ಕೃಷಿ ಭೂಮಿ ಸೇರಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

KannadaprabhaNewsNetwork |  
Published : Jul 13, 2024, 01:41 AM IST
ಆಗಿಲ್ಲ - ಆದಿವಾಸಿಗಳಿಗೆ ಕೃಷಿ ಭೂಮಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಪಿಐಎಂಎಲ್ ಪ್ರತಿಭಟನೆ | Kannada Prabha

ಸಾರಾಂಶ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭಾರತ ಕಮ್ಯುನಿಷ್ಟ್‌ (ಮಾರ್ಕ್ಸ್‌ವಾದಿ ಲೆನಿನ್ ವಾದಿ) ಮಾಸ್ ಲೈನ್ ಪಕ್ಷ ಕೊಡಗು ಜಿಲ್ಲಾ ಸಮಿತಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪದಾಧಿಕಾರಿಗಳು ಹಾಗೂ ನಿವೇಶನ ರಹಿತರು ಘೋಷಣೆಗಳನ್ನು ಕೂಗಿ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭಾರತ ಕಮ್ಯುನಿಷ್ಟ್‌ (ಮಾರ್ಕ್ಸ್‌ವಾದಿ ಲೆನಿನ್ ವಾದಿ) ಮಾಸ್ ಲೈನ್ ಪಕ್ಷ ಕೊಡಗು ಜಿಲ್ಲಾ ಸಮಿತಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪದಾಧಿಕಾರಿಗಳು ಹಾಗೂ ನಿವೇಶನ ರಹಿತರು ಘೋಷಣೆಗಳನ್ನು ಕೂಗಿ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.

ಸಿಪಿಐ(ಎಂಎಲ್)ನ ರಾಜ್ಯ ಸಮಿತಿ ಸದಸ್ಯ ಡಿ.ಎಸ್.ನಿರ್ವಾಣಪ್ಪ ಮಾತನಾಡಿ, ನಿವೇಶನ ರಹಿತ ಆದಿವಾಸಿಗಳನ್ನು ಲೈನ್ ಮನೆಯಿಂದ ಬಿಡುಗಡೆಗೊಳಿಸಿ ಸ್ವಂತ ಸೂರು ಮತ್ತು ಕೃಷಿ ಭೂಮಿ ನೀಡಬೇಕು, ಅಕ್ರಮ ಸಕ್ರಮ ಯೋಜನೆಡಿಯಲ್ಲಿ ಸಲ್ಲಿಸಿರುವ 50, 53, 57, 94ಸಿ

ಅರ್ಜಿಗಳನ್ನು ತಕ್ಷಣ ವಿಲೇವಾರಿ ಮಾಡಬೇಕು, ಉಳ್ಳವರಿಗೆ ಭೂಮಿ ಗುತ್ತಿಗೆ ನೀಡುವ ಆದೇಶ ರದ್ದುಗೊಳಿಸಬೇಕು, ಅಕ್ರಮ ಒತ್ತುವರಿ ಭೂಮಿ ತೆರವುಗೊಳಿಸಬೇಕು. ಪ್ರತಿ

ಗ್ರಾ.ಪಂ ವ್ಯಾಪ್ತಿಯಲ್ಲಿ ಬಡವರಿಗೆ ಹಾಗೂ ಆದಿವಾಸಿಗಳಿಗೆ ನೀವೇಶನ ಕಾಯ್ದಿರಿಸಬೇಕು, ಆರ್.ಟಿ.ಸಿ.ಯನ್ನು ಸರ್ಕಾರಿ ಪೈಸಾರಿ ಎಂದು ಮಾಡಿರುವುದನ್ನು ರದ್ದುಗೊಳಿಸಬೇಕು,

ನಾಗರಹೊಳೆ ಅರಣ್ಯದ ಮಧ್ಯ ಭಾಗದಲ್ಲಿರುವ ಆದಿವಾಸಿಗಳಿಗೆ ಅದೇ ಅರಣ್ಯದಂಚಿನಲ್ಲಿ ಪುನರ್ ವಸತಿ ಕಲ್ಪಿಸಬೇಕು, ಆದಿವಾಸಿ ಪಾರಂಪರಿಕ ಸಮುದಾಯ ಅರಣ್ಯ ಹಕ್ಕು ಕಾಯಿದೆ ತಕ್ಷಣ ಜಾರಿಗೆ ತರಬೇಕು, ನಿರುದ್ಯೋಗಿಗಳಿಗೆ ಅಂಬೇಡ್ಕರ್ ಅಭಿವೃದ್ಧಿ ನಿಗಮ, ವಾಲ್ಮೀಕಿ ಅಭಿವೃದ್ಧಿ ನಿಗಮದ ಮೂಲಕ ಹೆಚ್ಚಿನ ಸೌಲಭ್ಯಗಳನ್ನು ನೀಡಬೇಕು, ಆದಿವಾಸಿ ಪುನರ್ ವಸತಿ ಕೇಂದ್ರ ಬ್ಯಾಡಗೊಟ್ಟ ಹಾಗೂ ಬಸವನಳ್ಳಿಯಲ್ಲಿ ನಡೆದಿರುವ ಅಕ್ರಮ ಮತ್ತು ಅಪೂರ್ಣಗೊಂಡಿರುವ ಕಾಮಗಾರಿಯನ್ನು ತನಿಖೆಗೆ ಒಳಪಡಿಸಬೇಕೆಂದು ಆಗ್ರಹಿಸಿದರು.

ಪಕ್ಷದ ರಾಜ್ಯ ಸಮಿತಿ ಸದಸ್ಯ ಜೆ.ಎಂ.ಸುರೇಶ್, ಜಿಲ್ಲಾ ಕಾರ್ಯದರ್ಶಿ ವೈ.ಎಂ.ಸುರೇಶ್,

ಆದಿವಾಸಿಗಳಾದ ಎಚ್.ಜೆ.ಪ್ರಕಾಶ್, ವೈ.ಎಂ.ಮೋಹನ್, ರಾಧಾ, ನಳಿನಾಕ್ಷಿ, ಬಾಬು, ಮುತ್ತ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಕ್ರಮ ಡ್ರಗ್ಸ್‌ ವಾಸನೆ ತಡೆಗೆ ನಾಯಿಗಳ ಮಲಮೂತ್ರ!
ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಭರದ ಸಿದ್ಧತೆ