೆಯ ವಿರೋಧಿ ಸರ್ಕಾರವನ್ನು ಕೂಡಲೇ ವಜಾಗೊಳಿಸಬೇಕು. ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಬೇಕು. ಔಟ್ ಸೋರ್ಸ್ ಪದ್ಧತಿಯನ್ನು ಕೈಬಿಟ್ಟು ಎಲ್ಲಾ ಇಲಾಖೆಗಳಲ್ಲಿ, ನಿಗಮಗಳಲ್ಲಿ ಖಾಯಂ ಹುದ್ದೆಗಳನ್ನು ನೇಮಕ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ವತಿಯಿಂದ ರಾಷ್ಟ್ರಪತಿಗಳಿಗೆ ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ಎನ್‌ಎಸ್‌ಯುಐ ಜಿಲ್ಲಾ ಅಧ್ಯಕ್ಷ ವಿಜಯ್, ಕಾರ್ಯಾಧ್ಯಕ್ಷ ರವಿ ಕಟಿಕೆರೆ, ನಗರಾಧ್ಯಕ್ಷ ರವಿಕುಮಾರ್, ಉಪಾಧ್ಯಕ್ಷ ಆದಿತ್ಯ ಸುಬಾನ್, ಪ್ರಧಾನ ಕಾರ್ಯದರ್ಶಿ ಚಂದ್ರೋಜಿ ರಾವ್, ವರುಣ್, ಅಭಿ ತಾಫಿಕ್ ಫರಾಜ್, ಶ್ರೀಕಾಂತ್, ಯೂಸುಫ್, ಅಭಿ, ಪ್ರಭು, ರಿಹಾನ್, ಸಾದ್ ಉಲ್ಲಾ, ಪವನಕುಮಾರ್, ಪ್ರಜ್ವಲ್, ಲೋಹಿತ್, ಸುಲ್ತಾನ, ಅಡೀಬ್, ಅಭಿ, ದೃಶ್ಯ, ಕಿಶನ್, ಚಂದನ್, ಉಮೇಶ್, ಅಂತೋನಿ, ನಾಗರಾಜ್ ಹಾಗೂ ಎನ್‌ಎಸ್‌ಯುಐನ ಹಲವಾರು ಪದಾಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಚ್ಚಮ್ಮ ದೇವಿಯ ವೈಭವದ ಮಹಾರಥೋತ್ಸವ
ಪೋಲಿಯೋ ನಿರ್ಮೂಲನೆಯಲ್ಲಿ ರೋಟರಿ ಪಾತ್ರ ಮಹತ್ವದ್ದು